Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚನ್ನಬಸವಣ್ಣನವರ ಕರಣ ಹಸಿಗೆ ವೈಜ್ಞಾನಿಕವಾಗಿದೆ :ಸಿದ್ದಲಿಂಗ ಶ್ರೀ
(ರಾಜ್ಯ ) ಜಿಲ್ಲೆ

ಚನ್ನಬಸವಣ್ಣನವರ ಕರಣ ಹಸಿಗೆ ವೈಜ್ಞಾನಿಕವಾಗಿದೆ :ಸಿದ್ದಲಿಂಗ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ೧೨ ನೇ ಶತಮಾನದ ಅವಿರಳಜ್ಞಾನಿ ಚನ್ನಬಸವಣ್ಣನವರ ಕರಣ ಹಸಿಗೆಯಲ್ಲಿ ನಮ್ಮ ದೇಹದ ಪ್ರತಿಯೊಂದು ಅಂಗಗಳ ಬಗ್ಗೆ ವೈಜ್ಞಾನಿಕವಾಗಿ ನಿರೂಪಿಸಲಾಗಿದೆ. ಎಲ್ಲ ಧರ್ಮದವರಿಗೂ ಅನ್ವಯವಾಗುವ ಕರಣ ಹಸಿಗೆ ಅರಿತುಕೊಂಡರೆ ಎಲ್ಲರೂ ಆರೋಗ್ಯಕರವಾದ ಜೀವನ ನಡೆಸಲು ಪೂರಕವಾಗುತ್ತದೆ ಎಂದು ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಪಟ್ಟಣದ ಸಮೀಪವಿರುವ ಐತಿಹಾಸಿಕ ಹೋರಿಮಟ್ಟಿ ಗುಡ್ಡದಲ್ಲಿ ಇಂಗಳೇಶ್ವರ ಗ್ರಾಮದ ವಚನ ಶಿಲಾ ಮಂಟಪದ ಚನ್ನಬಸವ ಸ್ವಾಮೀಜಿಗಳಿಂದ ಹನ್ನೊಂದು ದಿನಗಳ ಕಾಲ ಜರುಗಿದ ಚನ್ನಬಸವಣ್ಣನವರ ಕರಣ ಹಸಿಗೆ ಪ್ರವಚನದ ಮುಕ್ತಾಯ ಸಮಾರೋಪದಂಗವಾಗಿ ಸೋಮವಾರ ಜರುಗಿದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಕರಣ ಹಸಿಗೆ ಯಾವುದೇ ಜನಾಂಗ, ಯಾವುದೇ ಧರ್ಮಕ್ಕೆ ಸಿಮೀತವಾಗಿರದೇ ಎಲ್ಲ ಧರ್ಮ, ಜನಾಂಗದವರಿಗೆ ಅನ್ವಯವಾಗುತ್ತದೆ. ಇದು ಇಂದಿನ ವೈದ್ಯಕೀಯ, ವಿಜ್ಞಾನ ಲೋಕಕ್ಕೆ ಇಂದಿಗೂ ಸವಾಲಾಗಿದೆ ನಿಂತಿದೆ. ದೇಹದ ಪ್ರತಿಯೊಂದು ಭಾಗಗಳನ್ನು ವೈಜ್ಞಾನಿಕ ಹಿನ್ನೆಲೆಯಲ್ಲಿ ಕರಣ ಹಸಿಗೆಯಲ್ಲಿ ನಿರೂಪಿಸಲ್ಪಟ್ಟಿವೆ. ಇಂತಹ ಕರಣ ಹಸಿಗೆಯನ್ನು ಸಾಮಾನ್ಯ ಜನರಿಗೂ ತಿಳಿಯುವ ರೀತಿಯಲ್ಲಿ ಪ್ರವನಚನಗೈದಿರುವ ಹಿರಿಯ ಸ್ವಾಮೀಜಿಗಳಾದ ಚನ್ನಬಸವ ಸ್ವಾಮೀಜಿಗಳು ನಮಗೆ ತಿಳಿಸಿಕೊಟ್ಟಿದ್ದಾರೆ. ಇವರನ್ನು ಪಡೆದ ನಾವೆಲ್ಲರೂ ತುಂಬಾ ಭಾಗ್ಯಶಾಲಿಗಳು ಎಂದು ಹೇಳಿದರು.
ಚಡಚಣದ ವಿರಕ್ತಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಬಸವಾದಿ ಶರಣರು ನಾಡಿಗೆ ಕೊಟ್ಟ ಕೊಡುಗೆಯನ್ನು ನಾವೆಂದೂ ಮರೆಯಬಾರದು. ವೈಜ್ಞಾನಿಕ ತಳಹದಿಯ ಮೇಲೆ ಹೊಸ ಆಲೋಚನೆಗಳನ್ನು ನಮಗೆಲ್ಲರಿಗೂ ಕೊಟ್ಟಿದ್ದಾರೆ. ಬಸವಣ್ಣನವರ ವಿಚಾರಗಳು ಮನುಕುಲಕ್ಕೆ ಇಂದು ತುಂಬಾ ಅಗತ್ಯವಿದೆ ಎಂದರು.
ಮಸಬಿನಾಳದ ಸಿದ್ದರಾಮ ಸ್ವಾಮೀಜಿ ಮಾತನಾಡಿ, ಬಸವೇಶ್ವರರ ವಿಚಾರಗಳನ್ನು ಕೇವಲ ಬಾಯಿ ಮಾತಿನಿಂದ ಹೇಳಿದರೆ ಸಾಲದು. ಅವುಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರಿಗೆ ನಿಜವಾಗಿ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಪ್ರವಚನಕಾರ, ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ ಮಾತನಾಡಿ, ಚನ್ನಬಸವಣ್ಣನವರು ಕೊಟ್ಟಿರುವ ಜ್ಙಾನವನ್ನು ಜಗತ್ತಿನಲ್ಲಿ ಯಾವ ದಾರ್ಶನಿಕರು ಇಂದಿಗೂ ನಮಗೆ ಕೊಡಲು ಸಾಧ್ಯವಾಗಿಲ್ಲ. ಚನ್ನಬಸವಣ್ಣನವರ ವಿಚಾರಗಳನ್ನು ನಮಗೆಲ್ಲ ತಿಳಿಸಲು ಸಹಾಯ ಮಾಡಿದ ವಚನ ಪಿತಾಮಹ ಫ.ಗು. ಹಳಕಟ್ಟಿ ಅವರನ್ನು ನಾವು ಎಂದಿಗೂ ಮರೆಯಬಾರದು. ಶರಣರ ವಿಚಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಬದುಕನ್ನು ಸುಂದರಗೊಳಿಸಿಕೊಳ್ಳಬೇಕೆಂದರು.
ವಿಪಿಕೆಪಿಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ನಿವೃತ್ತ ಶಿಕ್ಷಕ ಎಂ.ಜಿ.ಆದಿಗೊಂಡ ಮಾತನಾಡಿದರು. ಡಾ.ಮಹಾಂತೇಶ ಮಡಿಕೇಶ್ವರ, ಬಸಮ್ಮ ಹಂಜಗಿ, ಸಂಗಯ್ಯ ಕಾಳಹಸ್ತೇಶ್ವರಮಠ ಅವರು ತಮ್ಮ ಅನಿಸಿಕೆ ಹಂಚಿಕೆಕೊಂಡರು.
ವೇದಿಕೆಯಲ್ಲಿ ಪಡೇಕನೂರದ ಮಲ್ಲಿಕಾರ್ಜುನ ಸ್ವಾಮೀಜಿ, ಇಟಗಿಯ ಗುರುಶಾಂತವೀರ ಸ್ವಾಮೀಜಿ ಇದ್ದರು. ಶರಣು ಬಸ್ತಾಳ ವಚನ ಪ್ರಾರ್ಥನೆ ಮಾಡುವ ಜೊತೆಗೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಇದೇ ಸಂದರ್ಭದಲ್ಲಿ ಪ್ರಭಾಕರ ಖೇಡದ, ಕೊಟ್ರೇಶ ಹೆಗ್ಡಾಳ, ಶರಣು ಬಸ್ತಾಳ, ವೀರಣ್ಣ ಮರ್ತುರ, ಪ್ರವಚನ ಕಾರ್ಯಕ್ರಮದಲ್ಲಿ ನಿತ್ಯ ದಾಸೋಹದ ಕಾರ್ಯ ನೆರವೇರಿಸಿದವರನ್ನು ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.