Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಕಲಾ ಸಾಂಸ್ಕೃತಿಕ ಮೇಳಕ್ಕೆ ಕ್ಷಣಗಣನೆ
(ರಾಜ್ಯ ) ಜಿಲ್ಲೆ

ಜನಕಲಾ ಸಾಂಸ್ಕೃತಿಕ ಮೇಳಕ್ಕೆ ಕ್ಷಣಗಣನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ, ಕವಿ ಪ್ರಕಾಶನ ಮತ್ತು ಚಿತ್ತಾರ ಕಲಾಬಳಗ ಆಶ್ರಯದಲ್ಲಿ ಅಕ್ಟೋಬರ್ 6ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿರುವ “ಜನಕಲಾ ಸಾಂಸ್ಜೃತಿಕ ಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಮೊಟ್ಡಮೊದಲ ಬಾರಿಗೆ ಹೋರಾಟದ ಹಾಡುಗಳ ಮೂಲಕ ಸಮಾಜದಲ್ಲಿ ವೈಚಾರಿಕ ಜಾಗೃತಿ ಮೂಡಿಸುತ್ತಿರುವ ಪ್ರಜಾ ಗಾಯಕರ ಸಮಾಗಮವಾಗಲಿದೆ.
ಅಕ್ಟೋಬರ್ 6ರಂದು ಮುಂಜಾನೆ 10-30 ಗಂಟೆಗೆ ಮೇ ಕಲಾ ಮಂಡಳಿಯಿಂದ ಹೋರಾಟದ ಹಾಡಿನ ಮೂಲಕ ಪ್ರಾರಂಭಗೊಳ್ಳುವ ಮೇಳವನ್ನು ಮದುವೆ, ಸೋಬಾನೆ, ನಾಮಕರಣ ಮುಂತಾದ ಸಂದರ್ಭಗಳಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಎದೆಯೊಳಗಿಟ್ಟುಕೊಂಡು, ತಾವೇ ಹಾಡು ಕಟ್ಟಿ, ಹಲವು ದಶಕಗಳಿಂದ ಹಾಡುತ್ತ ಬರುತ್ತಿರುವ ಹಿರಿಯ ಜೀವಗಳಾದ ಬಸಮ್ಮ ಪೀರಪ್ಪ ನಡುವಿನಮನಿ, ಆದಮ್ಮ ಚಂದಪ್ಪ ಕದ್ರಿ, ಸಾವಿತ್ರಿಬಾಯಿ ನಿಡೋಣಿ, ರಮಾಬಾಯಿ ಸಂಗಪ್ಪ ಬೆಳ್ಳೆನವರ, ಪದ್ಮಾವತಿ ಸಂಗಪ್ಪ‌ ವಾಘಮೋರೆ ಅವರು ತಮ್ಮ ಹಾಡುಗಳ ಮೂಲಕ ಉದ್ಘಾಟಿಸಲಿದ್ದಾರೆ.
ಖ್ಯಾತ ಜನಪರ ಗಾಯಕರಾದ ಜನಾರ್ಧನ (ಜೆನ್ನಿ) ಮೈಸೂರು, ಲಕ್ಷ್ಮಿಪತಿ ಕೋಲಾರ ದಿಕ್ಸೂಚಿ‌ ಮಾತುಗಳನ್ನಾಡಲಿದ್ದಾರೆ. ಬೇರು-ಬೆವರು ಕಲಾ ಬಳಗ, ಚಿಂತಾಮಣಿ, ದಲಿತ ಕಲಾ ಮಂಡಳಿ ಗದಗ, ಹರ್ಲಾಪುರ ಧಾರವಾಡದ ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರದ ಕಲಾತಂಡ, ಕೊಪ್ಪಳದ ಧರಣಿ ಸಾಂಸ್ಕೃತಿಕ ಕಲಾಬಳಗ, ಸಿಂಧನೂರಿನ ಕ್ರಾಂತಿಕಾರಿ ಸಾಂಸ್ಕೃತಿಕ ಸಂಘ, ಕೊತಬಾಳದ ಅರುಣೋದಯ ಕಲಾ ಬಳಗದ ಸದಸ್ಯರು ಇಡೀ ದಿನ ತಮ್ಮ‌ ಕ್ರಾಂತಿಗೀತೆಗಳ ಮೂಲಕ ಹೋರಾಟದ ಕಿಚ್ಚನ್ನು ಹಚ್ಚಲಿದ್ದಾರೆ.
ಜೊತೆಗೆ ಮೈಸೂರು ಮೈಸೂರು ನಿರ್ದಿಗಂತ ಪ್ರಸ್ತುತಿಯ ” ಸಮತೆಯ ಸೊಲ್ಲುಗಳು”, ಹಿರಿಯ ಭಜನಾ ಪದಕಾರರಾದ ಲಕ್ಷ್ಮಣ ಗೊಣಸಗಿ ತಂಡವು ಭಜನಾ ಮತ್ತು ಜಮಖಂಡಿಯ ಸರಸ್ವತಿ ಸಬರದ ಅವರು ವಚನ-ಗಾಯನ ನಡೆಯಲಿದೆ.
ಸಂಜೆ 7 ಗಂಟೆಗೆ ವಿಕ್ರಮ ವಿಸಾಜಿ ರಚಿಸಿದ, ಪ್ರವೀಣರೆಡ್ಡಿ ನಿರ್ದೇಶಿಸಿರುವ, ಕೋಮುವಾದಿ ಹಂತಕರ ಗುಂಡಿಗೆ ಬಲಿಯಾದ ಡಾ. ಎಂ.ಎಂ. ಕಲಬುರ್ಗಿಯವರ ಜೀವನಾಧಾರಿತ ನಾಟಕ “ರಕ್ತವಿಲಾಪ” ಪ್ರದರ್ಶನಗೊಳ್ಳಲಿದೆ.
ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಮೇಳಕ್ಕೆ ಸಹಯೋಗ ನೀಡಿದ್ದು, ಸಮತಾ ಸಮಾಜದ ಕನಸು ಕಾಣುತ್ತಿರುವ ಮನಸುಗಳು ಜೊತೆಗಿವೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.