Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಚ್ಛತೆ ನಮ್ಮಬದ್ಧತೆ ಮತ್ತು ಆದ್ಯತೆಯಾಗಬೇಕು
(ರಾಜ್ಯ ) ಜಿಲ್ಲೆ

ಸ್ವಚ್ಛತೆ ನಮ್ಮಬದ್ಧತೆ ಮತ್ತು ಆದ್ಯತೆಯಾಗಬೇಕು

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

’ವಾಷ್‌ಥಾನ್’ ಓಟಕ್ಕೆ ಹಸಿರು ನಿಶಾನೆ ತೋರಿದ ಸಚಿವ ಶಿವಾನಂದ ಪಾಟೀಲ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಾರ್ವಜನಿಕ ಸ್ಥಳಗಳ ನೈರ್ಮಲ್ಯ ಹಾಗೂ ಸ್ವಚ್ಚತೆ ವಿಷಯವಾಗಿ ಬದ್ಧತೆ ತೋರಬೇಕಾಗಿರುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ, ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ ಪ್ರತಿಪಾದಿಸಿದರು.
ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ನವದೆಹಲಿಯ ಲಾಡಲಿ ಫೌಂಡೇಷನ್ ಸಾರಥ್ಯದಲ್ಲಿ ಸ್ವಚ್ಚತೆ, ನೈರ್ಮಲ್ಯದ ಜಾಗೃತಿಗಾಗಿ ವಿಶೇಷ ಮ್ಯಾರಾಥಾನ್, ನಡಿಗೆ ಹೀಗೆ ಎಲ್ಲವನ್ನೂ ಕೇಂದ್ರಿಕರಿಸಿದ `ವಾಷ್‌ಥಾನ್’ ಹೆಸರಿನ ಓಟಕ್ಕೆ ಹಸಿರು ನಿಶಾನೆ ತೋರಿದ ಅವರು, ಮನೆ, ಸುತ್ತಮುತ್ತಲಿನ ಪರಿಸರ ಹೀಗೆ ಎಲ್ಲವೂ ಸ್ವಚ್ಛತೆಯಿಂದ ಇರಬೇಕು, ಸ್ವಚ್ಛತೆ ನಮ್ಮಬದ್ಧತೆ, ನಮ್ಮ ಆದ್ಯತೆಯಾಗಬೇಕು ಎಂದರು.
ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರ ಸಂಚಾರ ಹೆಚ್ಚಾಗಿರುತ್ತದೆ, ಹೀಗಾಗಿ ಅವುಗಳು ಸ್ವಚ್ಚವಾಗಿರಬೇಕಾಗಿರುವುದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಹ ಸ್ವಚ್ಚತೆ, ಶೌಚಾಲಯ ನಿರ್ಮಾಣ ಹೀಗೆ ಅನೇಕ ರೀತಿಯ ಸ್ವಚ್ಚತೆಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಿದೆ ಎಂದರು.
ನವದೆಹಲಿಯ ಲಾಡಲಿ ಪೌಂಡೇಷನ್ ಅತ್ಯಾಧುನಿಕ ಎ.ಐ. ತಂತ್ರಜ್ಞಾನದ ಶೌಚಾಲಯಗಳನ್ನು ಜಿಲ್ಲೆಯ ವಿವಿಧ ಶಾಲೆ, ಸಾಮುದಾಯಿಕ ಕೇಂದ್ರಗಳಲ್ಲಿ ನಿರ್ಮಿಸಿರುವುದು ಅತ್ಯಂತ ಸ್ತುತ್ಯಾರ್ಹ ಸಮಾಜ ಸೇವಾ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಲಾಡಲಿ ಫೌಂಡೇಷನ್ ರಾಷ್ಟ್ರೀಯ ಸಲಹೆಗಾರ ಡಾ.ಜಾವೀದ ಜಮಾದಾರ ಮಾತನಾಡಿ, ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆಯಾಗಿರುವ ಲಾಡಲಿ ಫೌಂಡೇಷನ್ ವಿಜಯಪುರ ಜಿಲ್ಲೆಯನ್ನು ದತ್ತು ಜಿಲ್ಲೆಯನ್ನಾಗಿಸಿಕೊಂಡು ತನ್ನ ಸೇವಾ ಕಾರ್ಯಕ್ಕೆ ಮುಂದಾಗಿದೆ, ೩ ಕೋಟಿ ರೂ.ಗೂ ಅಧಿಕ ವೆಚ್ಚದ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಈ ಭಾಗದಲ್ಲಿ ಕೈಗೊಳ್ಳುತ್ತಿದೆ ಎಂದು ವಿವರಿಸಿದರು.
ಲಾಡಲಿ ಫೌಂಡೇಷನ್ ಸಿಇಓ ದೇವೆಂದ್ರ ಗುಪ್ತಾ ಮಾತನಾಡಿ, ಲಾಡಲಿ ಫೌಂಡೇಷನ್ ಒಂದು ಲಾಭರಹಿತ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ, ಜಮ್ಮುಕಾಶ್ಮೀರ, ಗುಜರಾತ್, ಕರ್ನಾಟಕ ಹೀಗೆ ಅನೇಕ ರಾಜ್ಯಗಳಲ್ಲಿ ಸ್ವಚ್ಚತೆ, ನೈರ್ಮಲ್ಯದ ಬಗ್ಗೆ ಕಾರ್ಯಕ್ರಮ ಸಂಘಟನೆ, ಅತ್ಯಾಧುನಿಕ ಎಐ ಆಧಾರಿತ ಶೌಚಾಲಯ ನಿರ್ಮಾಣಕ್ಕೆ ಒತ್ತು ನೀಡಿದೆ. ಶ್ರೀ ರಾಮಜನ್ಮಭೂಮಿ ಅಯೋಧ್ಯೆಯ ಸಂಪೂರ್ಣ ನೈರ್ಮಲ್ಕೀಕರಣದ ಸಂಕಲ್ಪ ಮಾಡಿ ಈ ಪವಿತ್ರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದೆ ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವನೆ, ವಿವಿಧ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

`ವಾಷ್‌ಥಾನ್’ ಸಂಭ್ರಮ

ನಸುಕಿನಲಿ ನೇಸರನ ಕಿರಣಗಳು ಒಡಮೂಡುವ ಮೊದಲೇ ಐತಿಹಾಸಿಕ ಗೋಳಗುಮ್ಮಟ ಸ್ವಚ್ಛತೆ ಜಾಗೃತಿಯ ಸಂದೇಶ ಸಾರುವ ವಾಷ್‌ಥಾನ್' ಸಂಭ್ರಮ ಉದಯಿಸಿತ್ತು. ಚುಮುಚುಮು ಚಳಿ, ಹಸಿರ ಸಿರಿಯಲ್ಲಿ ಸಾವಿರಾರು ಯುವಕರ ದಂಡು ಗೋಳಗುಮ್ಮಟ ಆವರಣದಲ್ಲಿ ಕಿಕ್ಕಿರಿದು ತುಂಬಿದ್ದರು. ವಿಜಯಪುರದಲ್ಲಿ ಸ್ವಚ್ಚತೆ, ನೈರ್ಮಲ್ಯದ ಜಾಗೃತಿಗಾಗಿ ವಿಶೇಷ ಮ್ಯಾರಾಥಾನ್, ನಡಿಗೆ ಹೀಗೆ ಎಲ್ಲವನ್ನೂ ಕೇಂದ್ರಿಕರಿಸಿದವಾಷ್‌ಥಾನ್’ ಹೆಸರಿನ ಓಟ ಯಶಸ್ವಿಯಾಗಿ ನಡೆಯಿತು. ನಡಿಗೆಯಲ್ಲಿ ೧೫ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ವಾಷ್‌ಥಾನ್ ಯಶಸ್ಸಿಗೆ ಕೈ ಜೋಡಿಸಿದರು.
ವಿಜಯಪುರ ಜಿಲ್ಲೆಯನ್ನು ಸೇವೆಯ ದತ್ತು ಜಿಲ್ಲೆಯಾಗಿ ಸ್ವೀಕರಿಸಿರುವ ನವದೆಹಲಿಯ ಲಾಡಲಿ ಫೌಂಡೇಷನ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಓಟದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಟೀ-ಶೀರ್ಟ್ ನೀಡಲಾಗಿತ್ತು. ಸ್ವಚ್ಛತೆಯ ಸಂದೇಶ ಸಾರುವ ಶುಭ್ರ ಹಾಗೂ ಹಸಿರು ವರ್ಣದ ಸಮ್ಮಿಳಿತವುಳ್ಳ ಟೀಶರ್ಟ್ಗಳನ್ನು ಧರಿಸಿದ ಸಾವಿರಾರು ಯುವಕ, ಯುವತಿಯರು ಓಟದಲ್ಲಿ ಭಾಗವಹಿಸಿದರು.
ಸ್ವಚ್ಛತೆಯ ಮಹತ್ವ ಸಾರುವ, ಕೈ ತೊಳೆಯುವುದರಿಂದ ಆಗುವ ಪ್ರಯೋಜನಗಳು ಮೊದಲಾದವುಗಳನ್ನು ಸಚಿತ್ರವಾಗಿ ವಿವರಿಸುವ ಫಲಕಗಳು ಎಲ್ಲೆಡೆ ರಾರಾಜಿಸಿದವು.
ಮ್ಯಾರಾಥಾನ್ ಹಾಗೂ ನಡಿಗೆ ಹೀಗೆ ಅನೇಕ ವಿಭಾಗಗಳಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಜಿಲ್ಲಾಧಿಕಾರಿ ಟಿ. ಭೂಬಾಲನ್, ಸಿಇಓ ರಿಷಿ ಆನಂದ್, ಎಸ್.ಪಿ. ಋಷಿಕೇಶ ಸೋನಾವಣೆ, ಲಾಡಲಿ ಫೌಂಡೇಷನ್ ರಾಷ್ಟ್ರೀಯ ಸಲಹೆಗಾರ ಡಾ.ಜಾವೀದ ಜಮಾದಾರ, ಲಾಡಲಿ ಫೌಂಡೇಷನ್ ಸಿಇಓ ದೇವೆಂದ್ರ ಗುಪ್ತಾ ಪಾಲ್ಗೊಂಡಿದ್ದರು.

“ಸ್ವಚ್ಛತೆ ಜಾಗೃತಿಗಾಗಿ ವಿವಿಧ ರೀತಿಯ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಲಾಡಲಿ ಫೌಂಡೇಷನ್ ಮುಂದಾಗಿರುವುದು ಹೆಮ್ಮೆಯ ಸಂಗತಿ. ಈ ಎಲ್ಲ ಕಾರ್ಯಗಳಿಗೆ ಜಿಲ್ಲಾಡಳಿತ ಸದಾ ಸಹಕಾರ ನೀಡಲಿದೆ. ಸರ್ಕಾರಿ ಶಾಲೆಗಳಲ್ಲಿ ಆರೋಗ್ಯ ಜಾಗೃತಿ, ಅತ್ಯಧುನಿಕ ಶೌಚಾಲಯ ನಿರ್ಮಾಣ ಕಾರ್ಯ ಮಾಡಿರುವುದು ನಿಜಕ್ಕೂ ಉತ್ತಮವಾದ ಕಾರ್ಯ.”

– ಟಿ. ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

ಪಾಲ್ಗೊಂಡ ೧೦ ಸಾವಿರಕ್ಕೂ ಅಧಿಕ ಜನ!

೨೧ ಕಿ.ಮೀ. ಮ್ಯಾರಾಥಾನ್ ವಿಭಾಗದಲ್ಲಿ ಐತಿಹಾಸಿಕ ಗೋಳಗುಮ್ಮಟದಿಂದ ಐತಿಹಾಸಿಕ ಬೇಗಂ ತಲಾಬ್‌ವರೆಗೆ ನಡೆದರೆ, ಇನ್ನೊಂದು ೧೦ ಕಿ.ಮೀ. ವಿಭಾಗದ ಮ್ಯಾರಾಥಾನ್ ಗೋಳಗುಮ್ಮಟದಿಂದ ಇಟಗಿ ಪೆಟ್ರೋಲ್ ಪಂಪ್ (ಅಥಣಿ ರಸ್ತೆ)ಯವರೆಗೆ ನಡೆಯಿತು, ಇನ್ನೊಂದು ವಿಭಾಗದಲ್ಲಿ ೫ ಕಿ.ಮೀ. ವಿಭಾಗದಲ್ಲಿ ಗೋಳಗುಮ್ಮಟದಿಂ ಶಿವಾಜಿ ಮಹಾರಾಜರ ವೃತ್ತದವರೆಗೆ ಮ್ಯಾರಾಥಾನ್ ನಡೆಯಿತು. ನಡಿಗೆಯಲ್ಲಿಯೇ ೧೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಾಷ್‌ಥಾನ್‌ಗೆ ಹಸಿರು ನಿಶಾನೆ ತೋರುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.