Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆತ್ಮಹತ್ಯೆ ತಡೆಗೆ ಸಾರ್ವಜನಿಕರಲ್ಲಿ ಅರಿವು ಅಗತ್ಯ :ಕುಲಕರ್ಣಿ
(ರಾಜ್ಯ ) ಜಿಲ್ಲೆ

ಆತ್ಮಹತ್ಯೆ ತಡೆಗೆ ಸಾರ್ವಜನಿಕರಲ್ಲಿ ಅರಿವು ಅಗತ್ಯ :ಕುಲಕರ್ಣಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಆತ್ಮಹತ್ಯೆಯನ್ನು ತಡೆಯಬೇಕೆಂದರೆ ನಾವು ಸಾರ್ವಜನಿಕರಲ್ಲಿ ಅರಿವನ್ನು ಮೂಡಿಸಬೇಕು. ಜನರು ಮುಕ್ತವಾಗಿ ಮಾನಸಿಕ ಆರೋಗ್ಯ ಮತ್ತು ಖಿನ್ನತೆಯ ಬಗ್ಗೆ ಮಾತನಾಡಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು.
ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ವಿಜಯಪುರ ಜಿಲ್ಲಾ ಮನೋರೋಗ ವಿಭಾಗ, ಹಾಗೂ ತಾಲೂಕ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡ ವಿಶ್ವ ಆತ್ಮಹತ್ಯೆ ತಡೆ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಒಂದಲ್ಲ ಒಂದು ಸಮಸ್ಯೆಯಲ್ಲಿ ಇರುತ್ತಾರೆ. ಆ ಸಮಸ್ಯಗೆ ಹೆದರದೆ, ಜೀವನದಲ್ಲಿ ಕುಗ್ಗದೆ ಅದನ್ನು ಎದುರಿಸಿ ಜೀವನ ಸಾಗಿಸಬೇಕು. ನಮ್ಮ ಸುತ್ತಮುತ್ತಲು ಅನೇಕ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಚಿಂತನೆಯಲ್ಲಿ ಇರುತ್ತಾರೆ. ಅದು ನಮ್ಮ ನಿಮ್ಮ ಗಮನಕ್ಕೆ ಬಂದರೆ ತಡೆಗಟ್ಟಿ ಆ ವ್ಯಕ್ತಿಯ ಮನಃ ಪರಿವರ್ತನೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟಬೇಕು. ನಮ್ಮ ಮಾನಸಿಕ ಆರೋಗ್ಯ ನಾವು ಕಾಪಾಡಿಕೊಳ್ಳಬೇಕು ಎಂದರು.
ಈ ವೇಳೆ ವಿಜಯಪುರ ಜಿಲ್ಲಾಸ್ಪತ್ರೆಯ ಮನೋವೈದ್ಯ ಡಾ.ಮಂಜುನಾಥ ಮಸಳಿ ಮಾತನಾಡಿ, ಆತ್ಮಹತ್ಯೆ ಮಾಡಿಕೊಳ್ಳಲು ಹೆಚ್ಚು ಪ್ರಯತ್ನ ಮಾಡುವವರು ಸ್ವ-ಉದ್ಯೋಗ ಮಾಡುವವರು ಹಾಗೂ ಮಹಿಳೆಯರು. ಏಕೆಂದರೆ ಕುಟುಂಬದಲ್ಲಿ ಒಂದು ಚಿಕ್ಕ ಸಮಸ್ಯೆಗೂ ಅವರು ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರ ತಲೆಯಲ್ಲಿ ಮೊದಲು ವಿಚಾರ ಬರುವುದು ನಾನು ಸಾಯಬೇಕು. ಇದರಿಂದ ನನಗೆ ನೆಮ್ಮದಿ ಸಿಗಬಹುದು ಎಂದು. ಇಂತಹ ಸಮಯದಲ್ಲಿ ಸ್ವಲ್ಪ ತಾಳ್ಮೆ ತೆಗೆದುಕೊಳ್ಳಬೇಕು. ತಮ್ಮ ಮುಂದಿನ ಭವಿಷ್ಯ ಹಾಗೂ ಮಕ್ಕಳ ಭವಿಷ್ಯದ ಕುರಿತು ವಿಚಾರ ಮಾಡಬೇಕು. ಇಂತಹ ಸಮಸ್ಯೆಗಳು ಇರುವವರು ಮಾನಸಿಕ ತಜ್ಞರನ್ನು ಕಾಣಬೇಕು. ಇದು ಮುಜುಗರಯಾದಲ್ಲಿ ಅಂತಹವರು ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಸಹಾಯವಾಣಿ ೧೪೪೧೬ಗೆ ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಮತನಾಡಿ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳಬಹುದು. ಸರಕಾರಿ ಸಾರ್ವಜನಿಕ ಆಸ್ಪತ್ರೆ ಸಿಂದಗಿಯಲ್ಲಿ ಪ್ರತಿ ತಿಂಗಳ ಮೊದಲನೆ ಮಂಗಳವಾರದಂದು ಮನೋತಜ್ಞರು ಲಭ್ಯವಿದ್ದಾರೆ. ಇಲ್ಲಿ ಚಿಕಿತ್ಸೆ ಸಂಪೂರ್ಣ ಉಚಿತ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ, ಸಹನಿರ್ದೇಶಕಿ ಸಿಸ್ಟರ್ ಸಿಂತಿಯಾ ಡಿಮೆಲ್ಲೊರ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿದ ಹಳ್ಳಿಗಳಿಂದ ಮಹಿಳೆಯರು, ಯುವಕರು, ಕಟ್ಟಡ ಕಾರ್ಮಿಕರು, ವಿಶೇಷ ಚೇತನರು ಮತ್ತು ಸಂಗಮ ಸಂಸ್ಥೆಯ ಎಲ್ಲ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಸವರಾಜ ಬಿಸನಾಳ ಕಾರ್ಯಕ್ರಮ ನಿರೂಪಿಸಿದರು. ಉಮೇಶ ದೊಡಮನಿ ಸ್ವಾಗತಿಸಿದರು. ಮತ್ತು ಮಲಕಪ್ಪ ಹಲಗಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.