ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಹಾಗೂ ಮೆಟ್ರಿಕ್ ನಂತರದ ಹಾಗೂ ಉನ್ನತ ತರಗತಿ ವಿದ್ಯಾರ್ಥಿವೇತನಕ್ಕೆ ದಿನಾಂಕ : ೩೧-೧೦-೨೦೨೪ ಕೊನೆಯ ದಿನವಾಗಿದ್ದು, ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿಯನ್ನುhttps.scholarships.gov.in ವೆಬ್ಸೈಟ್ ನಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತ್ ಕಾರ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ ರವಿ ರಾಠೋಡ ಮೊ: ೯೦೦೩೫೫೫೩೩೭, ಇಂಡಿ ಪರಶುರಾಮ ಭೋಸಲೆ ಮೊ: ೯೯೭೨೪೪೧೪೬೪, ಸಿಂದಗಿ ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ ಎಸ್.ಡಿ.ಬಿರಾದಾರ ಮೊ: ೮೭೨೨೧೩೫೬೬೦ ಹಾಗೂ ಮುದ್ದೇಬಿಹಾಳ ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಹಾಗೂ ಕಚೇರಿ ದೂರವಾಣಿ : ೦೮೩೫೨-೭೯೬೦೬೦ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಸವಿತಾ ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
