ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ (ಬಸವೇಶ್ವರ) ಜಾತ್ರೆಯ ದಾಸೋಹಕ್ಕೆ ಮಹಿಳೆಯರು ತಮ್ಮ ಮನೆಯಲ್ಲಿ ಮಾಡಿದ ರೊಟ್ಟಿಗಳನ್ನು ಬುಟ್ಟಿಯಲ್ಲಿ ಇಟ್ಟು ಜಿಟಿ ಜಿಟಿ ಮಳೆಯನ್ನು ಲೆಕ್ಕಿಸದೇ ಶನಿವಾರ ಸಂಜೆ ವಿರಕ್ತಮಠದಿಂದ ಮೆರವಣಿಗೆ ಮೂಲಕ ದೇವಸ್ಥಾನದ ದಾಸೋಹ ಭವನಕ್ಕೆ ತಲುಪಿಸಿದರು.
ಸ್ಥಳೀಯ ವಿರಕ್ತಮಠದಲ್ಲಿ ಬಸವಣ್ಣನವರ ಭಾವಚಿತ್ರ ಹಾಗೂ ರೊಟ್ಟಿಯ ಬುಟ್ಟಿಗಳಿಗೆ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಮಹಿಳೆಯರು ರೊಟ್ಟಿಯ ಬುಟ್ಟಿಯನ್ನು ತಲೆಯಮೇಲೆ ಹೊತ್ತುಕೊಂಡು ಬಸವಜನ್ಮ ಸ್ಮಾರಕ, ಪಲ್ಲೇದ ಕಟ್ದೆ, ಅಗಸಿ, ಬಸವೇಶ್ವರ ವೃತ್ತದ ಮಾರ್ಗವಾಗಿ ದೇವಸ್ಥಾನಕ್ಕೆ ತೆರಳಿದರು.
ಪಟ್ಟಣದ ವಿವಿಧ ಗಲ್ಲಿಯ ಮಹಿಳೆಯರು ಮೂರು ಸಾವಿರಕ್ಕಿಂತ ಹೆಚ್ಚು ರೊಟ್ಟಿಗಳನ್ನು ಹಾಗೂ ತಾಳಿಕೋಟೆ ತಾಲೂಕಿನ ಹಗರಗುಂಡ ಎಲ್.ಟಿ ಯ ಸುರೇಶ ರಾಠೋಡ ಅವರು ಟ್ರ್ಯಾಕ್ಟರ ಮೂಲಕ ಎರಡು ಸಾವಿರ ರೊಟ್ಟಿಗಳನ್ನು ದಾಸೋಹ ಭವನಕ್ಕೆ ತಲುಪಿಸಿದರು.
ಜಾತ್ರೆಗೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಜಾತ್ರೆಯಲ್ಲಿ ನಿರಂತರವಾಗಿ ದಾಸೋಹ ನಡೆಯುತ್ತದೆ. ಪಟ್ಟಣದ ವಿವಿಧ ಬಡಾವಣೆಗಳ ಮಹಿಳೆಯರು ತಮ್ಮ ಮನೆಯಲ್ಲಿ ಮಾಡಿದ ರೊಟ್ಟಿಗಳನ್ನು ದಾಸೋಹಕ್ಕೆ ನೀಡುತ್ತಿರುವುದು ವಿಶೇಷ. ಇಂತಹ ಕಾರ್ಯಗಳು ಇತರರಿಗೆ ಮಾದರಿಯಾಗಲಿದೆ. ಜಾತ್ರೆಯ ಮೆರಗನ್ನು ಹೆಚ್ಚಿಸಲಿದೆ ಎಂದು ಶ್ರೀಗಳು ತಿಳಿಸಿದರು.
ಮೆರವಣಿಗೆಯಲ್ಲಿ ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಗುರುಲಿಂಗ ಬಸರಕೋಡ, ಮುಖಂಡರಾದ ಬಸವರಾಜ ಹಾರಿವಾಳ, ಬಸವರಾಜ ಗೊಳಸಂಗಿ, ಅನಿಲ ಅಗರವಾಲ, ಶೇಖರ ಗೊಳಸಂಗಿ, ಎಂ.ಜಿ.ಆದಿಗೊಂಡ, ಸಂಗಮೇಶ ಓಲೇಕಾರ, ಬಾಬುಗೌಡ ಪಾಟೀಲ, ಶ್ರೀಕಾಂತ ಪಟ್ಡಣಶೆಟ್ಟಿ, ಎಸ್.ಎಸ್.ಝಳಕಿ, ಎಚ್.ಎಸ್.ಬಿರಾದಾರ, ರಾಯಣ್ಣ ಮಸಬಿನಾಳ, ಮಲ್ಲಿಕಾರ್ಜುನ ಪಡಶೆಟ್ಟಿ, ಚಂದ್ರಶೇಖರಗೌಡ ಪಾಟೀಲ, ಎಂ.ಬಿ.ತೋಟದ, ಪ್ರಭಾಕರ ಖೇಡದ, ಕೊಟ್ರೇಶಿ ಹೆಗ್ಡಾಳ, ಮಹಾದೇವಿ ಬಿರಾದಾರ, ಲಲಿತಾ ಗಬ್ಬೂರ, ಪುಷ್ಪಾ ಸಂಗಮ, ಮಹಾದೇವಿ ಪಡಶೆಟ್ಟಿ, ಶಾಂತಾಬಾಯಿ ಕುಂಬಾರ ಸೇರಿದಂತೆ ಇತರರು ಭಾಗವಹಿಸಿದ್ದರು. ರೊಟ್ಟಿ ಸೇವೆ ನೀಡಿದ ಮಹಿಳೆಯರಿಗೆ ದೇವಸ್ಥಾನದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
Subscribe to Updates
Get the latest creative news from FooBar about art, design and business.
Related Posts
Add A Comment

