Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆಗಳ ತೆರವಿಗೆ ತಡೆ ಕೋರಿ ಕೊಳಗೇರಿ ನಿವಾಸಿಗಳ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಮನೆಗಳ ತೆರವಿಗೆ ತಡೆ ಕೋರಿ ಕೊಳಗೇರಿ ನಿವಾಸಿಗಳ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ಇಂದಿರಾ ನಗರದ ನಿವಾಸಿಗಳು ತಮ್ಮ ತಗಡಿನ ಮನೆಗಳನ್ನು ತೆರವು ಮಾಡುವುದನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿ ತಹಶೀಲ್ದಾರ ಕಚೇರಿಯ ಎದುರು, ಕೊಳಗೇರಿ ಅಭಿವೃದ್ಧಿ ಮಂಡಳಿ ನೀಡಿದ ಹಕ್ಕುಪತ್ರ ಹಿಡಿದು ದಿಢೀರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಈ ವೇಳೆ ನಿವಾಸಿಗಳಾದ ರಾಮು ದಳವಾಯಿ ಮಾತನಾಡಿ, ಕೊಳಗೇರಿ ಅಭಿವೃದ್ದಿ ಮಂಡಳಿಯವರು ಮತ್ತು ಪುರಸಭೆಯವರು ಜಂಟಿಯಾಗಿ ಸರ್ವೇ ಮಾಡಿ ನಮಗೆ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನೀಡಲಾಗಿದೆ. ಸುಮಾರು ವರ್ಷಗಳಿಂದ ನಾವು ಇಲ್ಲಿ ವಾಸವಿದ್ದೇವೆ. ಸಧ್ಯ ಪುರಸಭೆ ಮುಖ್ಯಾಧಿಕಾರಿಗಳು ದಿಢೀರನೆ ಬಂದು ಮಂಡಳಿ ನೀಡಿದ ಹಕ್ಕು ಪತ್ರಗಳನ್ನೂ ಸಹ ಗಮನಿಸಿದೇ ನಿಮ್ಮ ತಗಡಿನ ಮನೆಗಳು ಅನಧಿಕೃತವಾಗಿವೆ. ಕೂಡಲೇ ಖಾಲಿ ಮಾಡಿ ಇಲ್ಲದಿದ್ರೆ ತೆರವುಗೊಳಿಸುವದಾಗಿ ತಿಳಿಸಿದ್ದಾರೆ. ಈ ನಡೆಯನ್ನು ನಾವು ಖಂಡಿಸುತ್ತೇವೆ. ಕೊಳಗೇರಿ ಅಭಿವೃದ್ಧಿ ಮಂಡಳಿ ನೀಡಿದ ಹಕ್ಕುಪತ್ರವನ್ನು ಗಮನಿಸದೇ, ಯಾವ ನೊಟೀಸನ್ನೂ ನೀಡದೇ ನಮ್ಮ ಮನೆಗಳನ್ನು ತೆರವುಗೊಳಿಸಲು ಹುನ್ನಾರ ನಡೆಸಿರುತ್ತಾರೆ. ಕೂಡಲೇ ಈ ದಬ್ಬಾಳಿಕೆಯನ್ನು ಕೈಬಿಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ನಾವೆಲ್ಲರೂ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತೇವೆ ಎಂದರು.
ಈ ವೇಳೆ ಪರಶುರಾಮ ದಳವಾಯಿ, ಸಿದ್ದು ಬಂಟನೂರ ಮಾತನಾಡಿ ಪುರಸಭೆ ಮುಖ್ಯಾಧಿಕಾರಿಗಳು ದಿಢೀರನೆ ಬಂದು ನಮ್ಮ ತಗಡಿನ ಮನೆಗಳನ್ನು ತೆರವುಗೊಳಿಸುವದಾಗಿ ತಿಳಿಸಿರುತ್ತಾರೆ. ಇದರಿಂದ ನಮ್ಮ ಮನೆಯ ಹೆಣ್ಣುಮಕ್ಕಳು ಕಂಗಾಲಾಗಿ ಊಟ ನೀರು ಬಿಟ್ಟು ಕುಳಿತಿದ್ದಾರೆ. ಮುಖ್ಯಾಧಿಕಾರಿಗಳನ್ನು ಬೇಟಿ ಮಾಡಲು ಪುರಸಭೆಗೆ ತೆರಳಿದ್ದೆವು. ಅವರಿಲ್ಲದ ಕಾರಣ ತಹಶೀಲ್ದಾರ ಕಚೇರಿಯ ಎದುರು ಹೋರಾಟ ನಡೆಸಿ ಮನವಿ ಸಲ್ಲಿಸುತ್ತಿದ್ದೇವೆ. ನಮಗೆ ವಾಸಕ್ಕೆ ಈ ಮನೆಗಳನ್ನು ಬಿಟ್ಟರೇ ಬೇರೆ ಯಾವುದೇ ಮನೆಯಿಲ್ಲ. ಕಡುಬಡವರಾದ ನಮ್ಮ ಕಷ್ಟಕ್ಕೆ ಹಿರಿಯ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು ಎಂದರು.
೨೦೨೧ ರಲ್ಲಿ ಸ್ಲಂ ಬೋರ್ಡ ಅಧಿಕಾರಿಗಳು ಮತ್ತು ಪುರಸಭೆ ಅಧಿಕಾರಿಗಳೂ ಜಂಟಿ ಸರ್ವೇ ಕೈಗೊಂಡು ಕರ್ನಾಟಕ ಸರಕಾರದ ಸಚಿವಾಲಯ ನಗರಾಭಿವೃದ್ಧಿ ಇಲಾಖೆಯ ಆದೇಶದಂತೆ ಸಂಖ್ಯೆ: ನಇ ೭೩ ಜೆಇಎಲ್-೨೦೨೦ ದಿನಾಂಕ ೧೮-೦೨-೨೦೨೧ ರ ಆದೇಶಂತೆ ನಮ್ಮಿಂದ ಹಣವನ್ನು ಭರಣೆ ಮಾಡಿಕೊಂಡು ನಮಗೆ ಹಕ್ಕು ಪತ್ರ ವಿತರಿಸಿದ್ದು ಮತ್ತು ನೋಂದಣಿ ಪತ್ರವನ್ನು ನೀಡಿದ್ದು ಉತಾರಾ ನೀಡಲು ಅರ್ಜಿ ಸಹ ನೀಡಿರುತ್ತೇವೆ. ಕೂಲಿ ನಾಲಿ ಮಾಡಿ ಬದುಕುವ ಪರೀಸ್ಥಿತಿ ನಮ್ಮದಾಗಿದ್ದು ಈ ಮನೆಗಳನ್ನು ತೆರವುಗೊಳಿಸಿದರೆ ನಮಗೆ ವಾಸಿಸಲು ಯಾವುದೇ ಸೂರುಗಳಿಲ್ಲ. ಕಾರಣ ಹಕ್ಕು ಪತ್ರಗಳನ್ನು ಪರಿಶೀಲಿಸಿ ನಮಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ವಿನಂತಿಸುತ್ತೇವೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಪ್ರತಿಭಟನೆಯಲ್ಲಿ ಎಂ.ಡಿ.ಉಪ್ಪಲದಿನ್ನಿ, ಸೀತಾರಾಮ ತಳ್ಳಿ, ಎಚ್.ಆರ್.ಕುಂಟೋಜಿ, ಸೂರೆ ಮುರಾಳ, ಪಿ.ಎಂ.ಚಲವಾದಿ, ಫರಜಾನ, ಎಸ್.ಬಿ.ಬೂದಿಹಾಳ, ನಿಂಗವ್ವ, ಅಶ್ವಿನಿ ಚಲವಾದಿ, ಭಾಗಮ್ಮ ಬಿರಾದಾರ, ಮಲ್ಲಮ್ಮ ಇಸ್ಲಾಂಪೂರ, ರವಿ ಚಲವಾದಿ, ಶಂಕ್ರಪ್ಪ ಮಾದರ, ಅಶೋಕ ಬಿರಾದಾರ, ಹನೀಫ ಮುಲ್ಲಾ, ಶಂಕ್ರಪ್ಪ ಮಾದರ, ಬಾಬರ ಶಹಾಪೂರ, ಆಸೀಫ ಕುಂಟೋಜಿ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.