ಇಂಡಿ: ತಾಲೂಕು ಸೇರಿದಂತೆ ಸಿಂದಗಿ, ದೇವರ ಹಿಪ್ಪರಗಿ, ಆಲಮೇಲ ಮತ್ತು ಚಡಚಣ ತಾಲೂಕಿನಲ್ಲಿ ಸಂಭವಿಸಿರುವ ರೈತ ಆತ್ಮಹತ್ಯೆ ಪ್ರಕರಣ ಬೇಗ ಇತ್ಯರ್ಥ ಪಡಿಸಿ ಅವರಿಗೆ ಪರಿಹಾರ ಒದಗಿಸಬೇಕೆಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದ ಕಂದಾಯ ಉಪ ವಿಬಾಗಾಧಿಕಾರಿ ಕಚೇರಿಯ ಸಬಾಭವನದಲ್ಲಿ ಬುಧವಾರ ನಡೆದ ರೈತ ಆತ್ಮಹತ್ಯೆಗಳ ಕುರಿತು ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ರೈತ ಆತ್ಮಹತ್ಯೆ ಪ್ರಕರಣ ನಡೆದರೆ ಬೇಗ ದಾಖಲೆ ಪಡೆದು ಬೇಗ ಪರಿಹಾರ ಸಿಗುವಂತೆ ಪ್ರಯತ್ನಿಸಬೇಕು ಎಂದರು.
ರೈತರ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿ ಪೋಲಿಸ ಇಲಾಖೆ ೧೫ ದಿವಸದ ಒಳಗಾಗಿ ಕಂದಾಯ ಇಲಾಖೆ ಕಚೇರಿಗೆ ತಲುಪಿಸಲು ಕೇಳಿಕೊಂಡರು.
ರೈತ ಆತ್ಮಹತ್ಯೆಯಾದರೆ ಐದು ಲಕ್ಷ ರೂ ಪರಿಹಾರ ಮತ್ತು ಕೃಷಿ ಚಟುವಟಿಕೆಯಲ್ಲಿ ತೊಡಗಿದಾಗ ಆಕಸ್ಮಿಕ ಮರಣ ಹೊಂದಿದರೆ ಎರಡು ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದರು.
ಇಂಡಿಯ ನಾಲ್ಕು ಸೇರಿದಂತೆ ಒಟ್ಟು ೯ ಆತ್ಮಹತ್ಯೆ ಪ್ರಕರಣ ಇಂದು ಇತ್ಯರ್ಥ ಪಡಿಸಲಾಯಿತು.
ಅದಲ್ಲದೆ ಹಾವು ಕಡಿದು ಮರಣ ಹೊಂದಿದ ಎರಡು ರೈತರ ಮತ್ತು ಕೃಷಿ ಚಟುವಟಿಕೆ ಗಳಲ್ಲಿ ತೊಡಗಿದಾಗ ಮರಣ ಹೊಂದಿದ ೨ ಪ್ರಕರಣ ಇಂದು ಇತ್ಯರ್ಥ ಪಡಿಸಲಾಯಿತು.
ಸಭೆಯಲ್ಲಿ ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್, ಇಂಡಿಯ ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಸಿಂದಗಿಯ ಎಚ್.ವೈ.ಸಿಂಗಾಗೋಳ, ಚಡಚಣ ತಹಸೀಲ್ದಾರ ಸಂಜಯ ಇಂಗಳೆ, ಸಿಂದಗಿಯ ಪ್ರದೀಪ ಹಿರೇಮಠ, ದೇವರ ಹಿಪ್ಪರಗಿಯ ಪ್ರಕಾಶ ಸಿಂದಗಿ,ಆಲಮೇಲದ ಸುರೇಶ ಚಾವಲಾರ, ಇಂಡಿಯ ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ, ಸಿಪಿಐ ಮಲ್ಲಿಕಾರ್ಜುನ ಡಪ್ಪಿನ ಮತ್ತಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

