Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆಆಡಳಿತ ನ್ಯಾಯಾಧೀಕರಣ ತರಬೇತಿ :ಅರ್ಜಿ ಆಹ್ವಾನ

ನಿವೃತ್ತ ದೈಹಿಕ ಶಿಕ್ಷಕರಿಗೆ ಹೃದಯಸ್ಪರ್ಶಿ ಸನ್ಮಾನ

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್’ಗೆ ಬಿಟ್ಟದ್ದು ಸುರ್ಜೆವಾಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿಂದುಳಿದ ಮತ್ತು ಸ್ವಾಭಿಮಾನಿ ಜನರ ಕಲ್ಯಾಣಕ್ಕೆ ಬದ್ಧ :ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಹಿಂದುಳಿದ ಮತ್ತು ಸ್ವಾಭಿಮಾನಿ ಜನರ ಕಲ್ಯಾಣಕ್ಕೆ ಬದ್ಧ :ಎಂ.ಬಿ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಆರ್ಥಿಕವಾಗಿ ಹಿಂದುಳಿದ ಮತ್ತು ಸರ್ವ ಜನರೊಂದಿಗೆ ಸಹಬಾಳ್ವೆ ನಡೆಸುತ್ತಿರುವ ಎಲ್ಲ ಸ್ವಾಭಿಮಾನಿ ಜನರ ಕಲ್ಯಾಣಕ್ಕೆ ಶ್ರಮಿಸುತ್ತಿದ್ದೇನೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದ್ದಾರೆ.

ನಗರದಲ್ಲಿ ನಡೆದ ನಾನಾ ಸಮುದಾಯಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಾಯಕ ನಿಷ್ಠೆಯಿಂದ ಕೆಲಸ ಮಾಡುತ್ತ ಇತರ ಸಮುದಾಯಗಳೊಂದಿಗೆ ಸಹಬಾಳ್ವೆ ನಡೆಸುತ್ತಿರುವವರು ಯಾವುದೇ ಹಿಂಜರಿಕೆ ಇಲ್ಲದೆ ನಿರಾತಂಕವಾಗಿ ತಮ್ಮ ಕಾಯಕ ಮುಂದುವರೆಸಬೇಕು ಎಂದು ಹೇಳಿದರು.

ಹಿಂದುಳಿದವರು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಆರ್ಥಿಕವಾಗಿ ಸ್ವಾವಲಂಭಿಯಾಗಬೇಕು. ಈ ಹಿಂದಿನಿಂದಲೂ ನಮ್ಮ ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಈ ಜನರ ಬಗ್ಗೆ ನಮಗೂ ಹೆಮ್ಮೆ ಮತ್ತು ಕಾಳಜಿ ಇದೆ ಎಂದು ಅವರು ಹೇಳಿದರು.

ಕುಡಿಯಲು ನೀರಿಗಾಗಿ ಪರದಾಡುತ್ತಿದ್ದ ರೈತರ ಭೂಮಿಗೆ ನೀರೊದಗಿಸುವ ಮೂಲಕ ಮುಂದಿನ ಪೀಳಿಗೆಗೂ ನೆಮ್ಮದಿಯಿಂದ ಬದುಕು ಸಾಗಿಸಲು ಶಾಶ್ವತ ಪರಿಹಾರ ಒದಗಿಸಿದ್ದೇವೆ. ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸುವಂತೆ ಮಾಡಿದ್ದೇವೆ. ರೈತರು ವೈಜ್ಞಾನಿಕವಾಗಿ ಕೃಷಿ ಮಾಡಲು ಮಾಹಿತಿ ಕೇಂದ್ರ ಆರಂಭಿಸಲಿದ್ದೇವೆ. ಭೂರಹಿತರಿಗಾಗಿಯೂ ಯೋಜನೆ ರೂಪಿಸಲಿದ್ದೇವೆ. ಶಾಲೆಗಳು ಮತ್ತು ಅಂಗನವಾಡಿಗಳ ಅಭಿವೃದ್ಧಿ, ರೈತರಿಗಾಗಿ ವಿಜಯಪುರವನ್ನು ಆದರ್ಶ ಜಿಲ್ಲೆ ಮತ್ತು ಬಬಲೇಶ್ವರ ಆದರ್ಶ ಮತಕ್ಷೇತ್ರವನ್ನು ಮಾಡುವ ಗುರಿ ಹೊಂದಿದ್ದೇನೆ ಎಂದು ಅವರು ಹೇಳಿದರು.

ಗುರು ತುಪ್ಪದ, ಸಿದ್ರಾಮ ಬಿರಾದಾರ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುವ ನೀರು ಮತ್ತು ವಿದ್ಯೆಯನ್ನು ಒದಗಿಸುವ ಮೂಲಕ ಎಂ. ಬಿ. ಪಾಟೀಲ ಸರ್ವ ಜನರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದ ಮಹಿಳೆಯರ ಗೋಳನ್ನು ತಪ್ಪಿಸಿದ್ದಾರೆ. ನಮ್ಮ ಕುಟುಂಬದ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದಾರೆ ಎಂದು ಹೇಳಿದರು.

ಕೆ.ಎಂ.ಎಫ್ ಮಾಜಿ ಅಧ್ಯಕ್ಷ ಶ್ರೀಶೈಲಗೌಡ ಪಾಟೀಲ(ನಿಡೋಣಿ) ಮತ್ತು ಮುಖಂಡ ರಾಜು ಜೋರಾಪುರ ಮಾತನಾಡಿ, ಹಲವಾರು ಜನರು ಎಲೆಮರೆಯ ಕಾಯಿಯಂತೆ ಸ್ವಾಭಿಮಾನದ ಜೀವನ ಸಾಗಿಸುತ್ತಿದೆ. ಸಂಕಷ್ಟ ಸಮಯದಲ್ಲಿ ಎಂ. ಬಿ. ಪಾಟೀಲರೇ ನಮ್ಮ ಆಪದ್ಭಾಂದವರಾಗಿದ್ದಾರೆ. ವೈಯಕ್ತಿಕ ಜೀವನ ಬದಿಗೊತ್ತಿ ನಮ್ಮ ಜೀವನ ಹಸನಾಗಿಸಲು ಕಾರಣರಾಗಿದ್ದಾರೆ ಎಂದು ಹೇಳಿದರು.

ಆಶಾ ಎಂ. ಪಾಟೀಲ ಮಾತನಾಡಿ, ನಾನು ನಿಮ್ಮಲ್ಲಿ ಒಬ್ಬಳಾಗಿ ಸಣ್ಣ ಕೆಲಸ ಮಾಡುತ್ತಿದ್ದೇನೆ. ಈ ಭಾಗದ ಅಭಿವೃದ್ಧಿಗೆ ಕಾರಣರಾದ ಎಂ. ಬಿ. ಪಾಟೀಲ ಅವರನ್ನು ಎಲ್ಲರೂ ಈ ಬಾರಿ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಂ. ಬಿ. ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಡಾ.ಗಂಗಾಧರ ಸಂಬಣ್ಣಿ, ರಾಚನಗೌಡ ಬಿರಾದಾರ, ರೇವಣಸಿದ್ದ ಜುಮನಾಳ, ಬಸನಗೌಡ ಪಾಟೀಲ ಉಪಸ್ಥಿತರಿದ್ದರು.
ಸೋಮನಿಂಗ ಕಟಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಮಮದಾಪುರ ನಿರೂಪಿಸಿದರು.

BIJAPUR NEWS kpcc m b patil udaya rashmi
Share. Facebook Twitter Pinterest Email Telegram WhatsApp
  • Website

Related Posts

ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆಆಡಳಿತ ನ್ಯಾಯಾಧೀಕರಣ ತರಬೇತಿ :ಅರ್ಜಿ ಆಹ್ವಾನ

ನಿವೃತ್ತ ದೈಹಿಕ ಶಿಕ್ಷಕರಿಗೆ ಹೃದಯಸ್ಪರ್ಶಿ ಸನ್ಮಾನ

ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್’ಗೆ ಬಿಟ್ಟದ್ದು ಸುರ್ಜೆವಾಲಾ

ಅಮೃತ ೨.೦ ಯೋಜನೆಗೆ ರೂ.೪೦೦ ಕೋಟಿ ಅನುದಾನ :ಜಿಗಜಿಣಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆಆಡಳಿತ ನ್ಯಾಯಾಧೀಕರಣ ತರಬೇತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿವೃತ್ತ ದೈಹಿಕ ಶಿಕ್ಷಕರಿಗೆ ಹೃದಯಸ್ಪರ್ಶಿ ಸನ್ಮಾನ
    In (ರಾಜ್ಯ ) ಜಿಲ್ಲೆ
  • ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್’ಗೆ ಬಿಟ್ಟದ್ದು ಸುರ್ಜೆವಾಲಾ
    In (ರಾಜ್ಯ ) ಜಿಲ್ಲೆ
  • ಅಮೃತ ೨.೦ ಯೋಜನೆಗೆ ರೂ.೪೦೦ ಕೋಟಿ ಅನುದಾನ :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಪ್ರೇಮ ಸ್ಪರ್ಶ
    In ಕಾವ್ಯರಶ್ಮಿ
  • ವಿಳಾಸ ಬದಲಾದಾಗ..
    In ಭಾವರಶ್ಮಿ
  • ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.35 ಮೀಸಲಾತಿ
    In (ರಾಜ್ಯ ) ಜಿಲ್ಲೆ
  • ಶರಣ ನಗೆಮಾರ ತಂದೆ ವಚನಗಳು ಬದುಕಿಗೆ ಪೂರಕ :ಸಾಲಕ್ಕಿ
    In (ರಾಜ್ಯ ) ಜಿಲ್ಲೆ
  • ನೆಟಬಾಲ್ ಚಾಂಪಿಯನಶಿಫ್ :ಅಕ್ಷರಾ ಶಾಲೆ ಪ್ರಥಮ
    In (ರಾಜ್ಯ ) ಜಿಲ್ಲೆ
  • ’ರೈತ ನಿನಗೆ ಗೋ ಶಾಪ?’ ಚಿತ್ರದ ಮೊದಲ ಲುಕ್ ಬಿಡುಗಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.