Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂಲನಂದೀಶ್ವರ ಜಾತ್ರಾಮಹೋತ್ಸವದ ಪಲ್ಲಕ್ಕಿ ಉತ್ಸವ ಸಂಪನ್ನ
(ರಾಜ್ಯ ) ಜಿಲ್ಲೆ

ಮೂಲನಂದೀಶ್ವರ ಜಾತ್ರಾಮಹೋತ್ಸವದ ಪಲ್ಲಕ್ಕಿ ಉತ್ಸವ ಸಂಪನ್ನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ತೆರಳಿದ್ದ ಅಲಂಕೃತ ಮೂಲನಂದೀಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಭಕ್ತರ ಜಯಘೋಷ, ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರ ಹೇಳಿಕೆ ನುಡಿದ ನಂತರ ದೇವಸ್ಥಾನದಲ್ಲಿರುವ ಬೆಳ್ಳಿ ಪಲ್ಲಕ್ಕಿ ಇಡುವ ಕಟ್ಟೆಗೆ ಮರಳುವ ಮೂಲಕ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿತ್ತು.
ಪಟ್ಟಣದಿಂದ ಸುಮಾರು ೫ ಕಿಮೀ ಅಂತರದಲ್ಲಿರುವ ಐತಿಹಾಸಿಕ ಹೋರಿಮಟ್ಟಿ ಗುಡ್ಡಕ್ಕೆ ಸೋಮವಾರ ತೆರಳಿದ್ದ ಮೂಲನಂದೀಶ್ವರ(ಬಸವೇಶ್ವರ) ದೇವರ ಅಲಂಕೃತ ಬೆಳ್ಳಿ ಪಲ್ಲಕ್ಕಿ ಉತ್ಸವ ಸಂಜೆ ಆಕರ್ಷಕ ಸಿಡಿಮದ್ದು, ವಿವಿಧ ಕಲಾ ತಂಡಗಳ ಮೆರವಣಿಗೆ, ವಿವಿಧ ವಾದ್ಯಮೇಳದೊಂದಿಗೆ ಭಕ್ತರ ಜಯಘೋಷದೊಂದಿಗೆ ಪುರ ಪ್ರವೇಶ ಮಾಡಿದ ನಂತರ ಅದ್ದೂರಿ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ತಲುಪಿದ ನಂತರ ರಾತ್ರಿ ಪಲ್ಲಕ್ಕಿ ಪಲ್ಲಕ್ಕಿ ಕಟ್ಟೆಗೆ ಮರಳಿತು. ಮಂಗಳವಾರ ನಸುಕಿನ ಜಾವ ಬಸವಣ್ಣನ ಕುದರಿ ಶಿವಾನಂದ ಈರಕಾರಮುತ್ಯಾ ಅವರು ಆಗಮಿಸಿದ ನಂತರ ಪಲ್ಲಕ್ಕಿ ಉತ್ಸವವು ದೇವಸ್ಥಾನದ ಪ್ರಾಂಗಣದಲ್ಲಿ ಮೂರು ಪ್ರದಕ್ಷಿಣೆ ಹಾಕಿದ ನಂತರ ಶಿವಾನಂದ ಈರಕಾರಮುತ್ಯಾ ಅವರು ಈ ವರ್ಷದ ಮಳೆ-ಬೆಳೆ ಹೇಳಿಕೆ ನುಡಿದರು. ಈರಕಾರಮುತ್ಯಾ ನುಡಿದ ಹೇಳಿಕೆಯನ್ನು ಹಿರಿಯರಾದ ಬಸವರಾಜ ಹಾರಿವಾಳ ಅವರು ಕೇಳಿ ನೆರೆದ ಭಕ್ತಗಣಕ್ಕೆ ಧ್ವನಿವರ್ದಕದ ಮೂಲಕ ಹೇಳಿದರು. ಹೇಳಿಕೆ ನುಡಿಯಾಗುತ್ತಿದ್ದಂತೆ ಪಲ್ಲಕ್ಕಿಯು ಇನ್ನೊಂದು ಪ್ರದಕ್ಷಿಣೆ ಹಾಕಿದ ನಂತರ ಪಲ್ಲಕ್ಕಿ ಸ್ವಸ್ಥಾನಕ್ಕೆ ಆಗಮಿಸುವ ಮೂಲಕ ಪಲ್ಲಕ್ಕಿ ಉತ್ಸವ ಸಂಪನ್ನಗೊಂಡಿತ್ತು.
ಶಿವಾನಂದ ಈರಕಾರಮುತ್ಯಾ ನುಡಿದ ಹೇಳಿಕೆಗಳುಃ ಹುಬ್ಬಿ, ಉತ್ತರಿ ಮಳಿಗೆ ಮಂಡಿ ಕಟ್ಟಿಸಿನಿ, ಹಸ್ತ ಚಿತ್ತಿ ಮಳಿ ಒಕ್ಕಲಿಗ್ಯಾಗ ಹಸ್ತಾಗ ಹಾಲು ಹಾಕಿನಿ, ಸಾತಿ ಮಳಿ ನಾಲ್ಕು ಮೂಲಿ ಸೋಸಿ ನೋಡುವದರೊಳಗ ಒಂದು ಮೂಲಿ ಕಸರ ಉಳಿತು, ಹತ್ತು ಕಾಳಿನಲ್ಲಿ ಬಿಳಿ ಕಾಳು ಮೇಲು, ಹತ್ತಿ ಸಾಲಾಗ ಹಮಿಣಿ ವಗದಿನಿ, ಒಕ್ಕಲಿಗ್ಯಾಗ ಚಿಂತಿ ಮಾಡಬೇಡ ನಾಲ್ಕು ಮೂಲಿಗೆ ಜಾಡಿ ಟೊಪ್ಪಿಗಿ ಹಾಕೊಂಡು ಮೂಲಿ ಮೂಲಿಗೆ ನಿಂತಿನಿ, ಗೋಧಿ, ಕುಸಬಿ, ಕಡ್ಲಿ,ಜೋಳದ ಬೆನ್ನ ಹತ್ಯಾವ, ಅಪ್ಪನ ಮ್ಯಾಲಿ ನಂಬಿಗೆ ಇಟ್ಟು ನಡದವನ ಮನಿಯಾಗ ಬಂಗಾರದ ಕಂಬ ಆಗಿ ಇರತಿನಿ ಎಂಬ ಈ ವರ್ಷದ ಹೇಳಿಕೆಗಳನ್ನು ಶಿವಾನಂದ ಈರಕಾರಮುತ್ಯಾ ನುಡಿದರು.
ಪಲ್ಲಕ್ಕಿ ಉತ್ಸವದಲ್ಲಿ ಗಂಗಯ್ಯ ಕಾಳಹಸ್ತೇಶ್ವರಮಠ, ಬಸವರಾಜ ಹಾರಿವಾಳ, ಸಂಗಪ್ಪ ಡಂಬಳ, ಚಂದ್ರಶೇಖರ ಮುರಾಳ, ನಿಂಗಪ್ಪ ಜೈನಾಪುರ, ಬಸವಂತ ಅಡಗಿಮನಿ, ಸಂಗಪ್ಪ ವಾಡೇದ, ಪಾವಡೆಪ್ಪ ಕರಮಳಕರ, ಶರಣಪ್ಪ ಕೂಡಗಿ, ನಾಗಪ್ಪ ಬಾಡಗಿ, ಮೀರಾಸಾಬ ಕೊರಬು, ಸಿದ್ದಲಿಂಗ ಪೂಜಾರಿ, ಗಿರೀಶ ಬಿರಾದಾರ, ಪುಟ್ಟು ಪಟ್ಟಣಶೆಟ್ಟಿ, ಶಿವು ಸಿಂದಗಿ, ಕುಮಾರ ಒಣರೊಟ್ಟಿ, ಪರಶುರಾಮ ದೇವಕರ, ಸಿದ್ದು ಚವ್ಹಾಣ, ಪ್ರಭು ಮಾಲಗಾರ, ಮಂಜು ಹಾರಿವಾಳ, ಭೀಮು ನಿಕ್ಕಂ, ಮಲ್ಲು ಡೋಣೂರ, ಸಂತೋಷ ಕೂಡಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.


ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರನ ವರಪ್ರಸಾದದಿಂದ ಬಸವೇಶ್ವರರ ತಾಯಿ ಮಾದಲಾಂಬಿಕೆಯು ಬಸವೇಶ್ವರರ ಜನ್ಮ ನೀಡಿದಳು ಎಂಬ ಪ್ರತೀತಿಯಿದೆ. ಬಸವೇಶ್ವರರು ಬಾಲ್ಯದಲ್ಲಿ ಜನ್ಮಸ್ಥಳ ಬಸವನಬಾಗೇವಾಡಿಯ ಮೂಲನಂದೀಶ್ವರ ದೇವಸ್ಥಾನ ಪ್ರಾಂಗಣ, ಬಾವಿಯ ಸುತ್ತಮುತ್ತ ತನ್ನ ಗೆಳೆಯರರೊಂದಿಗೆ ಆಟ ಆಡುವ ಜೊತೆಗೆ ಸಮೀಪದ ಹೋರಿಮಟ್ಟಿ ಗುಡ್ಡದಲ್ಲಿಯೂ ತನ್ನ ಬಾಲ್ಯದ ಆಟ, ಪೂಜೆ ಪುನಸ್ಕಾರ ಮಾಡಿದ್ದರು. ಇದ ಸವಿನೆನಪಿಗಾಗಿ ಪಲ್ಲಕ್ಕಿ ಉತ್ಸವವು ಹೋರಿಮಟ್ಟಿ ಗುಡ್ಡಕ್ಕೆ ತೆರಳಿ ಮರಳಿ ದೇವಸ್ಥಾನಕ್ಕೆ ಬರುತ್ತದೆ ಎಂಬ ಪ್ರತೀತಿಯೂ ಇದೆ. ಇದರ ಬಗ್ಗೆ ಹೆಚ್ಚು ಬೆಳಕು ಚೆಲ್ಲುವ ಅಗತ್ಯವಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.