ಸಿಂದಗಿ: ಪ್ರಾಥಮಿಕ ಶಿಕ್ಷಣ ಎನ್ನುವುದು ಜೀವನದ ಬುನಾದಿ ಇಂತಹ ವ್ಯಕ್ತಿತ್ವ ರೂಪಿಸುವದು ಶಿಕ್ಷಕರ ಪಾತ್ರ ಹಿರಿದ್ದಾದದ್ದು, ಶಿಕ್ಷಕರು ನೀಡುವ ಶಿಕ್ಷಣ ಜೀವನದುದ್ದಕ್ಕೂ ಮರೆಯದಂತಹ ಸಂಬಂಧ ಬೆಳೆಸುತ್ತಾರೆ. ನಮ್ಮ ಜೀವನದ ರೂಪರೇಶೆಗಳನ್ನು ರೂಪಿಸಿದ ಶಿಕ್ಷಕರಿಗೆ ಗೌರವಿಸುವ ಕಾರ್ಯ ಶ್ಲಾಘನೀಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಗುಂದಗಿ ಪಂಕ್ಷನ್ ಹಾಲ್ನಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ವಿಜಯಪುರ ಹಾಗೂ ತಾಲೂಕು ಆಡಳೀತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಾರ್ಯಾಲಯ ಹಾಗೂ ಶಿಕ್ಷಕರ ದಿನೋತ್ಸವ ಸಮಿತಿ ಹಮ್ಮಿಕೊಂಡ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕಾದರೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ನೀಡಿದ್ದಾಗ ಮಾತ್ರ ಶಿಕ್ಷಣ ಮಟ್ಟ ಸುಧಾರಣೆ ಕಾಣಲು ಸಾದ್ಯ ಕಾರಣ ನಮ್ಮ ಅವಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿ ಆಡಳಿತ ನಡೆಸುತ್ತೇನೆ ಎಂದು ತಿಳಿಸಿದರು.
ಆಲಮೇಲ ವೀರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು ಸಾನಿದ್ಯ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಿಕ್ಷಕರ ದಿನೋತ್ಸವ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ರಾಮು ಅಗ್ನಿ, ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಆಲಮೇಲ ತಾಪಂ ಇಒ ಪರೀದಾ ಪಠಾಣ, ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಆನಂದ ಭೂಸನೂರ, ದೇವರ ಹಿಪ್ಪರಗಿ ಅದ್ಯಕ್ಷ ಎ.ಎಚ್.ವಾಲೀಕಾರ, ಪ್ರೌಡಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಆರ್.ಎಚ್.ಬಿರಾದಾರ, ನೌಕರರ ಸಂಘದ ಅದ್ಯಕ್ಷ ಅಶೋಕ ತೆಲ್ಲೂರ, ದೇವರ ಹಿಪ್ಪರಗಿ ಪ್ರೌಡಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಎಸ್.ಎನ್.ಯಾಳವಾರ, ಶಿಕ್ಷಣ ಸಂಯೋಜಕ ಐ.ಎಫ್.ಬಾಲ್ಕಿ, ಅಕ್ಷರ ದಾಸೋಹ ಅಧಿಕಾರಿ ಎ.ಎಸ್.ಡೋಣೂರ, ನಾಮದೇವ ಚವ್ಹಾಣ, ಶಿಕ್ಷಕಿ ಶೋಭಾ ಚಿಗರಿ ಸೇರಿದಂತೆ ಅನೇಕರು ವೇದಿಕೆ ಮೇಲಿದ್ದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ ಅವರು ಶಿಕ್ಷಕರ ದಿನೋತ್ಸವ ಸಮಿತಿಗೆ ರೂ.೫೦ಸಾವಿರ ದೇಣಿಗೆ ನೀಡಿದರು. ಈ ವೇಳೆ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ರಾಯಪ್ಪ ಇವಣಗಿ, ಬಸವರಾಜ ಸೋಂಪೂರ ನಿರೂಪಿಸಿ ವಂದಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

