Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾಸ್ಪತ್ರೆ & ವಸತಿ ನಿಲಯಗಳಿಗೆ ಉಪಲೋಕಾಯುಕ್ತರ ಭೇಟಿ
(ರಾಜ್ಯ ) ಜಿಲ್ಲೆ

ಜಿಲ್ಲಾಸ್ಪತ್ರೆ & ವಸತಿ ನಿಲಯಗಳಿಗೆ ಉಪಲೋಕಾಯುಕ್ತರ ಭೇಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಜಿಲ್ಲಾಸ್ಪತ್ರೆಗೆ ದಿಡೀರ್ ಭೇಟಿ ನೀಡುವ ಮೂಲಕ ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲಿಸಿದರು.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಗಳಿಂದ ಅಲ್ಲಿನ ವ್ಯವಸ್ಥೆ ಕುರಿತು ವಿಚಾರಿಸಿದಾಗ, ಇಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದ್ದು, ಸರಿಯಾದ ಸಮಯಕ್ಕೆ ವೈದ್ಯರು ತಪಾಸಣೆ ಮಾಡಿ ಅಗತ್ಯ ಸಲಹೆ ಸೂಚನೆ ನೀಡುವ ಮೂಲಕ ಔಷಧೋಪಾಚಾರ, ನಿಗದಿತ ಸಮಯದಂತೆ ಆಸ್ಪತ್ರೆಯಿಂದ ಆಹಾರ ಒದಗಿಸುತ್ತಾರೆ ಎಂದು ಮಾಹಿತಿ ನೀಡಿದರು.
ಆಸ್ಪತ್ರೆಯ ಪ್ರತಿ ಹಂತದ ವಾರ್ಡ್ಗಳಲ್ಲಿಯೂ ದಾಖಲಾಗಿರುವ ರೋಗಿ ಹಾಗೂ ಅವರ ಸಂಬಂಧಿಕರ ಆರೋಗ್ಯ ವಿಚಾರಿಸುತ್ತಾ,ಅಲ್ಲಿನ ಹೊರ ರೋಗಿಗಳ ವಿಭಾಗ, ಕಣ್ಣಿನ ವಿಭಾಗ, ಮಕ್ಕಳ ಒಳರೋಗಿ ಚಿಕಿತ್ಸಾ ವಿಭಾಗ ಪರಿಶೀಲನೆ ನಡೆಸಿ ಉತ್ತಮ ಚಿಕಿತ್ಸೆ, ಔಷಧ ಅಗತ್ಯ ಸೌಲಭ್ಯ ಒದಗಿಸುತ್ತಿರುವ ಬಗ್ಗೆ ಮಾಹಿತಿ ಮಾಹಿತಿ ಕ್ರೋಡಿಕರಿಸಿದರು.
ಡೆಂಗ್ಯೂ ವಾರ್ಡ್ಗೆ ಭೇಟಿ ನೀಡಿ ಅಲ್ಲಿ ಒದಗಿಸಲಾಗಿತ್ತಿರುವ ಚಿಕಿತ್ಸಾ ಸೌಕರ್ಯಗಳ ಬಗ್ಗೆ, ಚಿಕ್ಕಮಕ್ಕಳ ತೀವ್ರ ನಿಗಾ ಘಟಕಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಸಲಾಗುತ್ತಿರುವ ಆಹಾರದ ಗುಣಮಟ್ಟ ಪರೀಕ್ಷಿಸಿ ಯಾವುದೇ ಲೋಪವಾಗದಂತೆ ಮಕ್ಕಳ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಹೇಳಿದರು. ಆಸ್ಪತ್ರೆಯಲ್ಲಿರುವ ಸಿಟಿ ಸ್ಕ್ಯಾನ್ ವಿಭಾಗಕ್ಕೆ ತೆರಳಿ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಅದಲ್ಲದೆ ತಾಯಿಮಕ್ಕಳ ವಿಭಾಗ, ವಿಶೇಷ ನವಜಾತ ಶಿಶು ಆರೈಕೆ ಘಟಕ, ಪ್ರಸೂತಿ ಅವಲಂಬನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉಪ ಲೋಕಾಯುಕ್ತ ತಂಡದ ಇತರ ಸದಸ್ಯರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿ ಕುರಿತು ಉಪ ಲೋಕಾಯುಕ್ತರಿಗೆ ವರದಿ ನೀಡಿದರು.
ಆಸ್ಪತ್ರೆಯ ಸ್ವಚ್ಚತೆ ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆಗೆ ಆಧ್ಯತೆ ನೀಡುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ ಅವರಿಗೆ ಸೂಚಿಸಿದರು.
ಉಪಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಅರಕೇರಿ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.
ಅಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದುಕೊಂಡ ಅವರು ಊಟದ ಕೋಣೆ, ಅಡುಗೆ ಕೋಣೆಯನ್ನು ಪರಿಶೀಲಿಸಿ ಸ್ವಚ್ಚತೆಗೆ ಆಧ್ಯತೆ ನೀಡಿ ಗುಣಮಟ್ಟದ ಆಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶೌಚಾಲಯಗಳ ಸ್ವಚ್ಚತೆ, ಶುದ್ಧ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಬೆಡ್, ಹಾಸಿಗೆಗಳನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಹದಿನೈದು ದಿನಗಳ ಕಾಲ ಮಿತಿಯೊಳಗೆ ಇಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ನಗರದ ಅಡವಿ ಶಂಕರಲಿಂಗ ದೇವಸ್ಥಾನದ ಹತ್ತಿರ ಇರುವ ಮೆಟ್ರಿಕ್ ನಂತರದ ಬಾಲಕಿಯರ ಇಂಜನೀಯರ್ ಮತ್ತು ಮೆಡಿಕಲ್ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಊಟದ ಕೋಣೆಯನ್ನು ಪರಿಶೀಲಿಸಿದ ಉಪಲೋಕಾಯುಕ್ತರು, ಅಡುಗೆಗೆ ಬಳಸುವ ಸಾಮಗ್ರಿಗಳ, ಆಹಾರದ ಗುಣಮಟ್ಟದ ಬಗ್ಗೆ ಅಡುಗೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಕೇವಲ ಸಂಬಳಕ್ಕಾಗಿ ಕೆಲಸ ಮಾಡದೇ ಇದು ಸ್ವತಃ ತಮ್ಮದೇ ಮನೆಯೆಂದು ತಿಳಿದು ಅಡುಗೆ ಕೋಣೆಯ ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಹೇಳಿ ಸಿಬ್ಬಂದಿಯ ಹಾಜರಾತಿ ದಾಖಲೆ ಹಾಗೂ ಸಂಬಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹಿರಿಯ ಸಿವ್ಹಿಲ್ ನ್ಯಾಯಾಧೀಶರಾ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್.ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಜಿಲ್ಲಾ ಲೋಕಾಯುಕ್ತ ಅಧಿಕ್ಷಕರಾದ ಟಿ.ಮಲ್ಲೇಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಈರಣ್ಣ ಆಶಾಪೂರ ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಡಿವೈಎಸ್‌ಪಿ ಸುರೇಶ ರೆಡ್ಡಿ, ಇನಸ್ಪೆಕ್ಟರ್ ಆನಂದ ಟಕ್ಕಣ್ಣವರ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.