ವಿಜಯಪುರ: ಚಿದಂಬರೇಶ್ವರ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವ ಮೂರ್ತಿಯೊಂದಿಗೆ ಅದ್ಧೂರಿ ಮೆರವಣಿಗೆ ಜರುಗಿತು. ವಿಜಯಪುರ ನಗರದ ವೆಂಕಟೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಶೋಭಾಯಾತ್ರೆಯು ಗಣೇಶ ನಗರ ಮುಖಾಂತರ ಚಿದಂಬರ ದೇವಸ್ಥಾನಕ್ಕೆ ತಲುಪಿತು.
ಈ ಸಂದರ್ಭದಲ್ಲಿ ಚಿದಂಬರೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಚಿದಂಬರ ಭಜನಾ ಮಂಡಳಿ ಹಾಗೂ ವಿಜಯಪುರ ಸಮಸ್ತ ಭಜನಾ ಮಂಡಳಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಡೊಳ್ಳು ಕುಣಿತ, ಗೊಂಬೆ ಕುಣಿತವು ಮೆರವಣಿಗೆ ಮೆರಗು ತಂದವು.
ಈ ಸಂದರ್ಭದಲ್ಲಿ ಚಿದಂಬರ ದೇವರ ಭಕ್ತ ವೃಂದ ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

