Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಗತ್ತಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ್ದು ಭಾರತ :ಎಸಿ ಗದ್ಯಾಳ
(ರಾಜ್ಯ ) ಜಿಲ್ಲೆ

ಜಗತ್ತಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ್ದು ಭಾರತ :ಎಸಿ ಗದ್ಯಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪತ್ರಕರ್ತರಿಗೆ ಸಮರ್ಪಿಸಿದ ಕಾರ್ಯಕ್ರಮ | ಸಸಿಗಳನ್ನು ನೆಡುವಿಕೆ | ಮಾನವ ಸರಪಳಿ ನಿರ್ಮಾಣ

ಉದಯರಶ್ಮಿ ದಿನಪತ್ರಿಕೆ

ಇಂಡಿ: ವಿಶ್ವಗುರು ಬಸವಣ್ಣನವರ ನೇತೃತ್ವದಲ್ಲಿ ಜಗತ್ತಿಗೆ ಮೊಟ್ಟಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ್ದು ಭಾರತ. ಈ ಸದ್ಯ ಅತ್ಯಂತ ಭವ್ಯ, ಶಕ್ತಿಶಾಲಿ ಮತ್ತು ಯಶಸ್ವಿ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ ಭಾರತ ದೇಶವಾಗಿದೆ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ತಾಲ್ಲೂಕಿನ ಜೇವೂರ ಗ್ರಾಮದ ಅರಣ್ಯ ಇಲಾಖೆಯ ವನ್ಯಧಾಮದಲ್ಲಿ ಇಂಡಿ ಮತ್ತು ಚಡಚಣ ತಾಲ್ಲೂಕಿನ ಎಲ್ಲ ಇಲಾಖೆಗಳ ಸಹಯೋಗದಲ್ಲಿ ನಡೆದ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಅದಲ್ಲದೆ ‌ಇಡೀ ಕಾರ್ಯಕ್ರಮವನ್ನು ಪತ್ರಕರ್ತರಿಗೆ ಸಮರ್ಪಿಸಿದ್ದು ವಿಶೇಷವಾಗಿತ್ತು.
ಈ ವೇಳೆ ಪತ್ರಕರ್ತರಾದ ಉಮೇಶ್ ಕೊಳೆಕರ, ಶಂಕರ್ ಜಮಾದಾರ ಮಾತನಾಡಿ, ಪ್ರಜ್ಞಾವಂತ ಜನರು ಅನ್ಯಾಯದ ವಿರುದ್ಧ ಮೌನ ತಾಳಬಾರದು. ಪ್ರಶ್ನೆ ಮಾಡುವ ಶಿಕ್ಷಣ ಶಕ್ತಿ ಹೊಂದಬೇಕು.
ಬಾಬಾ ಸಾಹೇಬರು ಪ್ರಜಾಪ್ರಭುತ್ವದ ಬಗ್ಗೆ ಆಳವಾಗಿ ಚಿಂತಿಸಿ, ಅವರ ತಿಳಿವನ್ನು ಹರಳುಗಟ್ಟಿಸಿ ಪ್ರಜಾಪ್ರಭುತ್ವಕ್ಕೆ ಒಂದು ವ್ಯಾಖ್ಯಾನ ಕೊಡುತ್ತಾರೆ, ‘ರಕ್ತಪಾತವಿಲ್ಲದೆ ಪ್ರಜೆಗಳ ಆರ್ಥಿಕ ಮತ್ತು ಸಾಮಾಜಿಕ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವ ಸರ್ಕಾರದ ಒಂದು ಸ್ವರೂಪ ಮತ್ತು ಒಂದು ವಿಧಾನ’ ಪ್ರಜಾಪ್ರಭುತ್ವ. ಅಸಮಾನತೆ ಇರಬಾರದು. ಅಸಮಾನತೆ ಹೆಚ್ಚಾದರೆ ಇದರ ಹೊಟ್ಟೆಯೊಳಗೆ ಹಿಂಸೆಯ ಬೀಜಗಳು ಮೊಳೆಯುತ್ತವೆ ಎನ್ನುತ್ತಾರೆ. ಆಡಳಿತ ಪಕ್ಷವನ್ನು ಕಠಿಣ ಪರೀಕ್ಷೆಗೆ ಒಳಪಡಿಸುವ ಒಂದು ಪ್ರಭಲ ವಿರೋಧ ಪಕ್ಷ ಇದ್ದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತದೆ. ಆಡಳಿತ ಮತ್ತು ಕಾನೂನಿನ ಮುಂದೆ ಎಲ್ಲರೂ ಸಮಾನವಾಗಿರಬೇಕು. ಸಂವಿಧಾನದ ಮೌಲ್ಯಗಳನ್ನು ಮೀರಿದಾಗ, ಒಂದು ಗಂಭೀರ ತಪ್ಪು ಮಾಡಿದಾಗ ಆಗುವ ವೇದನೆಯಾಗಿ ಮನುಷ್ಯ ಪರಿವರ್ತನೆ ಆಗಬೇಕು. ಈ ಬಗೆಯ ಸಂವಿಧಾನಿಕ ನೈತಿಕತೆ ಜನರಲ್ಲಿ ನೆಲೆಗೊಂಡಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಹೇಳಿದರು.
ಉಪನ್ಯಾಸಕ ರವಿ ಅರಳಿ ಉಪನ್ಯಾಸ ನೀಡಿದರು.
ಮಹಾಂತೇಶ ಶಾಸ್ತ್ರಿಗಳು, ತಹಸೀಲ್ದಾರ ಬಿ.ಎಸ್.ಕಡಕಬಾವಿ, ವಲಯ ಅರಣ್ಯಾಧಿಕಾರಿ ಎಸ್.ಜೆ.ಸಂಗಾಲಕ, ದುಂಡಪ್ಪ ಮುಜಗೊಂಡ ಮಾತನಾಡಿದರು.
ವೇದಿಕೆಯ ಮೇಲೆ ಗ್ರಾ.ಪಂ ಅಧ್ಯಕ್ಷೆ ಶಾಂತಾಬಾಯಿ ಮೇಲಿನಮನಿ,ಇಒ ಬಾಬು ರಾಠೋಡ,ವಲಯ ಅರಣ್ಯಾಧಿಕಾರಿ ಮಂಜುನಾಥ ಧುಳೆ, ಪಶು ವೈದ್ಯಾಧಿಕಾರಿ ರಾಜಕುಮಾರ ಅಡಕಿ, ಚಡಚಣ ಇಒ ಸಂಜಯ ಖಡಗೇಕರ ಸೇರಿದಂತೆ ಇಂಡಿ ಮತ್ತು ಚಡಚಣ ತಾಲೂಕಿನ ಎಲ್ಲ ಪರ್ತಕರ್ತರು ಪಾಲ್ಗೊಂಡಿದ್ದರು.
ಇದೇ ವೇಳೆ ಸಸಿಗಳನ್ನು ನೇಡಲಾಯಿತು. ಮತ್ತು ಮಾನವ ಸರಪಳಿ ನಿರ್ಮಿಸಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.