Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಂ.ಬಿ.ಪಾಟೀಲರಿಂದಾಗಿ ಮತಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿ :ಮುರುಘೇಂದ್ರ ಶ್ರೀ
(ರಾಜ್ಯ ) ಜಿಲ್ಲೆ

ಎಂ.ಬಿ.ಪಾಟೀಲರಿಂದಾಗಿ ಮತಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿ :ಮುರುಘೇಂದ್ರ ಶ್ರೀ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಕ್ಕುಂಡಿಯಲ್ಲಿ ನಡೆದ ಜಲ ರತ್ನಾಕರ ಪ್ರಶಸ್ತಿ ಪ್ರದಾನ ಸಮಾರಂಭ | 3ಕೃತಿಗಳ ಲೋಕಾರ್ಪಣೆ

ವಿಜಯಪುರ: ಜಿಲ್ಲೆಯ ಜನ ನೆಮ್ಮದಿಯ ಬದುಕು ಸಾಗಿಸುವ ಕೆಲಸ ಮಾಡಿದ್ದೇನೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಬಬಲೇಶ್ವರ ತಾಲೂಕಿನ ಯಕ್ಕುಂಡಿಯಲ್ಲಿ ನಡೆದ ಜಲ ರತ್ನಾಕರ ಪ್ರಶಸ್ತಿ ಪ್ರಧಾನ ಮತ್ತು ಮೂರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಲಸಂಪನ್ಮೂಲ ಸಚಿವನಾಗಿದ್ದಾಗ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಈ ಬಾಗದಲ್ಲಿ ರೂ. 14000 ಕೋ. ವೆಚ್ಚದಲ್ಲಿ ನಾನಾ ನೀರಾವರಿ ಯೋಜನೆಗಳನ್ನು ಮಾಡಿದ್ದೇನೆ. ಇದರಿಂದಾಗಿ ರೈತರು ತೋಟಗಾರಿಕೆ ಬೆಳೆಗಳ ರಕ್ಷಣೆಗಾಗಿ ಪ್ರತಿವರ್ಷ ಟ್ಯಾಂಕರ್ ಮೂಲಕ ನೀರು ಖರೀದಿಸುವ ಅನಿವಾರ್ಯತೆ ತಪ್ಪಿದೆ. ಶ್ರೀಗಳು ನನಗೆ ಜಲನಾಯಕ ಎಂದು ಬಿರುದು ನೀಡಿರುವುದು ವಿಶ್ವಶ್ರೇಷ್ಠ ಪ್ರಶಸ್ತಿಯಾಗಿದೆ ಎಂದು ಅವರು ತಿಳಿಸಿದರು.
ನಮ್ಮ ಜನ ಶ್ರೀಮಂತರಾಗಿ ನೆಮ್ಮದಿಯ ಜೀವನ ಸಾಗಿಸಲು ಕ್ರಮ ಕೈಗೊಂಡಿದ್ದೆ. ಜೀವನಕ್ಕೆ ಅಗತ್ಯವಾಗಿರುವ ಜಲ, ವೃಕ್ಷ, ಶಿಕ್ಷಣಕ್ಕೆ ಒತ್ತು ನೀಡಿದ್ದೇನೆ ಎಂದು ಎಂ. ಬಿ. ಪಾಟೀಲ ತಿಳಿಸಿದರು.
ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ ಮಾತನಾಡಿ, ಎಂ. ಬಿ. ಪಾಟೀಲರ ಅಭಿವೃದ್ಧಿ ಕಾರ್ಯಗಳಿಂದಾಗಿ ಮತಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಿದೆ. ಅವರು ಯಾರಿಗೂ ಮೋಸ ಮಾಡಿಲ್ಲ. ಅನ್ಯಾಯ ಮಾಡಿಲ್ಲ. ಯಾರಿಂದಲೂ ಏನೂ ಕಿತ್ತುಕೊಂಡಿಲ್ಲ. ಬರದ ನಾಡಾಗಿದ್ದ ವಿಜಯಪುರ ಜಿಲ್ಲೆಯನ್ನು ಮಲೆನಾಡಾಗಿ ಮಾಡಿದ್ದಾರೆ. ನಾಡಿನ ಎಲ್ಲ ಸಂತರು, ಯುವಕರು, ಮಹಿಳೆಯರು ಅವರ ಪರ ಇರುವ ಕಾರಣ ಅವರ ಭವಿಷ್ಯ ಉಜ್ವಲವಾಗಿದೆ. ಉತ್ತಮ ಸಂಸ್ಕಾರ ಹೊಂದಿರುವ ನಾಯಕರ ಎಲ್ಲರೂ ಇರಬೇಕು ಎಂದು ಹೇಳಿದರು.

ಮುಖಂಡರಾದ ಕಂಠೀರವ ಕುಲ್ಲೊಳ್ಳಿ ಮಾತನಾಡಿ, ಮೊದಲು ಜನ ಗುಳೆ ಹೋಗುತ್ತಿದ್ದ ಕಾರಣ ಈ ಭಾಗದ ಗ್ರಾಮಗಳಲ್ಲಿ ಮನೆಗಳಿಗೆ ಜನ ಕೀಲಿ ಹಾಕುತ್ತಿದ್ದರು. ಈಗ ಇದೇ ಜನ ತಂತಮ್ಮ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಕಾರಣ ಮನೆಗಳಿಗೆ ಕೀಲಿ ಹಾಕುತ್ತಿದ್ದಾರೆ. ಇದು ಅಭಿವೃದ್ಧಿಯ ಸಂಕೇತವಾಗಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಎಂ. ಬಿ. ಪಾಟೀಲ ಅವರಿಗೆ ಗ್ರಾಮಸ್ಥರು ಜಲ ರತ್ನಾಕರ ಬಿರುದು ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಕುಬೇರ ಗುರುರಾಜ ಗೋಡೆಕರ ರಚಿಸಿರುವ ಎಂ. ಬಿ. ಪಾಟೀಲರ ಸಾಧನೆಯ ಹೆಜ್ಜೆಗಳು ಪುಸ್ತಕ, ಶಿವರಾಜ ಬಡಿಗೇರ ರಚಿಸಿರುವ ಮನದಂಗಳದ ಹೂ ಕವನ ಸಂಕಲನ ಮತ್ತು ಭಾಗ್ಯಶ್ರೀ ಆರ್. ಪಾಟೀಲ ಬಿರಾದಾರ ರಚಿಸಿರುವ ಜಲೋಪಕಾರಿ ಕವನ ಸಂಕಲನ ಬಿಡುಗಡೆ ಮಾಡಲಾಯಿತು. ಅಲ್ಲದೇ, ಪುಸ್ತಕ ರಚನೆಕಾರರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಈರನಗೌಡ ಬಿರಾದಾರ, ಟಿ. ಎಸ್. ಕುಲಕರ್ಣಿ, ಪ್ರಕಾಶ ಸೊನ್ನದ, ಶೇಕಪ್ಪ ಕೊಪ್ಪದ, ವಿ. ಎಸ್. ಪಾಟೀಲ,ಚನ್ನಪ್ಪ ಕೊಪ್ಪದ, ಪ್ರಕಾಶ ಸೊನ್ನದ, ಡಾ. ಮಹಾಂತೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS congress m b patil udaya rashmi
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.