Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರೀತಿ-ವಿಶ್ವಾಸ, ಸಹಬಾಳ್ವೆಯಿಂದ ಜೀವನ ಸಾಗಿಸಿ :ಯು.ಟಿ.ಖಾದರ್
(ರಾಜ್ಯ ) ಜಿಲ್ಲೆ

ಪ್ರೀತಿ-ವಿಶ್ವಾಸ, ಸಹಬಾಳ್ವೆಯಿಂದ ಜೀವನ ಸಾಗಿಸಿ :ಯು.ಟಿ.ಖಾದರ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿಯಲ್ಲಿ ತಾಜ್ ಸೋಶಿಯಲ್ ಗ್ರುಫ್ ನಿಂದ ಸೌಹಾರ್ದ ಸಮಾವೇಶ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ದೇಶದ ಸಂವಿಧಾನವು ಎಲ್ಲ ಸಮಸ್ಯೆಗಳಿಗೆ, ಜನರ ನೋವುಗಳಿಗೆ ಸರಿಪಡಿಸುವ ಶಕ್ತಿಯಿದೆ. ದೇಶದ ಸಂವಿಧಾನವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರದಾಗಿದೆ. ಪ್ರತಿಯೊಬ್ಬರೂ ಕಾನೂನುಗಳನ್ನು ಪಾಲಿಸುವ ಮೂಲಕ ದೇಶದಲ್ಲಿ ಎಲ್ಲರೂ ಪ್ರೀತಿ, ವಿಶ್ವಾಸ, ಸಹಬಾಳ್ವೆಯೊಂದಿಗೆ ಜೀವನ ಮಾಡಿದರೆ ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಪಟ್ಟಣದ ಬಸವ ಭವನದಲ್ಲಿ ತಾಜ್ ಸೋಶಿಯಲ್ ಗ್ರುಫ್ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಸೌಹಾರ್ದ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ವಾಸಿಸುವ ಎಲ್ಲ ಜನರು ಸಹೋದರತೆ, ಸಹಬಾಳ್ವೆ, ಮಾನವೀಯತೆ ಮೌಲ್ಯ ಗುಣಗಳನ್ನು ಅಳವಡಿಸಿಕೊಂಡು ಜೀವನ ಮಾಡುವಂತಾಗಬೇಕು. ಸೌಹಾರ್ದ ಸಮಾವೇಶಗಳಿಂದ ಇಂತಹ ಗುಣಗಳನ್ನು ಮೈಗೂಡಿಸಿಕೊಂಡರೆ ಸಮಾವೇಶ ಮಾಡಿದ್ದು ಸಾರ್ಥಕವಾಗುತ್ತದೆ. ಸಮಾಜಕ್ಕೆ ಯಾವುದೇ ಕಂಟಕವಾಗದ ರೀತಿಯಲ್ಲಿ ಜೀವನ ಮಾಡಬೇಕು. ಸಮಾಜಕ್ಕೆ ಪೂರಕವಾದ ಜೀವನ ಮಾಡಿದರೆ ಸಮಾಜದಲ್ಲಿ ಯಾವುದೇ ಕಂಟಕಗಳು ಬಾರದೇ ಎಲ್ಲರೂ ಸೌಹಾರ್ದತೆಯಿಂದ ಇರಲು ಸಾಧ್ಯವಿದೆ ಎಂದರು.
ಕೆಪಿಸಿಸಿ ವಕ್ತಾರ ನಿಕಿತರಾಜ ಮೌರ್ಯ ಮಾತನಾಡಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕಾರ್ಯ ನಡೆಯಬಾರದು. ದ್ವೇಷದಿಂದ ದ್ವೇಷ ಮಾಡಿದರೆ ಎಂದಿಗೂ ಸಮಸ್ಯೆ ಪರಿಹಾರ ಕಾಣುವುದಿಲ್ಲ. ಪ್ರೀತಿ, ವಿಶ್ವಾಸ ಬಹು ಮುಖ್ಯವಾಗಿದೆ. ಸಿದ್ದಗಂಗಾ ಮಠದ ಲಿಂ. ಶಿವಕುಮಾರ ಸ್ವಾಮೀಜಿಯವರು ತಮ್ಮ ಜೀವನದಲ್ಲಿ ಎಂದಿಗೂ ಧರ್ಮದ ಬಗ್ಗೆ ಮಾತನಾಡಲಿಲ್ಲ. ಅವರು ಎಲ್ಲ ಧರ್ಮದ ಮಕ್ಕಳಿಗೂ ಶಿಕ್ಷಣ, ದಾಸೋಹ ನೀಡಿದರು. ಇದು ದೇಶದ ಸೌಹಾರ್ದತೆಕ್ಕೆ ಬಹುದೊಡ್ಡ ಉದಾಹರಣೆಯಾಗಿ ನಮ್ಮ ಮುಂದಿದೆ. ಇಂತಹ ಸೌಹಾರ್ದ ವಾತಾವರಣ ಎಲ್ಲೆಡೆ ಬರುವಂತಾಗಬೇಕು. ಅನೇಕ ಮುಸ್ಲಿಂ ಬಾಂಧವರು ಹಿಂದು ದೇವಸ್ಥಾನ ಕಟ್ಟಿಸಿದ್ದಾರೆ. ಅನೇಕ ಹಿಂದು ಬಾಂಧವರು ಮುಸ್ಲಿಂ ಬಾಂಧವರಿಗೆ ನೆರವಾಗಿದ್ದಾರೆ ಎಂಬುವದನ್ನು ನಾವು ಇತಿಹಾಸದಿಂದ ತಿಳಿದುಕೊಳ್ಳುತ್ತೇವೆ. ಇದನ್ನು ಅರಿತುಕೊಂಡು ಎಲ್ಲರೂ ಸೌಹಾರ್ದತೆಯಿಂದ ಜೀವನ ಮಾಡುವದು ಅಗತ್ಯವಿದೆ ಎಂದರು.
ಕರ್ನಾಟಕ ಯುನಿಪ ಅಧ್ಯಕ್ಷ ರಫೀಕ್ ಕುದ್ರೋಳಿ, ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ, ಸಾನಿಧ್ಯ ವಹಿಸಿದ್ದ ಶಿರೂರಿನ ಡಾ.ಬಸವಲಿಂಗ ಸ್ವಾಮೀಜಿ ಮಾತನಾಡಿದರು.
ವೇದಿಕೆಯಲ್ಲಿ ಹಾಫೀಜ ಮಹ್ಮದಅಲಿ ಮಿಲಿ, ಐ.ಸಿ.ಪಟ್ಟಣಶೆಟ್ಟಿ, ಸುರೇಶ ಹಾರಿವಾಳ, ಚಂದ್ರಶೇಖರಗೌಡ ಪಾಟೀಲ, ಎಂ.ಕೆ.ಬಿರಾದಾರ, ಮುಕ್ತಿಅಬ್ದುಲ ಅಜೀಜ್ ಇತರರು ಇದ್ದರು. -ಜ್ ಅವಟಿ ಸ್ವಾಗತಿಸಿದರು. ನಜೀರ ದಡ್ಡಿ ನಿರೂಪಿಸಿದರು. ರೆಹಾನ್ ಕೆರೂರ ವಂದಿಸಿದರು.

ಕೇವಲ ಭಾಷಣದಲ್ಲಿ ದೇಶಭಕ್ತಿಯನ್ನು ತೋರಿಸದೇ ದೇಶ, ಸಮಾಜದ ಒಳಿತಿಗಾಗಿ ದುಡಿಯುವದೇ ನಿಜವಾದ ದೇಶಭಕ್ತಿಯಾಗಿದೆ. ಪ್ರತಿಯೊಬ್ಬರಲ್ಲೂ ಕ್ಷಮಿಸುವ ಗುಣ ಬರಬೇಕು. ಬೇರೆಯವರ ಕೊಂಕು ನುಡಿಗಳಿಗೆ ಕಿವಿಗೊಡದೇ ತಮ್ಮನ್ನು ತಾವು ಹಿಡಿತದಲ್ಲಿಟ್ಟುಕೊಂಡು ಮುನ್ನಡೆಯಬೇಕು. ಸಮಾಜಕ್ಕೆ ಮಾದರಿಯಾಗುವ ಗುಣವನ್ನು ಪ್ರತಿಯೊಬ್ಬರಿಗೂ ದೇವರು ನೀಡಿದ್ದಾನೆ. ದೇವರು ನಮಗೆ ನೀಡಿದ ಆಯುಷ್ಯವನ್ನು ಒಳ್ಳೆಯದಕ್ಕೆ ಬಳಕೆ ಮಾಡಿಕೊಳ್ಳಬೇಕು.”
ಯು.ಟಿ.ಖಾದರ್
ಸಭಾಧ್ಯಕ್ಷರು, ವಿಧಾನಸಭೆ

“ಮಾತುಗಳು ಭಾಷಣವಾಗದೇ ಅದು ಸಾಧನೆಯಾಗಬೇಕು. ಕೆಲವರ ಮಾತಿನಿಂದ ಸಮಾಜದಲ್ಲಿ ಅಹಿತಕರ ಘಟನೆಗಳು ಸಂಭವಿಸುತ್ತವೆ. ಒಳ್ಳೆಯ ಸಂದೇಶಗಳನ್ನು ಅರಿತುಕೊಂಡು ಜೀವನ ಮಾಡಿದರೆ ಬದುಕಿಗೆ ಒಂದು ಅರ್ಥ ಬರಲು ಸಾಧ್ಯ. ಶಾಂತಿ ಸಂದೇಶವನ್ನು ಕುರಾನ್ ನೀಡಿದೆ. ಶೇ.೯೯ ರಷ್ಟು ಇಸ್ಲಾಂ ಧರ್ಮದವರು ಒಳ್ಳೆಯವರಾಗಿದ್ದಾರೆ. ಶೇ. ೧ ರಷ್ಟು ದುಷ್ಟ ಶಕ್ತಿಯನ್ನು ಹೊಂದಿರುವ ಬಾಂಧವರಿಂದ ಇಡೀ ಇಸ್ಲಾಂ ಧರ್ಮ ಬಾಂಧವರಿಗೆ ಕೆಟ್ಟು ಹೆಸರು ಬರುತ್ತಿದೆ. ಇದನ್ನು ಅರಿತುಕೊಂಡು ಇಸ್ಲಾಂ ಬಾಂಧವರು ಈ ದುಷ್ಟ ಶಕ್ತಿಯನ್ನು ಹೊಂದಿರುವವರನ್ನು ಖಂಡಿಸಿ ಅದನ್ನು ಮಟ್ಟ ಹಾಕಲು ಮುಂದಾದರೆ ನಾವು ನಿಮ್ಮ ಜೊತೆಗೆ ಬರಲು ಸಿದ್ಧ. ಹಿಂದುಗಳಿಗೆ ಪವಿತ್ರವಾದ ಗೋಮಾತೆಯನ್ನು ಯಾವ ಕಾರಣಕ್ಕೂ ಇಸ್ಲಾಂ ಬಾಂಧವರು ಸೇವಿಸಬಾರದು. ಕಾನೂನು ಪಾಲಿಸಬೇಕಿದೆ. ಸಾಮರಸ್ಯಕ್ಕೆ ಹೆಸರಾಗಿದ್ದ ಸಂತ ಶಿಶುನಾಳ ಷರೀಫ, ಡಾ.ಎಪಿಜೆ ಅಬ್ದುಲ್ ಕಲಾಂ ರಂತಹ ಇಸ್ಲಾಮೀಯರು ಸಮಾಜಕ್ಕೆ ಬೇಕು. ಎಲ್ಲರೂ ಧರ್ಮದ ಹಾದಿಯಲ್ಲಿ ನಡೆಯುವಂತಾಗಬೇಕು.”
– ಶಿವಪ್ರಕಾಶ ಶಿವಾಚಾರ್ಯರು
ಹಿರೇಮಠ, ಬಸವನ ಬಾಗೇವಾಡಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.