ಸಿಂದಗಿ: ಬದುಕಿನಲ್ಲಿ ಧೈರ್ಯ ಮತ್ತು ಸಾಹಸಿಯ ಗುಣ ಇರುವ ವ್ಯಕ್ತಿ ಒಂದಲ್ಲ ಒಂದು ದಿನ ಸಾಧಕನಾಗುತ್ತಾನೆ ಎಂದು ಯೋಗ ಗುರು ನಿರಂಜನ ಶ್ರೀಗಳು ಹೇಳಿದರು.
ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪಪೂ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡ ೨೦೨೪-೨೫ನೆಯ ಸಾಲಿನ ಪಠ್ಯತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ನಾವು ನಿತ್ಯ ಧನಾತ್ಮಕ ಚಿಂತನೆಗಳನ್ನು ಮಾಡಬೇಕು. ಋಣಾತ್ಮಕ ವಿಚಾರಗಳಿಂದ ದೂರವಿರಬೇಕು. ಸಾಧಿಸುವವನಿಗೆ ಬಡತನ ಮುಖ್ಯವಲ್ಲ. ಆತ್ಮಸ್ಥೈರ್ಯ, ಸೃಜನಶೀಲತೆ, ಮುಂದಾಲೋಚನೆಯ ಗುಣಗಳು ಮೂಲವಾಗುತ್ತದೆ. ಎಲ್ಲ ಕ್ಷೇತ್ರಗಳ ಜ್ಞಾನ ಇಂದು ಅತ್ಯಂತ ಅವಶ್ಯಕವಾಗಿದೆ. ಕೇವಲ ನಾವು ಪುಸ್ತಕದ ಹುಳಗಳಾಗದೇ ಸರ್ವಜ್ಞನ ತರಹ ಎಲ್ಲ ಮುಜುಲುಗಳನ್ನು ಅಧ್ಯಯನ ಮಾಡುವಂಥವರಾಗಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿ.ಎಂ.ಮನಗೂಳಿ ಕಲಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿ, ವಿದ್ಯಾರ್ಥಿಗಳ ಬದುಕು ಸುಂದರವಾಗಬೇಕಾದರೆ ಜ್ಞಾನದ ಹೆಚ್ಚಿನ ಅವಶ್ಯಕತೆ ಇದೆ. ವಿದ್ಯಾರ್ಥಿ ಜೀವನ ಒಮ್ಮೆ ಕಳೆದು ಹೋದರೆ ಅದು ಮತ್ತೊಮ್ಮೆ ಸಿಗಲು ಸಾಧ್ಯವಿಲ್ಲ. ಇಂದಿನ ಶಿಕ್ಷಣ ವ್ಯವಸ್ಥೆಯು ಕೂಡ ಅತ್ಯಂತ ಹದಗೆಟ್ಟಿದೆ ಇದು ವಿಷಾದನೀಯ ಸಂಗತಿ. ಶಾಲಾ ಶಿಕ್ಷಣ ಕೇವಲ ನಮ್ಮ ಜ್ಞಾನವನ್ನು ವೃದ್ಧಿ ಮಾಡುತ್ತದೆ ಆದರೆ ಬದುಕಿನ ಶಿಕ್ಷಣ, ಮೌಲ್ಯ ಶಿಕ್ಷಣ, ಸಂಸ್ಕಾರ ಬರಿತ ಶಿಕ್ಷಣವು ನಮ್ಮ ಬದುಕನ್ನೇ ಶಿಖರದಂತೆ ಮೇಲೆರಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿದರು.
ಕಾರ್ಯಾಧ್ಯಕ್ಷ ಎಸ್.ಎ.ಪಾಟೀಲ, ವಿದ್ಯಾರ್ಥಿ ಪ್ರತಿನಿಧಿ ಸಿದ್ದಮ್ಮ ಅಗ್ನಿ ವೇದಿಕೆ ಮೇಲಿದ್ದರು.
ಈ ವೇಳೆ ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ವಿವಿಧ ವಿಭಾಗಗಳ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಬಿ.ಎಸ್.ಬಿರಾದಾರ, ಎಂ.ಎನ್.ಅಜ್ಜಪ್ಪ, ಎಫ್.ಎ.ಹಾಲಪ್ಪನವರ್, ಎಸ್.ಪಿ. ಬಿರಾದಾರ, ಸಿದ್ದಲಿಂಗ ಕಿಣಗಿ, ಎ.ಬಿ.ಪಾಟೀಲ, ಸತೀಶ್ ಬಸರಕೋಡ, ಎ.ಆರ್.ಸಿಂದಗಿಕರ, ಸುರೇಶ್ ಮಂಗೊಂಡಿ, ಗಂಗಾರಾಮ್ ಪವಾರ, ಜ್ಯೋತಿ ಚನ್ನೂರ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

