ಕೆಂಭಾವಿ: ಯಾದಗಿರಿ, ಕಲಬುರ್ಗಿ, ರಾಯಚೂರು ಜಿಲ್ಲೆಗಳ ಜೀವನಾಡಿಯಾದ
ಸುರಪುರ ಮತಕ್ಷೇತ್ರದ ಹುಣಸಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ನಾರಾಯಣಪುರ ಜಲಾಶಯ ಬಸವಸಾಗರ ಭರ್ತಿಯಾಗಿದ್ದು, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಮಂಗಳವಾರ ಬಾಗಿನ ಅರ್ಪಿಸಿದರು.
ಇದೇ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಶರಣಬಸಪ್ಪಗೌಡ, ಪ್ರತಿ ವರ್ಷ ಜೂನ್ ತಿಂಗಳಲ್ಲಿ ಜಲಾಶಯ ಭರ್ತಿಯಾಗುತ್ತಿತ್ತು, ಆದರೆ ಈ ಬಾರಿ ಅಗಸ್ಟ್ ಮೊದಲ ವಾರದಲ್ಲಿ ಭರ್ತಿಯಾಗಿದ್ದು, ಕೃಷ್ಣಾ ಭಾಗ್ಯ ಜಲ ನಿಗಮದ ಅಚ್ಚುಕಟ್ಟು ಪ್ರದೇಶದ ಜಿಲ್ಲೆಯ ರೈತರಿಗೆ ವರದಾನವಾಗಿದೆ ಎಂದವರು, ಶೀಘ್ರದಲ್ಲೇ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿ ಆಲಮಟ್ಟಿ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಲಾಗುವುದು, ನಮ್ಮ ಸರ್ಕಾರ ರೈತರ ಹಿತಕಾಪಾಡಲು ಬದ್ದವಾಗಿದೆ. ನಾವು ನೀಡಿದ ಎಲ್ಲಾ ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಲು ಕ್ರಮವಹಿಸುವುದಾಗಿ ತಿಳಿಸಿದರು.
ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಜಿಲ್ಲಾಧಿಕಾರಿ ಡಾ ಸುಶೀಲ್ ಬಿ, ಶಂಕ್ರಣ್ಣ ವಣಿಕ್ಯಾಳ, ಡ್ಯಾಂ ಮುಖ್ಯ ಎಂಜಿನಿಯರ್, ಸೇರಿದಂತೆ ಕೃಷ್ಣಾ ಭಾಗ್ಯ ಜಲ ನಿಗಮದ ಪ್ರಮುಖ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

