ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಾಲಟ್ಟಿ, ಕೊಟ್ಯಾಳ ಹಾಗೂ ಬಬಲೇಶ್ವರ ತಾಲೂಕಿನ ದಾಶ್ಯಾಳ, ಸಾರವಾಡ, ಹೊನಗನಹಳ್ಳಿ ಮತ್ತು ತೊನಶ್ಯಾಳ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಿದರು.
ಮಳೆಯಿಂದ ಹಾನಿಯಾಗಿರುವ ಬೆಳೆ ಸರಿಯಾಗಿ ನಿಯಮಾನುಸಾರ ಸಮೀಕ್ಷೆ ಕೈಗೊಳ್ಳಲು ತಿಳಿಸಿದರು. ಸಮೀಕ್ಷಾ ಕಾರ್ಯಕ್ಕೆ ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಬೆಳೆಗಳ ಜೊತೆಗೆ ಹಾನಿಗೊಳಗಾದ ಮನೆಗಳ ಕುರಿತು ಹಾಗೂ ಇತರೆ ಅಂಶಗಳ ಕುರಿತು ಸಹ ಸಮೀಕ್ಷೆ ನಡೆಸಲು ಸೂಚನೆ ನೀಡಿದರು.
ಸುರಕ್ಷಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ , ತಿಕೋಟಾ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಬಬಲೇಶ್ವರ ಕಾರ್ಯನಿರ್ವಾಹಕ ಅಧಿಕಾರಿ ವ್ಹಿ.ಎಸ್.ಹಿರೇಮಠ ಸೇರಿದಂತೆ ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
