Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಡಿನಲ್ಲಿ ಬಸವ ತತ್ವ ಬೆಳಗಬೇಕು :ಡಾ.ಮುರುಘರಾಜೇಂದ್ರ ಶ್ರೀ
(ರಾಜ್ಯ ) ಜಿಲ್ಲೆ

ನಾಡಿನಲ್ಲಿ ಬಸವ ತತ್ವ ಬೆಳಗಬೇಕು :ಡಾ.ಮುರುಘರಾಜೇಂದ್ರ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ೧೨ ನೇ ಶತಮಾನದ ಬಸವಾದಿ ಶರಣರು ತಮ್ಮ ವಚನಗಳ ಮೂಲಕ ನಾಡಿಗೆ ಸರಳ ಬದುಕು ನಡೆಸುವುದು, ಪರೋಪಕಾರ, ಒಳ್ಳೆಯ ಕಾರ್ಯ ಮಾಡುವ ಕುರಿತು ಸರಳ ವಾಕ್ಯಗಳ ಮೂಲಕ ನಮಗೆ ನೀಡಿದ್ದಾರೆ. ಬಸವಾದಿ ಶರಣರ ವಚನಗಳಲ್ಲಿರುವ ತತ್ವಗಳನ್ನು ಅರಿತುಕೊಂಡು ಜೀವನವನ್ನು ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಮುಗಳಖೋಡ-ಜಿಡಗಾಮಠದ ಷಡಕ್ಷರಿ ಶಿವಯೋಗಿ ಡಾ.ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ಗಣೇಶ ನಗರದಲ್ಲಿರುವ ಯಲ್ಲಾಲಿಂಗ ಪುಣ್ಯಾಶ್ರಮದ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಸುಕ್ಷೇತ್ರ ಮುಗಳಖೋಡ-ಜಿಡಗಾಮಠದ ಪೂಜ್ಯರ ಪಾದಪೂಜೆ ಮತ್ತು ಬಸವನಬಾಗೇವಾಡಿಯ ಸದ್ಭಕ್ತರಿಂದ ತುಲಾಭಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಭಕ್ತಿ ಪ್ರಾಧ್ಯಾನ್ಯತೆಯನ್ನು ೧೨ ನೇ ಶತಮಾನದ ಬಸವಾದಿ ಶರಣರು ತಮ್ಮ ವಚನಗಳ ಮೂಲಕ ತಿಳಿಸಿಕೊಟ್ಟಿದ್ದಾರೆ. ಭಕ್ತಿಯಿಂದ ಗುರು-ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯ.ನಾಡಿನಲ್ಲಿ ಗುರುಪರಂಪರೆ, ಬಸವತತ್ವ ಬೆಳಗಬೇಕು. ಬಸವ ತತ್ವದಡಿಯಲ್ಲಿ ಮುಗಳಖೋಡ-ಜಿಡಗಾಮಠದ ಪರಂಪರೆ ನಡೆಯುತ್ತಿದೆ ಎಂದರು.
ಒಂದೊಂದು ಸ್ಥಳವನ್ನು ನೆನಪಿಸಿಕೊಂಡರೆ ಅಲ್ಲಿನ ಮಹಾನ್ ಚೇತನರ ಸ್ಮರಣೆಯಾಗುತ್ತದೆ. ಬಸವನಬಾಗೇವಾಡಿಯ ನೆನಪಾದರೆ ಇಡೀ ವಿಶ್ವಕ್ಕೆ ಬೆಳಕಾಗಿರುವ ಬಸವೇಶ್ವರರು ನೆನಪಿಗೆ ಬರುತ್ತಾರೆ. ಇಂತಹ ಮಹಾನ್ ಚೇತನ ಜನಿಸಿದ ಪಾವನ ಸ್ಥಳ ಇದಾಗಿದೆ. ಇಲ್ಲಿನ ಜನರಲ್ಲಿ ಭಕ್ತಿಯಿರುವದರಿಂದಾಗಿ ಇಷ್ಟೊಂದು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದು ಗುರುವಿನ ಮೇಲಿನ ಭಕ್ತಿ ತೋರಿಸುತ್ತದೆ ಎಂದರು.
ಇಲ್ಲಿನ ಯಲ್ಲಾಲಿಂಗ ಪುಣ್ಯಾಶ್ರಮಕ್ಕೆ ಶ್ರೀಮಠದ ಸಿದ್ದಾರಾಮೇಶ್ವರರು ಅಡಿಗಲ್ಲು ಹಾಕಿದ್ದರು. ಅವರು ಅಡಿಗಲ್ಲು ಹಾಕಿದ ಸಂದರ್ಭದಲ್ಲಿ ಈ ಪುಣ್ಯಾಶ್ರಮಕ್ಕೆ ಅನೇಕ ಮಹಾನ್ ಶ್ರೀಗಳು ಬಂದು ಹೋಗುತ್ತಾರೆ ಎಂದು ಹೇಳಿದ್ದರು. ಗುರುವಾಣಿಯಂತೆ ಅದು ನಿಜವಾಗಿದೆ ಎಂದ ಅವರು, ಇಲ್ಲಿನ ಪುಣ್ಯಾಶ್ರಮದ ಮಹಾರಾಜರು ಎಲೆಮರೆಯ ಕಾಯಿಯಂತೆ ಗುರು ಸೇವೆ ಮಾಡುವ ಮೂಲಕ ಸಾಮಾಜಿಕ ಸೇವೆ ಮಾಡುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆ ನಮಗೆ ಮೆಚ್ಚುಗೆಯಾಗಿದೆ. ವರ್ಷದಲ್ಲಿ ಒಂದು ಸಲವಾದರೂ ಈ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಈ ಭಾಗದ ಭಕ್ತರಿಗೆ ದರ್ಶನಾಶೀರ್ವಾದ ಕಲ್ಪಿಸುತ್ತೇವೆ. ನಾಡಿನ ಶ್ರೀಮಠಗಳು ಬೆಳೆಯಲು ಭಕ್ತರ ಸಹಕಾರ ಬಹಳ ಮುಖ್ಯವಾಗಿದೆ. ಉತ್ತಮ ಮಳೆಯಾಗಿ ಉತ್ತಮ ಬೆಳೆ ಬರುವಂತಾಗಿ ರೈತರ ಬೆಳೆಗೆ ಬೆಲೆ ಸಿಗುವಂತಾಗಲಿ. ರೈತರ ಬಾಳು ಬಂಗಾರವಾಗಲೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸದ್ಭಕ್ತರಿಂದ ಪೂಜ್ಯರಿಗೆ ನಾಣ್ಯಗಳಿಂದ ತುಲಾಭಾರ ನೆರವೇರಿತು. ಯಲ್ಲಾಲಿಂಗ ಪುಣ್ಯಾಶ್ರಮದಿಂದ ಪೂಜ್ಯರ ಪಾದಪೂಜೆ ನೆರವೇರಿತು. ಪೂಜ್ಯರನ್ನು ಬಸವೇಶ್ವರ ಸೇವಾ ಸಮಿತಿಯಿಂದ ಐ.ಸಿ.ಪಟ್ಟಣಶೆಟ್ಟಿ, ಬಸವರಾಜ ಹಾರಿವಾಳ, ಬಸವರಾಜ ಗೊಳಸಂಗಿ, ಎಂ.ಜಿ.ಆದಿಗೊಂಡ, ಸಂಗಮೇಶ ಓಲೇಕಾರ, ಶಂಕರಗೌಡ ಬಿರಾದಾರ, ರಾಜೇಂದ್ರ ಪತ್ತಾರ ಸೇರಿದಂತೆ ಜಂಗಮ ಕ್ಷೇಮಾಭಿವೃದ್ಧಿ ಸಂಘ, ವಿವಿಧ ಜನತೆ ಸತ್ಕರಿಸಿದರು. ಎಚ್.ಬಿ.ಬಾರಿಕಾಯಿ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಪೂಜ್ಯರು ಪರಣಕೋಟೆ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.