Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಜಮೀನುಗಳಿಗೆ ನೀರು ಹರಿಸುವವರೆಗೂ ವಿಶ್ರಾಂತಿ ಇಲ್ಲ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ರೈತರ ಜಮೀನುಗಳಿಗೆ ನೀರು ಹರಿಸುವವರೆಗೂ ವಿಶ್ರಾಂತಿ ಇಲ್ಲ :ಬೆಳ್ಳುಬ್ಬಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುಳವಾಡದಲ್ಲಿ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ

ಕೊಲ್ಹಾರ: ತಾಲ್ಲೂಕಿನ ಮುಳವಾಡ ಗ್ರಾಮದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಅಖಿಲಗೌಡ ಪಾಟೀಲ್, ಸಂಗನಗೌಡ ಯಂಕಂಚಿ, ಪ್ರವೀಣ ಬುಟೆ, ಬಸವರಾಜ ಬಾಗೇವಾಡಿ, ಸಂಗಮೇಶ ಬಾಟಿ ಸೇರಿದಂತೆ 16 ಹಳ್ಳಿಗಳ ನೂರಾರು ಯುವಕರು ಬಸವನಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು.

ಈ ವೇಳೆ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಕಾಂಗ್ರೆಸ್ ದುರಾಡಳಿತ ಮತ್ತು ಜವಾಬ್ದಾರಿ ಮರೆತ ಶಾಸಕ ಶಿವಾನಂದ ಪಾಟೀಲರ ಸರ್ವಾಧಿಕಾರಿ ಧೋರಣೆಗೆ ಬೇಸತ್ತು ಇಂದು ಸಾವಿರಾರು ಜನ ಯುವಕರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಕಾರ್ಯಕರ್ತರೇ ಪಕ್ಷದ ಶಕ್ತಿ. ಮುಳವಾಡ, ಚಿಮ್ಮಲಗಿ, ಗುತ್ತಿ ಬಸವಣ್ಣ ನೀರಾವರಿ ಯೋಜನೆಗಳು ಸಾಕಾರಗೊಂಡಿದ್ದು ಬಿಜೆಪಿ ಅಧಿಕಾರವಧಿಯಲ್ಲಿ. ಈ ಬಾರಿ ಮತಕ್ಷೇತ್ರದ ಜನ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದೇಶ್ವರ ಶ್ರೀಗಳಿಗೆ ನೀಡಿದ್ದ ವಚನದಂತೆ ಮೂರನೇ ಹಂತದ ನೀರು ರೈತರ ಜಮೀನುಗಳಿಗೆ ಹರಿಸುವವರೆಗೂ ವಿಶ್ರಾಂತಿ ಪಡೆಯುವುದಿಲ್ಲ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಮತಕ್ಷೇತ್ರದ ಜನ ನನಗೆ ಮತ್ತೊಮ್ಮೆ ಕೊನೆಯ ಬಾರಿ ಆಶಿರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಯುವ ಮುಖಂಡ ಅಖಿಲಗೌಡ ಪಾಟೀಲ್ ಮಾತನಾಡಿ, ಕಾಂಗ್ರೆಸ್ ನಲ್ಲಿ ನಿಷ್ಟಾವಂತ ಕಾರ್ಯಕರ್ತರಿಗೆ ಬೆಲೆಯಿಲ್ಲ. ಶಾಸಕರು ಹಾಗೂ ಅವರ ಹಿಂಬಾಲಕರ ಸರ್ವಾಧಿಕಾರಿ ಧೋರಣೆಗೆ ಬೇಸತ್ತು ನಾನು ಸೇರಿ ಸಾವಿರಾರು ಯುವಕರು ಇಂದು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದೇವೆ. ಬಿಜೆಪಿಯಲ್ಲಿ ದುಡಿಯುವವರಿಗೆ, ಯುವಕರಿಗೆ ಉತ್ತಮ ಭವಿಷ್ಯವಿದೆ. ನಮ್ಮ ಅಭ್ಯರ್ಥಿ ಎಸ್.ಕೆ ಬೆಳ್ಳುಬ್ಬಿ ಅವರ ಗೆಲುವಿಗಾಗಿ ಎಲ್ಲರೂ ಕಂಕಣಬದ್ಧರಾಗಿ ಶ್ರಮಿಸುತ್ತೇವೆ. ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲುವು ನಿಶ್ಚಿತ ಎಂದರು.

ಉತ್ತರಾಖಂಡ ರಾಜ್ಯಸಭಾ ಸದಸ್ಯ ನರೇಶ ಬನ್ಸಾಲ್, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶಂಕರಗೌಡ ಪಾಟೀಲ್, ಮುಖಂಡರಾದ ಸಂಗನಗೌಡ ಚಿಕ್ಕೊಂಡ, ಅಪ್ಪಣ್ಣ ಐಹೊಳ್ಳಿ, ಸಂಗಮೇಶ ವಾಡೇದ, ಹನುಮಂತ ಕಳಸಗೊಂಡ, ಜಗದೀಶ ಸುನಗದ ಸೇರಿ ಹಲವು ಪ್ರಮುಖರಿದ್ದರು.

BASAVAN BAGEWADI bjp S K BELLUBBI udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.