ಇಂಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ
ಉದಯರಶ್ಮಿ ದಿನಪತ್ರಿಕೆ
ಇಂಡಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಆಡಳಿತ ಸೌಧದ ಎದುರು ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭಿಸಿ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯದಾದ್ಯಂತ ರಾಜ್ಯ ಸಂಘದ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಇಂಡಿ ತಾಲ್ಲೂಕಿನಲ್ಲಿಯೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಗ್ರಾಮ ಆಡಳಿತ ತಾಲೂಕು ಘಟಕದ ಅಧ್ಯಕ್ಷ ಯಲ್ಲು ಪೂಜಾರಿ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಮುಖಂಡರು, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳಾದ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು, ಕಚೇರಿ, ಗುಣಮಟ್ಟದ ಮೊಬೈಲ್, ಡೇಟಾ, ಸಿಮ್ ನೀಡಬೇಕು. ಪ್ರಿಂಟರ್ ಹಾಗೂ ಸ್ಕ್ಯಾನರ್, ಲ್ಯಾಪ್ಟಾಪ್, ಗೂಗಲ್ ಕ್ರೋಮ್ ಬುಕ್ ಒದಗಿಸಬೇಕು. ಸರಕಾರಿ ರಜಾ ದಿನಗಳಂದು ಮೆಮೊ ಕೊಡುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು. ಅಂತರ ಜಿಲ್ಲಾ ವರ್ಗಾವಣೆ ನಿಯಮ ೧೬ (ಎ) ಉಪಖಂಡ (೨) ಮರುಸೇರ್ಪಡೆ ಮಾಡಬೇಕು, ಪತಿ-ಪತ್ನಿ ವರ್ಗಾವಣೆ ಪ್ರಕರಣವನ್ನು ಪರಿಗಣಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಶಿರಸ್ತೆದಾರ ಬಿ.ಎ. ರಾವೂರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಅನೇಕ ಸಮಸ್ಯೆಗಳಿದ್ದು, ಅವುಗಳನ್ನು ಸರಕಾರ ಶೀಘ್ರವಾಗಿ ಪರಿಹರಿಸಬೇಕು. ಅತೀ ಹೆಚ್ಚಾಗಿ ಗ್ರಾಮೀಣ ಭಾಗದ ರೈತರ ಕೆಲಸ ಕಾರ್ಯಗಳು ಮಾಡುತ್ತಿದ್ದು, ಮೊಬೈಲ್ ನೆಟ್ ವರ್ಕ ಸೇರಿದಂತೆ, ಪುಡಾರಿ ಪುಂಡರು ತಕರಾರು ಒತ್ತಡ ಕೂಡಾ ಅವರ ಮೇಲಿದೆ. ಹಾಗಾಗಿ ಸರಕಾರ ಸಕಾರಾತ್ಮಕ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿರಸ್ತೆದಾರ, ಆರ್.ಬಿ. ಮೂಗಿ, ಕಂದಾಯ ನಿರೀಕ್ಷಕ ಎಚ್.ಎಸ್. ಗುನ್ನಾಪುರ, ಗ್ರಾಮ ಆಡಳಿತ ಸಂಘದ ಉಪಾಧ್ಯಕ್ಷ ಸಿದ್ದು ಲಾಳಸಂಗಿ, ಗಡ್ಡೆಪ್ಪ ಅವಜಿ, ಕೆ.ಎಸ್. ಚೌಧರಿ, ಪಿ.ಎಲ್. ಹೂಗಾರ, ಶಿವು ವಾಲಿಕಾರ, ಪ್ರಕಾಶ ಚವಡಿಹಾಳ, ಎಮ್.ಆರ್. ರಾಠೋಡ, ಎಸ್.ಎಸ್. ಪೂಜಾರಿ, ಎಸ್.ಎಸ್. ಹಿರೇಬೇವನೂರ, ರವಿ ಪೂಜಾರಿ, ಶ್ರೀಶೈಲ ಹಂಚನಾಳ, ಎಸ್.ಎಸ್ ಮೊದಿ, ಪ್ರವೀಣ ಲಮಾಣಿ, ರವಿ ಪಾದಗಟ್ಟಿ, ಜಿ.ಎಮ್. ಬಿರಾದಾರ, ಎಸ್.ಎಸ್. ಬಿರಾದಾರ, ಸತೀಶ ಮಂಗಳವಾಡೆ, ವಿದ್ಯಾ ಸರಸಂಬಿ, ಭೂಮಿಕಾ ಅವರಾದಿ, ಕವಿತಾ ಕರಜಗಿ, ಈರಮ್ಮ ಜೋಗುರ, ಸವಿತಾ ಹಚಡದ ಎಮ್.ಎಮ್ ನಧಾಪ್, ಡಬ್ಲ್ಯೂ.ಐ. ಇಂಡಿಕರ, ಶಂಕರ್ ಕಲಕೇರಿ, ಮಣಿಕಂಠ ಗೊಂದಳಿ, ಬಸವರಾಜ ಅವಜಿ ಸೇರಿದಂತೆ ಉಪಸ್ಥಿತರಿದ್ದರು.
“ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಕೆಗಾಗಿ ಮುಷ್ಕರ ಪ್ರಾರಂಬಿಸಿದರೂ ಸಹ ರೈತರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಪ್ರತೇಕ್ಯ ವ್ಯವಸ್ಥೆ ಆಡಳಿತ ಸೌಧದಲ್ಲಿ ಮಾಡಲಾಗಿದೆ.”
– ಅಬೀದ್ ಗದ್ಯಾಳ
ಕಂದಾಯ ಉಪವಿಭಾಗಾಧಿಕಾರಿ

