Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹರಾಜು ಪ್ರಕ್ರಿಯೆಯಿಂದ ರೂ. ೨೭೩.೭೦ ಲಕ್ಷ ಠೇವಣಿ ಸಂಗ್ರಹ
(ರಾಜ್ಯ ) ಜಿಲ್ಲೆ

ಹರಾಜು ಪ್ರಕ್ರಿಯೆಯಿಂದ ರೂ. ೨೭೩.೭೦ ಲಕ್ಷ ಠೇವಣಿ ಸಂಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

೨ದಿನ ಕಾಲ ಜರುಗಿದ ಮೆಗಾಮಾರುಕಟ್ಟೆಯ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿ ಪುರಸಭೆಯಿಂದ ನಿರ್ಮಾಣಗೊಂಡಿರುವ ಮೆಗಾಮಾರುಕಟ್ಟೆಯಲ್ಲಿರುವ ವಾಣಿಜ್ಯ ಮಳಿಗೆಗಳ ಮುಂದುವರಿದ ಬಹಿರಂಗ ಹರಾಜು ಪ್ರಕ್ರಿಯೆ ಮಂಗಳವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಸಕ್ಕರೆ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಅವರ ಸಮ್ಮುಖದಲ್ಲಿ ಜರುಗಿತು. ಎರಡು ದಿನಗಳ ಕಾಲ ಜರುಗಿದ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ೧೭ ವಾಣಿಜ್ಯ ಮಳಿಗೆಗಳು ಬಹಿರಂಗ ಹರಾಜುಗೊಂಡು ಒಟ್ಟು ರೂ. ೨೭೩.೭೦ ಲಕ್ಷ ಠೇವಣಿ ಮೊತ್ತ ಆಯಿತು.
ಮೆಗಾಮಾರುಕಟ್ಟೆಯಲ್ಲಿ ಒಟ್ಟು ೧೩೪ ವಾಣಿಜ್ಯ ಮಳಿಗೆಗಳಿದ್ದು. ಇದರಲ್ಲಿ ೩೫ ವಾಣಿಜ್ಯ ಮಳಿಗೆಗಳು ಹಿಂದೆ ಎರಡು ಸಲ ಜರುಗಿದ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಹರಾಜು ಆಗಿವೆ. ಉಳಿದ ೯೯ ವಾಣಿಜ್ಯ ಮಳಿಗೆಗಳ ಮುಂದುವರಿದ ಬಹಿರಂಗ ಹರಾಜು ಪ್ರಕ್ರಿಯೆ ಮಂಗಳವಾರ, ಗುರುವಾರ ಎರಡು ದಿನಗಳ ಕಾಲ ಪುರಸಭೆ ಜರುಗಿಸಿತು.
ಮಂಗಳವಾರ ಜರುಗಿದ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು ೭ ವಾಣಿಜ್ಯ ಮಳಿಗೆಗಳು ಬಹಿರಂಗ ಹರಾಜು ಆಗುವ ಮೂಲಕ ಒಟ್ಟು ರೂ. ೯೮ ಲಕ್ಷ ಠೇವಣಿ ಮೊತ್ತ ಆಗಿತ್ತು. ಮಂಗಳವಾರ ಜರುಗಿದ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು ೧೫ ಜನರು ಭಾಗವಹಿಸಿದ್ದರು. ಮಂಗಳವಾರ ಜರುಗಿದ ಹರಾಜು ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಮೊತ್ತಕ್ಕೆ ವಾಣಿಜ್ಯ ಮಳಿಗೆ ಸಂಖ್ಯೆ ಜಿ-೫ ಅನ್ನು ಸುನೀಲಕುಮಾರ ಆದಿಗೊಂಡ ಎಂಬುವವರು ರೂ. ೩೦ ಲಕ್ಷ ಠೇವಣಿ ಮೊತ್ತಕ್ಕೆ ಹರಾಜು ಮೂಲಕ ಪಡೆದುಕೊಂಡರು.
ಉಳಿದ ೯೨ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಗುರುವಾರ ಮುಂದುವರಿದು ಒಟ್ಟು ೧೦ ವಾಣಿಜ್ಯ ಮಳಿಗೆಗಳು ಹರಾಜು ಆಗುವ ಮೂಲಕ ಒಟ್ಟು ರೂ. ೧೭೫.೭೦ ಲಕ್ಷ ಠೇವಣಿ ಮೊತ್ತ ಆಯಿತು. ವಾಣಿಜ್ಯ ಮಳಿಗೆ ಸಂಖ್ಯೆ ಜಿ-೫೪ ರಿಂದ ಜಿ.೬೧ ರವರೆಗೆ ಒಟ್ಟು ೮ ವಾಣಿಜ್ಯ ಮಳಿಗೆಗಳನ್ನು ಜಿತೇಂದ್ರ ಅಗರವಾಲ ಅವರು ೧೩೬.೫೦ ಲಕ್ಷ ರೂ.ಠೇವಣಿ ಮೊತ್ತಕ್ಕೆ ಹಿಡಿದರೆ, ಜಿ.೫೧ ಅನ್ನು ಗಾಯತ್ರಿ ಬಡಿಗೇರ ಅವರು ರೂ. ೧೩ ಲಕ್ಷ ಠೇವಣಿ ಮೊತ್ತಕ್ಕೆ, ಜಿ-೬ ಅನ್ನು ವೀರಭದ್ರೇಶ್ವರ ಇಲೆಕ್ಟ್ರಾನಿಕ್ ಅಂಗಡಿಯ ಮಾಲೀಕರು ರೂ. ೨೬.೨೦ ಲಕ್ಷ ಠೇವಣಿ ಮೊತ್ತಕ್ಕೆ ವಾಣಿಜ್ಯ ಮಳಿಗೆಯನ್ನು ಪಡೆದುಕೊಂಡರು. ಇಂದು ೨೭ ಜನರು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಮೆಗಾಮಾರುಕಟ್ಟೆಯಲ್ಲಿ ಉಳಿದ ೮೨ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಮುಂದೂಡಲಾಯಿತು.
ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಜಿಲ್ಲಾ ಪಂಚಾಯಿತಿಯ ಎಇಇ ವಿಲಾಸ ರಾಠೋಡ, ಪುರಸಭೆ ವ್ಯವಸ್ಥಾಪಕ ಸುರೇಶ ಬಾಗೇವಾಡಿ,ಪುರಸಭೆ ಕಂದಾಯ ನಿರೀಕ್ಷಕಿ ಗೀತಾಂಜಲಿ ದಾಸರ, ಪುರಸಭೆ ಆರೋಗ್ಯ ನಿರೀಕ್ಷಕರಾದ ವಿಜಯ ವಂದಾಲ, ಬಸವರಾಜ ಬೋಳಶೆಟ್ಟಿ, ಪುರಸಭೆ ಅಭಿಯಂತರರಾದ ಮಹಾದೇವ ಜಂಬಗಿ, ಸಂತೋಷ ಗಿಡ್ಡಸಣ್ಣನವರ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ನಜೀರ ಗಣಿ, ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ಅನಿಲ ಅಗರವಾಲ, ಸಂಗನಗೌಡ ಚಿಕ್ಕೊಂಡ,ಶೇಖರ ಗೊಳಸಂಗಿ, ಕಮಲಸಾಬ ಕೊರಬು, ರಮೇಶ ಯಳಮೇಲಿ, ಮಲ್ಲೇಶಿ ಕಡಕೋಳ, ಶಂಕರಗೌಡ ಚಿಕ್ಕೊಂಡ, ಬಸಣ್ಣ ದೇಸಾಯಿ, ಸಿದ್ದಣ್ಣ ಮೋದಿ, ಬಸವರಾಜ ಚೌರಿ, ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.