ವಿಜಯಪುರ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯ ಸದೃಢ ಮನಸ್ಸು ವಿಕಸಕ್ಕೆ ಕ್ರೀಡೆಗಳು ಸಹಕಾರಿ ಎಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ರಾಜಶೇಖರ ರಾಠೋಡರವರು ಹೇಳಿದರು.
ಬುಧವಾರದಂದು ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ನಡೆದ ವಿಜಯಪುರ ನಗರ ಸಿದ್ದೇಶ್ವರ ‘ಬಿ’ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಬಾಲಕ ಹಾಗೂ ಬಾಲಕಿಯರ ಖೋ ಖೋ ಮತ್ತು ಕಬಡ್ಡಿ ಸ್ಪರ್ಧೆಗಳಲ್ಲಿ ವಿಜಯಶಾಲಿಗಳಾಗಿ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು. ಮಕ್ಕಳ ಆಸಕ್ತಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು. ನಮ್ಮ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ತುಂಬಾ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳಿಗೆ ಪಾಠದೊಂದಿಗೆ ಕ್ರೀಡೆಗಳು ಮುಖ್ಯವೆಂದು ಹೇಳಿದರು.
ಈ ವೇಳೆ ತಾಲೂಕಾ ಕ್ರೀಡಾಧಿಕಾರಿ ಎಸ್.ಜೆ. ಬಿರಾದಾರರವರು ಮಾತನಾಡುತ್ತ, ಮಕ್ಕಳು ಸೋಲು-ಗೆಲುವನ್ನು ಬದಿಗಿಟ್ಟು ಕ್ರೀಡಾ ಮನೋಭಾವನೆಯಿಂದ ಪಾಲ್ಗೊಳ್ಳಬೇಕು. ಕ್ರೀಡಾಸಕ್ತಿ ಜೀವನದ ದಿಕ್ಕನ್ನೇ ಬದಲಾಯಿಸಬಹುದು. ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗವಹಿಸಬೇಕು. ವಿದ್ಯಾರ್ಥಿಗಳು ಸೋಲನ್ನು ಸಹ ಗೆಲುವಿನಂತೆ ಸ್ವೀಕರಿಸಿದಾಗ ಕ್ರೀಡಾ ಸಾಧಕರಾಗಿ ಮೂಡಿ ಬರಬಹುದೆಂದು ಎಂದು ಹೇಳಿದರು.
ಈ ಸ್ಪರ್ಧೆಯಲ್ಲಿ ಬಾಲಕರ ಖೋ ಖೋ ದಲ್ಲಿ ಬಂಜಾರಾ ಆಂಗ್ಲ ಮಾಧ್ಯಮ ಶಾಲೆ ಪ್ರಥಮ, ಬಾಲಕಿಯರ ಖೋ ಖೋ ದಲ್ಲಿ ವಿದ್ಯಾ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ, ಬಾಲಕರ ಕಬಡ್ಡಿಯಲ್ಲಿ ಅಭಿನವ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಹಾಗೂ ಬಾಲಕಿಯರ ಕಬಡ್ಡಿಯಲ್ಲಿ ರವೀಂದ್ರನಾಥ ಟ್ಯಾಗೋರ ಪ್ರಥಮ ಸ್ಥಾನವನ್ನು ಪಡೆದು ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದರು.
ಈ ಸಂದರ್ಭದಲ್ಲಿ ಸಿಆರ್ಸಿ ಎ.ಬಿ.ಬಿರಾದಾರ, ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿ, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸಂದೀಪ ರಾಠೋಡ, ಪ್ರಾಥಮಿಕ ಶಾಲೆಯ ಮುಖ್ಯ ಗುರು ಎಂ.ಬಿ.ಪೂಜಾರಿ, ಡಿಗ್ರಿ ಕಾಲೇಜ ಪ್ರಾಚಾರ್ಯ ಪಿಯು ಕಾಲೇಜು ಪ್ರಾಧ್ಯಾಪಕರಾದ ಎ.ಪಿ.ಬಿರಾದಾರ, ಎಂ.ಎಸ್.ನಿಂಬರಗಿ, ಎಸ್.ಎಸ್.ತೆನಳ್ಳಿ, ದೈಹಿಕ ಶಿಕ್ಷಕರುಗಳಾದ ಸೋಮಶೇಖರ ರಾಠೋಡ, ಎಸ್.ಎಲ್.ದೊಡಮನಿ, ಮೋಹನ ನಾಯಕ ಹಾಗೂ ಬಿಪಿಎಡ್ ಪ್ರಶಿಕ್ಷಣಾರ್ಥಿಗಳು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

