ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ
ಸಿಂದಗಿ: ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದಾನ ಮಾಡಿದರಷ್ಟೆ ರಕ್ತದ ಉತ್ಪಾದನೆ ಸಾಧ್ಯ ಎಂದು ಜಮಖಂಡಿಯ ಕೊಣ್ಣೂರಿನ ಹೊರಗಿನ ಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ, ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಆಶ್ರಯದಲ್ಲಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ಜನ್ಮದಿನದ ಪ್ರಯುಕ್ತ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜ, ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಕಾಲೇಜ ಶ್ರೀಪದ್ಮರಾಜ ಮಹಿಳಾ ಪಪೂ ಹಾಗೂ ಪದವಿ ಕಾಲೇಜ, ಶ್ರೀಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ವಿಜಯಪುರದ ಶ್ರೀ ಬಿ.ಎಂಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಾನಗಳಲ್ಲಿ ರಕ್ತದಾನ ಮಹಾದಾನ. ಆನರ ಜೀವ ರಕ್ಷಣೆಗೆ ರಕ್ತ ಅತ್ಯಗತ್ಯವಾಗಿದ್ದು, ರಕ್ತದ ಅವಶ್ಯಕತೆಯಿರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮುಖಾಂತರ ಎಲ್ಲರೂ ಜನರ ಅಮೂಲ್ಯವಾದ ಜೀವ ಸಂರಕ್ಷಣೆಗೆ ಮುಂದಾಗಬೇಕು ಎಂದರು.
ಈ ವೇಳೆ ಸ್ವಯಂ ಪ್ರೇರಿತರಾಗಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶಿಬಿರದಲ್ಲಿ ೭೦ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು. ರಕ್ತದಾನ ಶಿಬಿರ ಮತ್ತು ಸಸಿ ನಡುವ ಮೂಲಕ ಪೂಜ್ಯರು ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು.
ಶಿಬಿರದಲ್ಲಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಡಾ.ವಿಜಯಕುಮಾರ ವಾರದ, ಅಶೋಕ ವಾರದ, ಗಂಗಾಧರ ಜೋಗುರ, ಡಾ.ಬಿ.ಜಿ.ಮಠ, ಅಶೋಕ ಮಸಳಿ, ಡಾ.ರವಿ ಗೋಲಾ, ಡಾ.ಶರಣಬಸವ ಜೋಗುರ, ಡಾ.ಮಹಾಂತೇಶ ಹಿರೇಮಠ, ಚಂದ್ರಶೇಖರ ನಾಗೂರ, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ವಿರೇಶ ಜೋಗುರ, ಶಿವಕುಮಾರ ಜೋಗುರ, ಚನ್ನು ಕತ್ತಿ, ಸೇರಿದಂತೆ ಆಡಳಿತ ಮಂಡಳಿ ನಿರ್ದೇಶಕರು, ವಿವಿಧ ಅಂಗ ಸಂಸ್ಥೆಗಳ ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಶ್ರೀಮಠದ ಭಕ್ತರು ಶಿಬಿರದಲ್ಲಿ ಭಾಗವಹಿಸಿದ್ದರು.

