ಇಂಡಿ: ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರಗಳಿರುವುದರಿಂದಾಗಿ ರಾಜ್ಯದ ಅಭಿವೃದ್ಧಿಯ ಹೆಚ್ಚಳಕ್ಕೆ ಕಾರಣವಾಗಿದೆ. ಆದ್ದರಿಂದ ಬಿಜೆಪಿ ಸರ್ಕಾರಕ್ಕೆ ಬೆಂಬಲಿಸಿ ನನ್ನನ್ನು ಆಯ್ಕೆ ಮಾಡಬೇಕೆಂದು ಇಂಡಿ ವಿಧಾನಸಭೆಯ ಬಿಜೆಪಿ ಅಭ್ಯರ್ಥಿ ಕಾಸೂಗೌಡ ಬಿರಾದಾರ ಮನವಿ ಮಾಡಿದರು.
ಶನಿವಾರ ತಾಲ್ಲೂಕಿನ ಹಳಗುಣಕಿ ಗ್ರಾಮದಲ್ಲಿ ಮನೆ-ಮನೆಗಳಿಗೆ ಭೇಟಿ ನೀಡಿ ಮತ ಯಾಚಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ, ಶಂಕರಗೌಡ ಪಾಟೀಲ, ಸಿದ್ದಲಿಂಗ ಹಂಜಗಿ, ರವಿ ಖಾನಾಪೂರ ಮಾತನಾಡಿ, ಕಾಸೂಗೌಡ ಬಿರಾದಾರ ಪರ ಮತ ಯಾಚಿಸಿದರು.
ಬಿ.ಎ. ಪಾಟೀಲ, ಮಲ್ಲಪ್ಪ ಹಲಸಂಗಿ, ಶೇಖರಯ್ಯ ಮಣಿಕಂಠ, ದುಂಡಪ್ಪ ಲಚ್ಯಾಣ, ಶ್ರೀಶೈಲಗೌಡ ಬಿರಾದಾರ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment