ಉದಯರಶ್ಮಿ ದಿನಪತ್ರಿಕೆ
ಇಂಡಿ: ಉದ್ಯಮಶೀಲರು ಸೋಲಿನಿಂದ ಧೃತಿಗೆಡದೇ ಸಮರ್ಥ ಮಾರ್ಗದರ್ಶನ ,ಸ್ಪಷ್ಟ ಗುರಿಯೊಂದಿಗೆ ಸತತ ಪ್ರಯತ್ನ ಮಾಡಿದಾಗ ಯಶಸ್ಸು ಸಾಧ್ಯ. ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು ಸದುಪಯೋಗ ಮಾಡಿಕೊಂಡಾಗ ಸರಕಾರ ರೂಪಿಸುವ ಯೋಜನೆಗಳು ಯಶಸ್ವಿಗೆ ಸಾಕ್ಷಿಯಾಗುತ್ತವೆ ಎಂದು ಉದ್ಯಮದಾರ ಮಲ್ಲಿಕಾರ್ಜುನ ಹಾವಿನಾಳಮಠ ಹೇಳಿದರು.
ಪಟ್ಟಣದ ಸಹನಾ ರೆಸ್ಟೋರೆಂಟ್ ವಿಕೆಜೆ ಇಂಟರ್ನ್ಯಾಷನಲ್ ಸಭಾಭವನದಲ್ಲಿ ಏರ್ಪಡಿಸಿದ್ದ
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯ ಅಭ್ಯರ್ಥಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅನುಭವ ಹಂಚಿಕೊಂಡರು.
ಸಮಾಜವನ್ನು ಸದೃಢವಾಗಿ ಕಟ್ಟಲು ಉದ್ಯಮಶೀಲತೆ ಬಹಳ ಮುಖ್ಯ, ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಮಹಿಳೆಯರ ಯುವಜನರಲ್ಲಿ ಸಂಚಲನ ಮೂಡಿಸಲು, ಕೌಶಲ್ಯ ಬೆಳಸಲು ಅತ್ಯಂತ ಸೂಕ್ತ ಕಾರ್ಯ ವಿಜಯಪುರ ಸಿಡಾಕ್ ಸಂಸ್ಥೆ ಮಾಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿರುವ ಸಿಡಾಕ್ ಜಂಟಿ ನಿರ್ದೇಶಕಿ ಸುಪ್ರೀತಾ ಬ ಬಳ್ಳಾರಿ, ತರಬೇತಿ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ದೀಪಾಲಯ ಸಂಸ್ಥೆ ಸಂಯೋಜಕ ಪ್ರೇಮಾ, ಅಸಿಸ್ಟಂಟ್ ಪ್ರೋಫೆಸರ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಸಂಗೀತಾ ಬಗಲಿ, ಮಲ್ಲಿಕಾರ್ಜುನ ಬಡಾನೂರ ಹಾಗೂ ಅನೇಕರು ಉಪಸ್ಥಿತರಿದ್ದರು.

