ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಮಕ್ಕಳು ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಠಿಕ ಆಹಾರ, ದ್ವಿದಳ ಧಾನ್ಯ, ಸಿರಿಧಾನ್ಯ ಹಾಗೂ ಹಸಿರು ತರಕಾರಿಗಳು ಸೇವಿಸಬೇಕೆಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ ರಾಜಶೇಖರ್ ನರಗೋದಿ ಹೇಳಿದರು.
ಪಟ್ಟಣದ ಹೂಗಾರ ಲೇಔಟನಲ್ಲಿರುವ ವಿದ್ಯಾಚೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಕಾರ್ಯಕ್ರಮದ ಅಡಿಯಲ್ಲಿ ಹಮ್ಮಿಕೊಂಡ ಪೌಷ್ಟಿಕತೆ, ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕುರುಕುರೆ, ಪಿಜ್ಜಾ, ಬರ್ಗರ್ ಇವೆಲ್ಲ ಜಂಗ್ಫುಡ್ ಇದರಿಂದ ದೇಹಕ್ಕೆ ಹಾನಿಕರವಾಗುವುದು. ಇಂತಹ ತಿಂಡಿಗಳನ್ನು ಮಕ್ಕಳು ಸೇವಿಸಬಾರದು. ಇದರಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುವುದು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಕುಸುಮ ಯಾಳಗಿ, ಸಕ್ಕುಬಾಯಿ ಡಾಂಗಿ, ವಿಕಾಸ್, ದೀಕ್ಷಾ, ರೂಪಾ ಪ್ರತಿಜ್ಞಾವಿಧಿ ಭೋಧಿಸಿದರು. ಮಕ್ಕಳಾದ ಈಶ್ವರಿ, ಸೃಷ್ಟಿ, ಭುವನ್ ಭೂತಿ, ಕಾರ್ತಿಕ್ ಭಾಷಣ ಮಾಡಿದರು. ಅರ್ಪಿತ, ಪೂರ್ಣಿಮಾ, ಸಂಗಮೇಶ್, ಶಂಕರ್, ಈಶ್ವರ್, ಹರೀಶ್, ಪೌಷ್ಟಿಕಾಂಶಗಳಿಗೆ ಸಂಬAಧಿಸಿದ ಕಥೆಗಳನ್ನು ವಾಚಿಸಿದರು. ರವಿಕುಮಾರ್, ಮಲ್ಲಿಕಾರ್ಜುನ್, ಭಗವಂತ, ಮಲ್ಕಪ್ಪ, ಪೌಷ್ಟಿಕಾಂಶದ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ಮಕ್ಕಳು ಇದ್ದರು.

