Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೨ ವರ್ಷಗಳಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಕುಡಿವ ನೀರು
(ರಾಜ್ಯ ) ಜಿಲ್ಲೆ

೨ ವರ್ಷಗಳಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಕುಡಿವ ನೀರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ

ಇಂಡಿ: ಮುಂಬರುವ ೨ ವರ್ಷಗಳಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಶುದ್ದ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ರಸ್ತೆಗಳನ್ನು ಮಾಡಲಾಗುವದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.
ಭಾನುವಾರ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ೨೭.೫ ಕೋಟಿ ಅನುದಾನದಲ್ಲಿ ಇಂಡಿ-ಆಲಮೇಲ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಜಲಧಾರೆ ಯೋಜನೆಯ ಅಡಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯದಿಂದ ವಿಜಯಪೂರ, ಇಂಡಿ ಮತ್ತು ಬಸವನಬಾಗೇವಾಡಿ ತಾಲುಕುಗಳ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಾಗುವದು. ಈಗಾಗಲೇ ಈ ಯೋಜನೆ ಕೈಗೆತ್ತಿಕೊಂಡಿದ್ದು ಕೆಲಸ ಭರದಿಂದ ಸಾಗಿದೆ. ಇದರಂತೆ ಸಿಂದಗಿ ಮತ್ತು ಮುದ್ದೇಬಿಹಾಳ ತಾಲ್ಲೂಕುಗಳ ಎಲ್ಲಾ ಗ್ರಾಮಗಳಿಗೆ ನಾರಾಯಣಪೂರ ಜಲಾಶಯದಿಂದ ಕುಡಿಯುವ ನೀರು ಪೂರೈಸಲಾಗುವದು. ಈ ಎಲ್ಲಾ ಕೆಲಸಗಳು ಬರುವ ೨ ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದರು.
ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಗುಣಮಟ್ಟದ ವಿದ್ಯುತ್ ನೀಡಲು ಶ್ರಮಿಸಲಾಗುತ್ತಿದ್ದು, ರಾಜ್ಯದಲ್ಲಿಯೇ ವಿಜಯಪುರ ಜಿಲ್ಲೆಯಲ್ಲಿ ಹೆಚ್ಚಿನ ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಬರುವ ೨ ವರ್ಷಗಳಲ್ಲಿ ದಿನದ ೨೪ ಗಂಟೆಗಳ ಕಾಲ ವಿದ್ಯುತ್ ನೀಡಲು ಸಂಕಲ್ಪ ಮಾಡಲಾಗಿದೆ ಎಂದರು.
ಇಂಡಿ ತಾಲೂಕಿಗೆ ಅನುಕೂಲವಾಗಲಿರುವ
ಪ್ರಸಕ್ತ ಸಾಲಿನಲ್ಲಿ ನನಗೆ ನೀಡಿದ ೨೫ ಕೋಟಿ ಅನುದಾನದಲ್ಲಿ ಸಾಲೋಟಗಿ ಗ್ರಾಮದ ಶಿವಯೋಗೇಶ್ವರ ದೇವಸ್ಥಾನದ ಅಭಿವೃದ್ಧಿಗಾಗಿ ೧ ಕೋಟಿ ಅನುದಾನ ನೀಡಲಾಗಿದೆ. ಇನ್ನುಳಿದ ಅನುದಾನದಲ್ಲಿ ಕೆಲವು ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವದು ಎಂದು ಹೇಳಿದರು.
ವಕೀಲ ಬಿ.ಜಿ.ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸೋಮಯ್ಯ ಹಿರೇಪಟ್ಟ, ಶಿವಯೋಗೆಪ್ಪ ನೇದಲಗಿ, ಜೀತಪ್ಪ ಕಲ್ಯಾಣಿ, ಬಾಬುಸಾಹುಕಾರ ಮೇತ್ರಿ, ಜಾವೀದ ಮೋಮಿನ, ಲಿಂಬಾಜಿ ರಾಠೋಡ, ಮಲ್ಲುಗೌಡ ಪಾಟೀಲ, ಇಲಿಯಾಸ್ ಬೋರಾಮಣಿ, ಎಸ್.ಎಸ್.ಕಣಮುಚನಾಳ ಇದ್ದರು.

ರೇವಣಸಿದ್ದೇಶ್ವರ ಏತ ನೀರಾವರಿಗೆ ರೂ.೨೭೫೫ ಕೋಟಿ ಅನುದಾನ

” ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸರ್ಕಾರ ೨೭೫೫ ಕೋಟಿ ಅನುದಾನ ತೆಗೆದಿರಿಸಲಾಗಿದೆ. ಈ ಯೋಜನೆ ಪೂರ್ಣಗೊಂಡರೆ ಇಂಡಿ ಮತ್ತು ಚಡಚಣ ತಾಲೂಕುಗಳ ಬಹುತೇಕ ಕೃಷಿ ಕ್ಷೇತ್ರ ನೀರಾವರಿಗೆ ಒಳಪಡಲಿದೆ ಎಂದ ಅವರು ತಾಲೂಕಿನಲ್ಲಿರುವ ೧೮ ಕೆರೆಗಳನ್ನು ಸದಾ ತುಂಬಿಸುವ ವ್ಯವಸ್ಥೆ ಮಾಡಿದ್ದೇನೆ. ಇದರಿಂದ ಅಂತರ್ ಜಲ ಹೆಚ್ಚಾಗಲಿದೆ. ಬಾವಿ, ಕೊಳವೇ ಬಾವಿಗಳು ರೀಚಾರ್ಜ ಆಗಲಿವೆ. ನೀರಾವರಿಗೆ ಸರಕಾರ ಹೆಚ್ಚಿನ ಆಧ್ಯತೆ ನೀಡಿ ತಾಲೂಕಿನಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವದು.”

– ಯಶವಂತರಾಯಗೌಡ ಪಾಟೀಲ
ಶಾಸಕರು, ಇಂಡಿ

ಜ.೨೬ಕ್ಕೆ ಇಂಡಿ-ಆಲಮೇಲ ಹೊಸ ರಸ್ತೆ ಉದ್ಘಾಟನೆ

ಇಂಡಿ-ಆಲಮೇಲ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಇದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ೨೭.೫ ಕೋಟಿ ಅನುದಾನ ಬಿಡುಗಡೆ ಮಾಡಿಸಿ, ರಸ್ತೆ ಅಭಿವೃದ್ದಿಗೆ ಚಾಲನೆ ನೀಡಲಾಗಿದೆ. ಬರುವ ಜನೇವರಿ ೨೬ ರಂದು ಇಂಡಿ-ಆಲಮೇಲ ಹೊಸ ರಸ್ತೆಯನ್ನು ಉದ್ಘಾಟಿಸುತ್ತೇವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.