Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಭ್ರಮದ ದುರ್ಗಾಮಾತೆ, ಅಂಬಾಭವಾನಿ ಪಲ್ಲಕ್ಕಿ ಉತ್ಸವ
(ರಾಜ್ಯ ) ಜಿಲ್ಲೆ

ಸಂಭ್ರಮದ ದುರ್ಗಾಮಾತೆ, ಅಂಬಾಭವಾನಿ ಪಲ್ಲಕ್ಕಿ ಉತ್ಸವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಶಿವಾಜಿ ಗಲ್ಲಿಯಲ್ಲಿರುವ ಅಂಬಾಭವಾನಿ ದೇವಸ್ಥಾನದಲ್ಲಿ ನವರಾತ್ರಿ,ದಸರಾ ಹಬ್ಬದಂಗವಾಗಿ ಪ್ರತಿಷ್ಠಾಪಿಸಲಾಗುವ ದುರ್ಗಾಮಾತೆಯ ಮೂರ್ತಿ, ಅಂಬಾಭವಾನಿ ದೇವಿಯ ಪಲ್ಲಕ್ಕಿ ಉತ್ಸವ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಗುರುವಾರ ಸಂಭ್ರಮ, ಸಡಗರದಿಂದ ಜರುಗಿತು.
ಪಟ್ಟಣದ ಅಂಬಾಭವಾನಿ ದೇವಸ್ಥಾನದ ಮುಂಭಾಗ ಬೆಳಗ್ಗೆ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿಯವರು ಪಲ್ಲಕ್ಕಿ ಉತ್ಸವ, ದುರ್ಗಾಮಾತೆಯ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ಹಾರಿವಾಳ, ರವಿಗೌಡ ಚಿಕ್ಕೊಂಡ, ಸಂಗಮೇಶ ಓಲೇಕಾರ, ಜಟ್ಟಿಂಗರಾಯ ಮಾಲಗಾರ, ರವಿ ಪಡಶೆಟ್ಟಿ, ಅಶೋಕ ಗುಳೇದ ಇತರರು ಇದ್ದರು.
ದೇವಸ್ಥಾನದಿಂದ ಆರಂಭವಾದ ಪಲ್ಲಕ್ಕಿ ಉತ್ಸವ, ದೇವಿ ಮೂರ್ತಿಯ ಮೆರವಣಿಗೆಯು ಗೌರಿ-ಶಂಕರ ದೇವಸ್ಥಾನ ರಸ್ತೆ, ಬಸವ ಜನ್ಮಸ್ಮಾರಕ ರಸ್ತೆ, ಪತ್ತಾರ ಗಲ್ಲಿ ಮೂಲಕ ಅಗಸಿ, ಬಸವೇಶ್ವರ ವೃತ್ತದ ಮಾರ್ಗವಾಗಿ ಬಸವೇಶ್ವರ ದೇವಸ್ಥಾನದ ಬಾವಿಯಲ್ಲಿ ಗಂಗ ಸ್ಥಳಕ್ಕೆ ತೆರಳಿತು. ಗಂಗಸ್ಥಳ ಪೂಜೆ ನೆರವೇರಿದ ನಂತರ ಉತ್ಸವದ ಮೆರವಣಿಗೆಯು ಬಸವೇಶ್ವರ ವೃತ್ತ, ಅಗಸಿ,ಗ್ರಾಮದೇವತೆ ದೇವಸ್ಥಾನದ ರಸ್ತೆ ಮಾರ್ಗವಾಗಿ ಶಿವಾಜಿ ಗಲ್ಲಿಯಲ್ಲಿರುವ ಅಂಬಾಭವಾನಿ ದೇವಸ್ಥಾನಕ್ಕೆ ಮರಳಿತು. ಪಲ್ಲಕ್ಕಿ ಉತ್ಸವ, ದೇವಿಯ ಮೂರ್ತಿಯ ಮೆರವಣಿಗೆಯಲ್ಲಿ ಕುಂಭ ಹೊತ್ತ ಮಹಿಳೆಯರು, ಆರತಿ ಹಿಡಿದ ಮಹಿಳೆಯರು ಸೇರಿದಂತೆ ಬದಾಮಿ ತಾಲೂಕಿನ ಸೋಮನಕೊಪ್ಪದ ಡೊಳ್ಳಿನ ಮೇಳ, ಕೊಣ್ಣೂರಿನ ಗೊಂಬೆ ಕುಣಿತ ಮೆರವಣಿಗೆಗೆ ಮೆರಗು ತಂದವು. ಮೆರವಣಿಗೆಯಲ್ಲಿ ಶಿವಾಜಿ ಮೂರ್ತಿ, ಬಸವೇಶ್ವರರ ಮೂರ್ತಿಗಳು ಇದ್ದವು.
ನವರಾತ್ರಿ, ದಸರಾ ಹಬ್ಬದಂಗವಾಗಿ ಅಂಬಾಭವಾನಿ ದೇವಸ್ಥಾನದಲ್ಲಿ ಬೆಳಗ್ಗೆ ರುದ್ರಾಭಿಷೇಕ, ವಿಶೇಷ ಪೂಜೆ ನೆರವೇರಿಸಲಾಯಿತು. ಜನರು ತಮ್ಮ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ಅಂಬಾಭವಾನಿ ದೇವಿಯ ದರ್ಶನ ಪಡೆದುಕೊಂಡರು. ದಸರಾ ಹಬ್ಬದಂಗವಾಗಿ ರಾತ್ರಿ ದೇವಸ್ಥಾನದಲ್ಲಿ ಘಟ್ಟ ಸ್ಥಾಪಿಸಲಾಯಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದಲ್ಲಿ ನಾಳೆಯಿಂದ ಸಂಜೆ 7 ಗಂಟೆಯಿಂದ ವಿವಿಧ ಸಾಂಸ್ಕ್ರತಿಕ, ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ದೇವಸ್ಥಾನ ಪದಾಧಿಕಾರಿಗಳು ಹೇಳಿದರು.
ಪಲ್ಲಕ್ಕಿ ಉತ್ಸವ, ದೇವಿ ಮೂರ್ತಿ ಮೆರವಣಿಗೆಯಲ್ಲಿ ಅಂಬಾಭವಾನಿ ದೇವಸ್ಥಾನದ ಕಮೀಟಿ ಅಧ್ಯಕ್ಷ ಯಮನೂರಿ ಬಿದರಕುಂದಿ, ಮರಾಠಾ ಸಮಾಜದ ತಾಲೂಕಾಧ್ಯಕ್ಷ ಬಸವರಾಜ ಬಿಜಾಪುರ, ಅಂಬೋಜಿ ಪವಾರ, ಅಂಬೋಜಿ ಬಿದರಕುಂದಿ, ಬಾಬು ನಿಕ್ಕಂ, ಅಶೋಕ ಬಿಜಾಪುರ, ಜಟ್ಟಿಂಗರಾಯ ಮಾಲಗಾರ, ಶಿವಾಜಿ ಜಗತಾಪ, ಶಿವಾನಂದ ಚವ್ಹಾಣ, ದಾಮಾಜಿ ಜಾಧವ, ಶಿವಾಜಿ ಹವಾಲ್ದಾರ, ಬಸವರಾಜ ತುಪ್ಪದ, ಮೋಹನ ಬಿಜಾಪುರ, ಮಾರುತಿ ಘಾಟಗೆ, ವಿಶಾಲ ಗಾಯಕವಾಡ, ಶಶಿ ದೇವಕರ, ಅರ್ಜುನ ಜಾಧವ, ಜಗದೀಶ ಬಿಜಾಪುರ, ಈರಪ್ಪ ಒಣರೊಟ್ಟಿ, ತುಕರಾಂ ಪವಾರ, ಪ್ರಕಾಶ ಮಾಲಗಾರ, ಶೇಖು ಪವಾರ, ಸುನೀಲ ಬೇದರಕರ, ಅಂಬವ್ವ ಬಿಜಾಪುರ, ಮಿತ್ರವ್ವ ಬಿದರಕುಂದಿ, ಚಂದ್ರವ್ವ ಸಿಂಧೆ, ತುಳಜಾಬಾಯಿ ಸಿಂಧೆ, ಶಕುಂತಲಾ ಬಿಜಾಪುರರ, ಪ್ರಿಯಾ ರಜಪೂತ, ರೂಪಾ ಜಾಧವ, ಸುಜಾತಾ ವಂದಾಲ, ಶೋಭಾ ಜಗತಾಪ, ಶಕುಂತಲಾ ನಿಕ್ಕಂ, ಶಾರದಾ ನಿಕ್ಕಂ, ಗೀತಾ ಪವಾರ, ಸುರೇಖಾ ಹುಣಶ್ಯಾಳ, ಭಾಗೀರಥಿ ಘಾಟಗೆ, ಶಾಂತಾಬಾಯಿ ಬಿಜಾಪುರ,ದೀಪಾ ಘಾಟಗೆ ಸೇರಿದಂತೆ ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.