Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»
(ರಾಜ್ಯ ) ಜಿಲ್ಲೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯುವಕರನ್ನು ರೋಗಗ್ರಸ್ತರನ್ನಾಗಿಸುತ್ತಿರುವ ವಾಟ್ಸ್ ಆಪ್, ಫೇಸ್ಬುಕ್

ಮಹಾಂತೇಶ ಬಿರಾದಾರ ರ ‘ಮುಖಪುಸ್ತಕದ ಮರೆಯದ ಮುಖಗಳು’ ಕೃತಿ ಲೋಕಾರ್ಪಣೆಗೊಳಿಸಿದ ಡಾ.ಸಿದ್ದರಾಮಯ್ಯ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ವಾಟ್ಸ್ ಆಪ್, ಫೇಸ್ ಬುಕ್ ವಿಶ್ವವಿದ್ಯಾಲಯಗಳು ದುರ್ಬಳಕೆ ಆಗುತ್ತಿರುವ ಸಂದರ್ಭದಲ್ಲಿ ಡಾ.ಮಹಾಂತೇಶ ಬಿರಾದಾರ ಅವರ ‘ಮುಖಪುಸ್ತಕದ ಮರೆಯದ ಮುಖಗಳು’ ಕೃತಿ ಮಾರ್ಗದರ್ಶಕವಾಗಿದೆ ಎಂದು ಹಿರಿಯ ಲೇಖಕ ಡಾ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ನಗರದ ಬಸವ ಸಮಿತಿಯಲ್ಲಿ ಮೈಸೂರಿನ ಕವಿತಾ ಪ್ರಕಾಶನ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ವಾಟ್ಸ್ ಆಪ್, ಫೇಸ್ ಬುಕ್ ವಿಶ್ವವಿದ್ಯಾಲಯಗಳು ಯುವಕರನ್ನು ರೋಗಗ್ರಸ್ತರನ್ನಾಗಿ ಮಾಡುತ್ತಿವೆ. ಇದರಿಂದ ಸಾಮಾಜಿಕ ವಾತಾವರಣ ಹಾಳಾಗುವ ಹಾಗೆ ಯುವಕರ ನಡವಳಿಕೆಗಳು ಇರುತ್ತವೆ. ಇಂಥ ಸಂದರ್ಭದಲ್ಲಿ ಮಹಾಂತೇಶ ಬಿರಾದಾರ ಅವರು ಫೇಸ್ ಬುಕ್ ಮೂಲಕ ಬರೆದ ಲೇಖನಗಳು ಮಾದರಿಯಾಗಿವೆ ಎಂದು ಹೇಳಿದರು.
ವಾಟ್ಸ್ ಆಪ್, ಫೇಸ್ ಬುಕ್ ಮೂಲಕ ಸುಳ್ಳಿನ ಚರಿತ್ರೆ ಬೋಧನೆಯಾಗುತ್ತಿದೆ. ಇದರಿಂದ ಚಾರಿತ್ರಿಕ ಪ್ರಜ್ಞೆ ಕಳೆದುಕೊಂಡಿದ್ದೇವೆ ಜೊತೆಗೆ ವರ್ತಮಾನ ನಮಗೆ ಅರ್ಥವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಬರಹಕ್ಕೆ ಬೇಕಾದ ಸಾರ ಸಂಗ್ರಹ ಎಲ್ಲರಿಗೂ ದಕ್ಕುವುದಿಲ್ಲ. ಹಾಗೆಯೇ ಒಬ್ಬ ವ್ಯಕ್ತಿಯ ಸಮಗ್ರ ಪರಿಚಯ ಕಷ್ಟಸಾಧ್ಯ. ಅನುಭವ ದ್ರವ್ಯ ಇರಬೇಕು ಜೊತೆಗೆ ಭಾಷಾ ಸಾಮರ್ಥ್ಯವೂ ಇರಬೇಕು. ಈ ಗುಣಗಳಿರುವ ಮಹಾಂತೇಶ ಬಿರಾದಾರ ಅವರ ಕೃತಿ ಆಪ್ತವಾಗಿ ಓದಿಸಿಕೊಂಡು ಹೋಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೃತಿ ಪರಿಚಯಿಸಿದ ಹಿರಿಯ ಲೇಖಕ ರಂಜಾನ್ ದರ್ಗಾ, ವಿಜಾಪುರ ಮಂದಿ ಎಂದೂ ಆಗೋದಿಲ್ಲ ಚಿಂದಿ. ಆದರೆ ವಿಜಾಪುರ ಮಂದಿ ಹಿಂದುಳಿದಿಲ್ಲ. ಹಿಂದುಳಿವ ಹಾಗೆ ವ್ಯವಸ್ಥೆ ಮಾಡಿದೆ. ಆದರೂ ವಿಜಾಪುರ ಮಂದಿ ಬಹಳ ಸ್ವಾಭಿಮಾನಿಗಳು ಎಂದು ತಿಳಿಸಿದರು.
ಮನುಷ್ಯರನ್ನು ಮನುಷ್ಯರನ್ನಾಗಿ ನೋಡದೆ ಇರುವುದು ದುರಂತ. ಆದರೆ ಮಹಾಂತೇಶ ಬಿರಾದಾರ ಅವರು ಜಾತಿರಹಿತವಾಗಿ ತಮ್ಮ ಕೃತಿಯನ್ನು ಕಟ್ಟಿಕೊಟ್ಟಿದ್ದಾರೆ. ಅವರ
ಹೃದಯ ಸಂಪತ್ತು ಮತ್ತು ಮಿತ್ರತ್ವದ ಶಕ್ತಿ ದೊಡ್ಡದು ಎಂದು ಶ್ಲಾಘಿಸಿದರು.
ಮುಖ್ಯ ಅತಿಥಿಗಳಾಗಿ ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತ ಶ್ರೀನಿವಾಸ ಬಿದರಿ, ಕೃಷಿ ಇಲಾಖೆ ಆಯುಕ್ತ ವೈ.ಎಸ್‌.ಪಾಟೀಲ, ಆಶಾ ಎಂ.ಬಿ.ಪಾಟೀಲ, ಬಿಎಲ್ ಡಿಇ ಸಂಸ್ಥೆ ನಿರ್ದೇಶಕ ಬಸವನಗೌಡ ಎಂ.ಪಾಟೀಲ, ಕೆಎಸ್ ಡಿಎಲ್ ವ್ಯವಸ್ಥಾಪಕ
ನಿರ್ದೇಶಕ ಪಿಕೆಎಂ ಪ್ರಶಾಂತ್ ಹಾಜರಿದ್ದರು. ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅಧ್ಯಕ್ಷತೆ ವಹಿಸಿದ್ದರು.
ಮಹಾಂತೇಶ ಬಿರಾದಾರ ಸ್ವಾಗತಿಸಿದರು. ಗಣೇಶ ಅಮೀನಗಡ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೆ ಮುನ್ನ ಜ್ಯೋತಿರ್ಲಿಂಗ ಹೊನಕಟ್ಟಿ ಜಾನಪದ ಹಾಡುಗಳನ್ನು ಹಾಡಿದರು.

ಮರೆಯಾಗದ ಲೇಖಕ

ಮುಖ್ಯ ಅತಿಥಿಯಾದ ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ ಮಾತನಾಡಿ, ಸಚಿವರಾದ ಎಂ.ಬಿ.ಪಾಟೀಲ ಅವರ ಜೊತೆ ಹೆಚ್ಚು ಸಮಯ ಕಳೆದವರು ಮಹಾಂತೇಶ ಬಿರಾದಾರ. ಅಧಿಕಾರ ಕೇಂದಿತ ವಲಯದಲ್ಲಿದ್ದರೂ ಅವರೊಳಗಿನ ಲೇಖಕ ಮರೆಯಾಗದ ಹಾಗೆ ನೋಡಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಒಳ್ಳೆಯತನವನ್ನು ಗುರುತಿಸುವ, ಗುರುತಿಸಿದವರನ್ನು ಪರಿಚಯಿಸುವ ಒಳ್ಳೆಯ ಗುಣ ಮಹಾಂತೇಶ ಬಿರಾದಾರ ಅವರಲ್ಲಿದೆ ಎಂದು‌ ಅಭಿನಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.