ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ಸಿಬ್ಬಂದಿಗಳ ಕುಂದುಕೊರತೆಗಳ ಚರ್ಚೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಪಂಚಾಯತ, ವಿಜಯಪುರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೆöÊಸ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಅಡುಗೆ ಸಿಬ್ಬಂದಿಗಳಿಗೆ ಪುನಶ್ಚೇತನ ಕಾರ್ಯಾಗಾರವು ನಗರದ ಬುದ್ದವಿಹಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಪ್ಪ ಆಶಾಪೂರ ಇವರ ನೆರವೇರಿಸಿ ಮಾತನಾಡುತ್ತ, ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ಅಡುಗೆ ಸಿಬ್ಬಂದಿಗೆ ಏಜೆನ್ಸಿಯವರು ಕಾಲಕಾಲಕ್ಕೆ ವೇತನ, ಪಿ.ಎಫ್. ಇ.ಎಸ್.ಐ. ನೀಡಬೇಕು. ಇವರ ಮೂಲಭೂತ ಸೌಲಭ್ಯಗಳ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದ್ದು, ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದೆ ಹಾಗೂ ಏಜೆನ್ಸಿಯನ್ನು ತೆಗೆದು ಸೊಸೈಟಿಯ ಮುಖಾಂತರ ವೇತನ ನೀಡುವಂತೆ ಮಾಡಿರುವ ಸರಕಾರದ ಆದೇಶವು ಸ್ವಾಗತಾರ್ಹ ಎಂದು ತಿಳಿಸಿದರು.
ರಾಜ್ಯಾದ್ಯಕ್ಷರಾದ ಭೀಮಶೆಟ್ಟಿ ಯಂಪಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಹಾಸ್ಟೇಲ್ & ವಸತಿ ಶಾಲಾ ನೌಕರರ ಬಗ್ಗೆ ಸಾಕಷ್ಟು ಬಾರಿ ಹೋರಾಟ ಮಾಡಿ ಸರಕಾರದ ಗಮನ ಸೆಳೆಯಲಾಗಿದೆ. ಸೊಸೈಟಿ ಮುಖಾಂತರ ಕನಿಷ್ಠ ವೇತನ ಬಿಡುಗಡೆ ಆಗುವವರೆಗೆ ನಮ್ಮ ಹೋರಾಟ ಜಾರಿಯಲ್ಲಿರುತ್ತದೆ. ಈ ಕುರಿತು ಅ.೧೪ ರಂದು ಬೆಂಗಳೂರಿನ ಪ್ರೀಡಂ ಪಾರ್ಕದಲ್ಲಿ ಅನಿರ್ದಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗುವದು ಎಂದು ತಿಳಿಸಿದರು.
ಈ ಸಮಯದಲ್ಲಿ ಮುಖ್ಯ ಅತಿಥಿಗಳಾಗಿ ಡಿ.ಎಮ್. ಚಲವಾದಿ, ಬಿ.ಎಸ್. ಅಂಗಡಿ, ಎಸ್.ಎ. ಜಮಾದಾರ, ಅಣ್ಣಾರಾಯ ಈಳಗೇರ, ಲಕ್ಷ್ಮಣ ಹಂದ್ರಾಳ, ಸುರೇಖಾ ರಜಪೂತ, ಇಸಾಮೋದ್ದೀನ ಬೀದರ, ಕಾಶೀನಾಥ ಬಂಡಿ, ವಿರೇಶ ಕಲಬೀಳಗಿ, ಜಿಲ್ಲಾಧ್ಯಕ್ಷ ಹುಲಗಪ್ಪ ಚಲವಾದಿ, ಲಕ್ಷ್ಮಣ ಮಸಳಿ, ರಾಮಚಂದ್ರ ಕೋಳಿ, ಮೀನಾಕ್ಷಿ ತಳವಾರ, ಯಮನಪ್ಪ ಬಜಂತ್ರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ವಿಜಯನಗರ, ಬೀದರ, ಕಲಬುರಗಿ, ಧಾರವಾಡ ಜಿಲ್ಲೆಯ ಪದಾಧಿಕಾರಿಗಳು, ಹಾಗೂ ಹಾಸ್ಟೇಲ್, ಮತ್ತು ವಸತಿ ಶಾಲಾ ನೌಕರರು ಉಪಸ್ಥಿತರಿದ್ದರು.
ದೊಡಮನಿ ಇವರು ನಿರೂಪಿಸಿದರು. ಹುಲಗಪ್ಪ ಚಲವಾದಿ ಸ್ವಾಗತಿಸಿದರು. ಲಕ್ಷ್ಮಣ ಮಸಳಿ ವಂದಿಸಿದರು.

