ಚಡಚಣ: ೧೯೬೯ರಲ್ಲಿ ಸ್ಥಾಪನೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ(ಇಸ್ರೋ) ೫೫ ವರ್ಷಗಳಿಂದ ಬಾಹ್ಯಾಕಾಶ ಸಂಶೋಧನೆಯಲ್ಲಿ ಅಗಾಧ ಸಾಧನೆ ಮೆರೆದಿದೆ. ಹಲವು ಉಪಗ್ರಹಗಳ ಮೂಲಕ ಭಾರತದ ಅಭಿವೃದ್ಧಿಯಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಜತೆಗೆ ಬಾಹ್ಯಾಕಾಶ ಸಾಧನೆಗಳ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ ಎಂದು ರೇವತಗಾಂವ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಆರ್.ಎಚ್.ನದಾಫ್ರವರು ಹೇಳಿದರು.
ಶುಕ್ರವಾರದಂದು ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಬಾಹ್ಯಾಕಾಶ ದಿನ”ದ ಅಂಗವಾಗಿ ಮಾತನಾಡಿದ ಅವರು. ಭಾರತದ ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-೩ ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಅ.೨೩ ರಂದು ಚಂದ್ರಯಾನ-೩ ಮಿಷನ್ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು. ಈ ಸ್ಥಳಕ್ಕೆ ತಲುಪಿದ ಮೊದಲ ರಾಷ್ಟ್ರ ಭಾರತವಾಯಿತು. ಈ ಸಂಭ್ರಮವನ್ನು ಸದಾ ಸ್ಮರಣೀಯಗೊಳಿಸಲು ಭಾರತ ಸರಕಾರವು ಪ್ರಸಕ್ತ ವರ್ಷದಿಂದ ಅಗಸ್ಟ್ ೨೩ ರಂದು “ರಾಷ್ಟ್ರೀಯ ಬಾಹ್ಯಾಕಾಶ ದಿನ” ಎಂದು ಆಚರಿಸಲು ಮುಂದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಗುರುಮಾತೆಯವರಾದ ಎಂ.ಎಸ್.ಪಾಟೀಲರವರು ಮಾತನಾಡುತ್ತ. ಕಳೆದ ವರ್ಷ ಅಗಸ್ಟ್ ೨೩ ರಂದು ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-೩ ಯೋಜನೆ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿನ ‘ಶಿವ ಶಕ್ತ’ ಬಿಂದುವಿನಲ್ಲಿ ಇಳಿದ ಸಾಧನೆಯನ್ನು ಸ್ಮರಿಸಲು ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ. ಬಾಹ್ಯಾಕಾಶ ಅನ್ವೇಷಣೆಗೆ ಸಂಬಂಧಿಸಿದಂತೆ ಭಾರತದ ಮಹತ್ವದ ಸಾಧನೆಗಳನ್ನು ಸ್ಮರಿಸುವುದು, ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಆಧುನಿಕತೆಯನ್ನು ಪ್ರದರ್ಶಿಸುವುದು ಮತ್ತು ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶ ವಿಜ್ಞಾನದ ಕುರಿತು ಆಸಕ್ತಿ ಮೂಡಿಸುವುದು ಈ ಆಚರಣೆಯ ಉದ್ದೇಶವಾಗಿದೆ. ಅದರೊಡನೆ, ಸಾರ್ವಜನಿಕರಲ್ಲಿ ರಾಷ್ಟ್ರೀಯ ಹೆಮ್ಮೆ ಮತ್ತು ಐಕ್ಯತೆಯ ಭಾವವನ್ನು ಮೂಡಿಸಿ, ಅವರಲ್ಲಿ ಬಾಹ್ಯಾಕಾಶ ಅನ್ವೇಷಣೆಯ ಪ್ರಯೋಜನಗಳ ಕುರಿತು ಅರಿವು ಮೂಡಿಸುವುದು ಇದರ ಗುರುಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚಂದ್ರಯಾನ-೩ ಹಾಗೂ ಬಾಹ್ಯಾಕಾಶದ ಚಿತ್ರಕಲೆ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಶಿಕ್ಷಕರುಗಳಾದ ಆರ್.ಎಂ.ಚೋಪಡೆ, ಎಂ.ಎನ್.ಹೋಕಳೆ, ಡಿ.ಜಿ.ಭಂಢರಕೋಟೆ, ಎಂ.ಸಿ.ಮಾಳಾಬಗಿ, ರಮೇಶ ತಳಕೇರಿ, ಪ್ರಶಾಂತ ಐಹೋಳ್ಳಿ, ಎಸ್.ಎ.ಕುಂಬಾರ, ಅಶ್ವಿನಿ ಹಾವಿನಾಳ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

