Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾಮೀಜಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಮುಸ್ಲಿಂ ಪೋರಂ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಸ್ವಾಮೀಜಿ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಮುಸ್ಲಿಂ ಪೋರಂ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಮಹಾರಾಷ್ಟ್ರದ ರಾಮಗಿರಿ ಮಹಾರಾಜ ಇಸ್ಲಾಮ ಧರ್ಮದ ಪ್ರವಾದಿ ಮಹ್ಮದ ಪೈಗಂಬರರ ಕುರಿತು ಮಾತನಾಡಿರುವದನ್ನು ಖಂಡಿಸಿ ಸ್ವಾಮೀಜಿ ವಿರುದ್ದ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ತಾಲೂಕಾ ಮುಸ್ಲಿಂ ಪೋರಂ ವತಿಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಟಿಪ್ಪು ಸುಲ್ತಾನ ವೃತ್ತದಿಂದ ಶುರುವಾದ ಪ್ರತಿಭಟನಾ ಮೆರವಣಿಗೆ ಸರಾಫ ಬಜಾರ, ಬಸವೇಶ್ವರ ವೃತ್ತ, ಹೈದರಾಲಿ ಸರ್ಕಲ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ತಹಸೀಲ್ದಾರ ಕಚೇರಿಯವರೆಗೆ ಸಾಗಿತು.
ಅಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮುಖಂಡ ಎಚ್.ಆರ್.ಬಾಗವಾನ ಮಾತನಾಡಿ, ಜಗತ್ತಿನ ಜನತೆಯ ಒಳಿತನ್ನು ಬಯಸುವದು ಇಸ್ಲಾಂ ಧರ್ಮ. ದೇಶದಲ್ಲಿ ಎಲ್ಲ ಧರ್ಮೀಯರು ಅತ್ಯಂತ ಸೌಹಾರ್ಧಯುತವಾಗಿ ಬಾಳುತ್ತಿದ್ದೇವೆ. ಇದನ್ನು ಸಹಿಸದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ಮಹಾರಾಷ್ಟ್ರದ ಪುಟ್ಟ ಗ್ರಾಮದಲ್ಲಿರುವ ಈ ಸ್ವಾಮೀಜಿ ನಮ್ಮ ಪ್ರವಾದಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಮ್ಮ ಮನಸ್ಸಿಗೆ ಬೇಸರವನ್ನುಂಟು ಮಾಡಿದೆ. ಕೂಡಲೇ ರಾಮಗಿರಿ ಮಹಾರಾಜನನ್ನ ಬಂಧಿಸಿ ಕಾನೂನು ರೀತಿ ಶಿಕ್ಷೆಗೆ ಗುರಿಪಡಿಸಬೇಕು ಎಂದರು.
ಈ ವೇಳೆ ಹಿರಿಯ ಪತ್ರಕರ್ತ ಹಾಗೂ ನ್ಯಾಯವಾದಿ ಕೆ.ಎಂ.ರಿಸಾಲದಾರ ಮಾತನಾಡಿ, ಇಡೀ ಮಾನವ ಕುಲಕ್ಕೆ ಒಳ್ಳೆಯ ಸಂದೇಶವನ್ನು ಸಾರಿದವರು ಪ್ರವಾದಿ ಮಹಮ್ಮದ ಪೈಗಂಬರರು. ಅಂಥವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದು ಖಂಡನೀಯ. ಸಧ್ಯ ಮುಸ್ಲೀಂ ಧರ್ಮದವರ ಮೇಲೆ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ. ಈ ಧೋರಣೆಯನ್ನ ನಿಲ್ಲಿಸಿ ಸೌಹಾರ್ಧಯುತ ಬಾಳ್ವೆಯತ್ತ ಹೆಜ್ಜೆ ಹಾಕಬೇಕು ಎಂದರು.
ಮೌಲಾನಾ ಅಲ್ಲಾಭಕ್ಷ ಖಾಜಿ, ಮುಫ್ತಿ ಅಫ್ತಾಬ, ಮುಫ್ತಿ ಇರ್ಫಾನ, ಡಾ.ಎ.ಎ.ಮುಲ್ಲಾ, ಸಮೀರ ಹುಣಸಗಿ, ಪಿಂಟು ಸಾಲಿಮನಿ ಮತ್ತೀತರರು ಮಾತನಾಡಿ ಘಟನೆಯನ್ನು ಖಂಡಿಸಿ ಸ್ವಾಮೀಜಿಗೆ ಕಾನೂನು ಶೀಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ನ್ಯಾಯವಾದಿ ಎನ್.ಬಿ.ಮುದ್ನಾಳ ಮನವಿ ಪತ್ರವನ್ನು ಓದಿದರು. ಸಂಗೊಳ್ಳಿ ರಾಯಣ್ಣ ಯುವ ವೇದಿಕೆಯ ಮುಖಂಡ ಪಿ.ಬಿ.ಮಾತಿನ್ ವಕೀಲರು, ಪುರಸಭೆ ಸದಸ್ಯರುಗಳಾದ ಮಹೆಬೂಬ ಗೊಳಸಂಗಿ, ರಿಯಾಜ ಢವಳಗಿ, ಮುಖಂಡರಾದ ಯುಸೂಫ ನಾಯ್ಕೋಡಿ, ಮುನ್ನಾ ಚೌದರಿ, ಆಸೀಫ ನಿಡಗುಂದಿ, ಮಹೆಬೂಬ ಬಾಗವಾನ(ಆರ್.ಕೆ) ಸೇರಿದಂತೆ ೫೦೦ ಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.