ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ನೈಸರ್ಗೀಕ ವಿಕೋಪಗಳಾದ ಪ್ರವಾಹ, ಅತೀವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿ,ಉಪವಿಭಾಗಾಧಿಕಾರಿ,ತಹಶೀಲ್ದಾರ, ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರದಲ್ಲಿ ಸೆ.೫ರಂದು ಪ್ರಕಟಿಸಲಾಗಿದೆ.
ಈ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರ್, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕಾ ಕಚೇರಿಯಲ್ಲಿ ೦೭ ದಿನಗಳ ಒಳಗಾಗಿ (ಅಂದರೆ ದಿನಾಂಕ ೧೧-೦೯-೨೦೨೪) ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ವೆಬ್ಸೈಟ್ https://vijayapura.nic.inದಲ್ಲಿ ಪರಿಶೀಲಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
