ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರಪಂಚದ ಪ್ರತಿಯೊಂದು ಮೂಲೆಯಲ್ಲಿಯೂ ಆರೋಗ್ಯವನ್ನು ಸುಧಾರಿಸುವಲ್ಲಿ ಔಷಧಿಕಾರರ ಪಾತ್ರವನ್ನು ಉತ್ತೇಜಿಸುವ ಮತ್ತು ಪ್ರತಿಪಾದಿಸುವ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಔಷದಾಲಯ ತಜ್ಞಾಧಿಕಾರಿ ಶ್ರೀಶೈಲ ಪರೀಟ್ ಹೇಳಿದರು.
ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪಾರ್ಮಸಿ ಕಾಲೇಜಿನಲ್ಲಿ ಹಮ್ಮಿಕೊಂಡ ವಿಶ್ವ ಔಷಧಿಕಾರರ ದಿನಾಚರಣೆಯ ಕಾರ್ಯಕ್ರಮವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಔಷದಾಲಯ ತಜ್ಞಾಧಿಕಾರಿ ಶ್ರೀಶೈಲ ಪರೀಟ್ ಉದ್ಘಾಟಿಸಿ ಮಾತನಾಡಿದ ಅವರು, ಔಷಧಿ ತಜ್ಞ ಎನ್ನುವುದು ಆರೋಗ್ಯ ರಕ್ಷಣೆ ವೃತ್ತಿಪರ ಪರವಾನಿಗೆಯಾಗಿದ್ದು, ಔಷಧಿಗಳನ್ನು ವಿತರಣೆ ಮಾಡುವುದು, ಲಸಿಕೆಗಳನ್ನು ನೀಡುವುದು, ಆಹಾರ ಪೂರಕಗಳ ಸರಿಯಾದ ಬಳಕೆಯ ರೋಗಿಗಳಿಗೆ ಸಲಹೆ ನೀಡುವುದು ಸೇರಿದಂತೆ ಕರ್ತವ್ಯಗಳೊಂದಿಗೆ ಔಷಧಾಲಯದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದು ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು.
ಈ ವೇಳೆ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಎಂ.ಹಂಗರಗಿ, ಹಾಗೂ ಪತ್ರಕರ್ತ ಇಸ್ಮಾಯಿಲ್ ಶೇಖ್ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಬಳಗಾನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಔಷಧಾಲಯ ಅಧಿಕಾರಿ ಸುರೇಶ ಬಬಲೇಶ್ವರ, ಉದ್ಯಮಿ ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಪತ್ರಕರ್ತರಾದ ಆನಂದ ಶಾಬಾದಿ, ಪಂಡೀತ ಯಂಪೂರೆ, ಪ್ರಾಚಾರ್ಯ ಸಂದೀಪ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ನೂಲಾನವರ ಗೆ ಸನ್ಮಾನ
ಇದೇ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ತಿನ ನೂತನ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ಪಟ್ಟಣದ ಉಪನ್ಯಾಸಕ, ಪತ್ರಕರ್ತ ಮಹಾಂತೇಶ ನೂಲಾನವರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

