ಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ತಾಲೂಕ ಸಾರ್ವಜನಿಕ ಆಸ್ಪತ್ರೆಯ ಎನ್.ಸಿ. ಡಿ ಘಟಕದಿಂದ ಪೌರಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ರಕ್ತದೊತ್ತಡ, ಮಧುಮೇಹ ಪರೀಕ್ಷೆ ಹಾಗೂ ಕ್ಯಾನ್ಸರ್ ಸ್ಕ್ರೀನಿಂಗ್ (ಅ ಸಾಂಕ್ರಾಮಿಕ ರೋಗಗಳ) ತಪಾಸನೆಯನ್ನು ನಡೆಸಲಾಯಿತು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಾತನಾಡಿ, ಪಟ್ಟಣದ ನೈರ್ಮಲ್ಯದ ಸ್ವಚ್ಛತೆಯಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಬೇಕು ಮತ್ತು ಪುರಸಭೆಯಿಂದ ನೀಡಲಾದ ಆರೋಗ್ಯ ಸುರಕ್ಷಾ ಕವಚಗಳನ್ನು ನಿತ್ಯ ಧರಿಸಿ ತಮ್ಮ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದರು.
ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಪ್ರತಿನಿತ್ಯ ರಸ್ತೆ, ಚರಂಡಿ ಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಅತಿ ಬೇಗ ರೋಗಗಳು ಕಾಣಿಸಿ ಕೊಳ್ಳುವ ಭೀತಿ ಇರುತ್ತದೆ. ತಂಬಾಕು, ಗುಟ್ಕಾ, ಬೀಡಿ, ಸಿಗರೇಟ್ಗಳ ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣ. ಪೌರಕಾರ್ಮಿಕರು ಇಂತಹ ವಸ್ತುಗಳಿಂದ ದೂರ ಇರಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಆಸಕ್ತಿ ತೋರಬೇಕು. ಯಾವುದೇ ಕಾರಣಕ್ಕೂ ಸಹ ಪೌರ ಕಾರ್ಮಿಕರು ರಕ್ಷಣೆಯ ಪರಿಕರಣಗಳಿಲ್ಲದೆ ತ್ಯಾಜ್ಯವನ್ನು ಮುಟ್ಟುವ ಕಾರ್ಯದಲ್ಲಿ ತೊಡಗಬಾರದು ಎಂದರು.
ಶಿಬಿರದಲ್ಲಿ ಪೌರಕಾರ್ಮಿಕರ ಮಧುಮೇಹ ಪರೀಕ್ಷೆ ಹಾಗೂ ರಕ್ತದೊತ್ತಡ ಮತ್ತು ಓರಲ್ ಕ್ಯಾನ್ಸರ್ ಸ್ಕ್ರೀನಿಂಗ್, ಅ ಸಂಕ್ರಾಮಿಕ ರೋಗಗಳ ಪರೀಕ್ಷೆ ಮಾಡಲಾಯಿತು. ತಾಲೂಕ ಆಸ್ಪತ್ರೆಯ ಎನ್.ಸಿ.ಡಿ ಘಟಕದ ವೈದ್ಯ ಹೀರಾಲಾಲ್ ಚವ್ಹಾಣ, ಆಪ್ತ ಸಮಾಲೋಚಕ ಎಂ.ಎಸ್.ಅಂಬಿಗೇರ, ಪುರಸಭೆಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹಾಂತೇಶ ಕಟ್ಟಿಮನಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

