Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಬೇಕು :ಬಸವಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಮಾನವೀಯ ಮೌಲ್ಯ ಬಿತ್ತಬೇಕು :ಬಸವಲಿಂಗ ಶ್ರೀ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಶಿಕ್ಷಕರು ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಬೇಕು. ಮಾನವೀಯ ಮೌಲ್ಯ ಪಡೆದ ಮಕ್ಕಳು ಜಗದ್ವಿಖ್ಯಾತರಾಗಲು ಸಾಧ್ಯವಾಗುತ್ತದೆ ಎಂದು ಚಿತ್ತರಗಿಯ ಶಿವಯೋಗ ಮತ್ತು ನಿಸರ್ಗ ಚಿಕಿತ್ಸೆ ಕೇಂದ್ರದ ಬಸವಲಿಂಗ ಮಹಾಸ್ವಾಮೀಜಿ ಹೇಳಿದರು.
ನಗರದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ವಿಜಯಪುರ ನೇತೃತ್ವದಲ್ಲಿ ಗುರುವಾರ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನಾಚರಣೆ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ದೊಡ್ಡ ಗೌರವ ಸೀಗುವುದು ಶಿಕ್ಷಕರಿಗೆ ಮಾತ್ರ, ಅಜ್ಞಾನದಿಂದ ಸುಜ್ಞಾನದ ಕಡೆ ಕೊಂಡೊಯ್ಯುದು ಜಾಗೃತಿ ಮಾಡುವವರು ಶಿಕ್ಷಕರು, ವಿದ್ಯೆ ಬಹುದೊಡ್ಡ ಸಂಪತ್ತು, ಅದನ್ನು ಗುರುಗಳು ಧಾರೆ ಎರೆಯುತ್ತಾರೆ. ಹೃದಯದಿಂದ ಮಕ್ಕಳಿಗೆ ಮಾನವೀಯ ಮೌಲ್ಯ ಬೆಳೆಸಬೇಕು. ಅಜ್ಞಾನದ ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವವನೇ ಶಿಕ್ಷಕ. ಜಗತ್ವಿಖ್ಯಾತ ವ್ಯಕ್ತಿ ಮಾಡುವ ಸಾಮರ್ಥ್ಯ ಇರುವದು ಶಿಕ್ಷಕನಿಗೆ ಮಾತ್ರ ಎಂದರು.
ತಿಕೋಟಾ ತಾಲ್ಲೂಕ‌ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಮಾತನಾಡಿ, ನಮ್ಮ ಕರ್ತವ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡಬೇಕು. ಅಂದಾಗ ಸಮಾಜ ನಮಗೆ ಗೌರವ ಕೊಡುತ್ತದೆ ಎಂದರು.
ತಾಲ್ಲೂಕಿನ ಸಾಧಕ ಶಾಲೆಗಳ ವಿಡಿಯೋ ಎಲ್ಇಡಿ ಮೂಲಕ ಬಿತ್ತರಿಸಲಾಯಿತು. ವಯೋನಿವೃತ್ತ, ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಹಾಗೂ ಅಕಾಲಿಕ ನಿಧನ ಹೊಂದಿದ ಶಿಕ್ಷಕರ ಕುಟುಂಬಗಳ ಸದಸ್ಯರಿಗೆ ಗೌರವ ಸಲ್ಲಿಸಲಾಯಿತು.
ಬಿಇಓ ಪ್ರಮೋದಿನಿ ಬಳೋಲಮಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಾಪೌರ ಮಹೇಜಬಿನ ಅಬ್ದುಲರಜಾಕ ಹೊರ್ತಿ, ತಾಪಂ ಇಓ ಬಸವರಾಜ ಐನಾಪುರ, ಅರ್ಜುನ ಲಮಾಣಿ, ಶಿವರಾಜ ಬಿರಾದಾರ, ಪುಷ್ಪಾ ಗಚ್ಚಿನಮಠ, ಎ.ಬಿ.ಧಡಕೆ, ಮಲ್ಲನಗೌಡ ಹಡಲಗೇರಿ, ವಸಂತ ನಾಯಕ, ಬಸವರಾಜ ರೆಬಿಬಾಳ, ದೇಶಪಾಂಡೆ, ಹಣಮಂತ ಕುಡಚಿ, ಗಜಾನಂದ ಜುಂಜರವಾಡ, ಬಿ.ಎಸ್‌.ಮಠ, ಝಡ್.ಐ.ಇಂಡಿಕಾರ, ಅಶೋಕ ಬಜಂತ್ರಿ, ಎಸ್.ಎಂ.ಚಿತ್ತರಗಿ, ಮುತ್ತಪ್ಪ ಪೂಜಾರಿ, ಆರ್.ಬಿ.ಜಾಧವ, ಎಂ.ಎನ್.ನಾಯಿಕ, ದೀಪಾಕ್ಷಿ ಜಾನಕಿ, ಎಸ್.ಡಿ.ಮೊಸಲಗಿ, ದಿನೇಶ ಹಳ್ಳಿ, ಅಶ್ಪಾಕ ಮನಗೂಳಿ, ಜ್ಯೋತಿ ಖೋತ ಇದ್ದರು.
ಕಾರ್ಯಕ್ರಮವನ್ನು ರೇವತಿ ಬೂದಿಹಾಳ, ಕಾಶಿನಾಥ ಜಾಧವ, ಪ್ರಭು ಬಿರಾದಾರ ನೆರವೇರಿಸಿದರು.

“ಮಕ್ಕಳಷ್ಟು ದೊಡ್ಡ ಸಂಪತ್ತು ಈ ಜಗತ್ತಿನಲ್ಲಿ ಇಲ್ಲ. ಸಾವಿರ ತಾಯಿಯ ಹೃದಯ ಒಬ್ಬ ಶಿಕ್ಷಕನಲ್ಲಿ ಇರುತ್ತದೆ. ಇಲಾಖೆಯ ಹಲವು ಒತ್ತಡಗಳ ಮಧ್ಯೆ ಪ್ರಾಮಾಣಿಕವಾಗಿ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಕುರಿತು ಹೆಮ್ಮೆ ಇದೆ. ತಮ್ಮ ಕೈಯಲ್ಲಿ ಕಲಿತ ಮಗು ಉನ್ನತ ಹುದ್ದೆ ಏರಿದಾಗ ಶಿಕ್ಷಕ ಸಂತೋಷ ಪಡುತ್ತಾನೆ.”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲ ವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ

ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
  • ವಿವಾದಿತ ಸ್ಥಳದಲ್ಲಿ ತಳವಾರ ಸಮಾಜ ಭವನ :ಕಾಮಗಾರಿ ತಡೆಗೆ ಮನವಿ
    In (ರಾಜ್ಯ ) ಜಿಲ್ಲೆ
  • ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಡವರ ಆರ್ಥಿಕ ಸಬಲೀಕರಣಕ್ಕಾಗಿ ಸಂಘ ಸ್ಥಾಪನೆ :ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.