ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯ ೧೩ ಗ್ರಾಮ ಪಂಚಾಯತಿಗಳಲ್ಲಿ ಸೆ.೬ ರಂದು ಬೆಳಿಗೆ ೧೧ ಗಂಟೆಗೆ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ.
ಸೆ.೬ರಂದು ಬೆಳಗ್ಗೆ ೧೧ ಗಂಟೆಗೆ ವಿಜಯಪುರ ಉಪವಿಭಾಗಾಧಿಕಾರಿಗಳು ಕುಬಕಡ್ಡಿ ಗ್ರಾಮ ಚಾವಡಿಯಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಆಲಮೇಲ ತಹಶೀಲ್ದಾರ ಕಾರ್ಯಾಲಯ ಸಭಾ ಭವನದಲ್ಲಿ, ವಿಜಯಪುರದ ಗ್ರೇಡ್-೨ ತಹಶೀಲ್ದಾರ ಅವರು ವಿಜಯಪುರದ ಢೋಬಳೆ ಗಲ್ಲಿಯ ಶ್ರೀ ಈಶ್ವರ ಮಂದಿರ ಸಾಂಸ್ಕೃತಿಕ ಭವನದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಇಟ್ಟಂಗಿಹಾಳ ಶ್ರೀ ಅಮೋಘ ಸಿದ್ದೇಶ್ವರ ಕಟ್ಟಡದಲ್ಲಿ, ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ್ ಅವರು ಕಾರಜೋಳ ಗ್ರಾಮ ಪಂಚಾಯತಿಯಲ್ಲಿ, ಬಸವನಬಾಗೇವಾಡಿ ಗ್ರೇಡ್-೨ ತಹಶೀಲ್ದಾರ ಅವರು ಹಂಗರಗಿ ಹನುಮಾನ ದೇವಸ್ಥಾನದಲ್ಲಿ, ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ವಡವಡಗಿ ಮಾರುತೇಶ್ವರ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಮುದ್ದೇಬಿಹಾಳ ಗ್ರೇಡ್ ೨ ತಹಶೀಲ್ದಾರ ಅವರು ಗುಂಡಕರ್ಜಗಿ ಬಸವೇಶ್ವರ ದೇವಸ್ಥಾನದಲ್ಲಿ, ತಾಳಿಕೋಟೆ ತಹಶೀಲ್ದಾರ್ ಅವರು ಫತ್ತೇಪೂರ ಶ್ರೀ ಮಾರುತಿ ದೇವಸ್ಥಾನದಲ್ಲಿ, ಇಂಡಿ ಗ್ರೇಡ್ ೨ ತಹಶೀಲ್ದಾರ್ ಅವರು ಅಹಿರಸಂಗ ಗ್ರಾಮ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ, ಚಡಚಣ ಗ್ರೇಡ್ ೨ ತಹಶೀಲ್ದಾರ್ ಅವರು ಚಣೇಗಾಂವ ಕೌದೇಶ್ವರ ಮಠದಲ್ಲಿ, ಸಿಂದಗಿಯ ಗ್ರೇಡ್ ೨ ತಹಶೀಲ್ದಾರ ಅವರು ಬೆನಕೂಟಗಿ ಎಲ್.ಟಿ.ಯ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ದೇವರ ಹಿಪ್ಪರಗಿ ಗ್ರೇಡ್ ೨ ತಹಶೀಲ್ದಾರ ಅವರು ಇಬ್ರಾಹಿಂಪೂರದ ಶ್ರೀ ಹನುಮಾನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಸಾಮಾಜಿಕ ಭದ್ರತೆ ಯೋಜನೆಯಡಿ ವಿವಿಧ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮೂಲಕ ಪಿಂಚಣಿ ಪಾವತಿಸಲಾಗುತ್ತಿದ್ದು, ಪಿಂಚಣಿ ಅದಾಲತ್ ನಡೆಯುವ ಗ್ರಾಮಗಳಲ್ಲಿ ಫಲಾನುಭವಿಗಳಿಗೆ ಎನ್ಪಿಸಿಆಯ್ ಮ್ಯಾಪಿಂ ಕಾರ್ಯವನ್ನು ಸಂಬಂಧಿಸಿದ ಬ್ಯಾಂಕ್-ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ಮಾಡಿಸುವಂತೆ ಸೂಚಿಸಲಾಗಿದೆ.
ಈ ದಿನದಂದು ಸಂಬಂಧಿಸಿದ ಗ್ರಾಮ ಪಂಚಾಯತಿ ಸಂಪೂರ್ಣ ಪಿಂಚಣಿ ದಾರರ ಮಾಹಿತಿಯೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು, ಪಂಚಾಯತ್ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಅಂಚೆ ಕಚೇರಿಯ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
