ಚಡಚಣ: ಕಲರ್ಸ್ ಕನ್ನಡ ಖಾಸಗಿ ವಾಹಿನಿಯಲ್ಲಿ ಜನಪ್ರಿಯತೆ ಪಡೆದಿರುವ ‘ಬಿಗ್ ಬಾಸ್’ ರಿಯಾಲಿಟಿ ಶೋ ಸೀಸನ್ 11 ರ ಸ್ಪರ್ಧಿಯಾಗಿ ಉತ್ತರ ಕರ್ನಾಟಕದ ಕಲಾವಿದ ಹಾಗೂ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವ ಪಟ್ಟಣದ ‘ಕೇದಾರಿ ಕೆ.ಎಸ್’ ಅವರನ್ನು ಆಯ್ಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರು ‘ಬಿಗ್ ಬಾಸ್’ ತಂಡಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಉತ್ತರ ಕರ್ನಾಟಕ ಭಾಗದ ಕಲಾವಿದರಾದ ಕೇದಾರಿ ಕೆ.ಎಸ್ ಅವರು ಚಡಚಣ ಪಟ್ಟಣದ ಮಧ್ಯಮ ವರ್ಗದ ಕುಟುಂಬದವರಾಗಿದ್ದು, ಚಲನಚಿತ್ರ, ಕಿರುಚಿತ್ರಗಳಲ್ಲಿ ಅಭಿನಯಿಸುವ ಜತೆಯಲ್ಲಿ ಕಳೆದ ಏಳು ವರ್ಷಗಳಿಂದ ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ.
ಕೇದಾರಿ ಅವರ ಅಭಿಮಾನಿಗಳು ಹಾಗೂ ಸಾರ್ವಜನಿಕರು ತಮ್ಮ ಫೇಸ್ಬುಕ್, ವಾಟ್ಸಾಪ್ ಸ್ಟೇಟಸ್, ಇನ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಉತ್ತರ ಕರ್ನಾಟಕದ ಕಲಾವಿದನಿಗೆ ‘ಬಿಗ್ ಬಾಸ್’ ಶೋನಲ್ಲಿ ಸ್ಪರ್ಧಿಯಾಗಲು ಅವಕಾಶ ನೀಡಬೇಕೆಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

