ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತೀಯ ಅಂಚೆ ಸೇವೆ ದೇಶದ ಅವಿಭಾಜ್ಯ ಅಂಗವಾಗಿದ್ದು, ಇದು ವಿಶ್ವದಲ್ಲೇ ಅತಿ ದೊಡ್ಡದಾದ ಸಂಪರ್ಕ ಜಾಲವನ್ನು ಹೊಂದಿದೆ. ತಂತ್ರಜ್ಞಾನ ಬೆಳೆದಂತೆ ಇಂದಿನ ಜನರು ಅಂಚೆ ಸೇವೆಗಳ ಬಳಕೆಯನ್ನು ಕಡಿಮೆ ಮಾಡಿದ್ದು ಕಳವಳಕಾರಿಯಾಗಿದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ಅವರು ಗುರುವಾರದಂದು ನಾಗಠಾಣ ಗ್ರಾಮದ ಅಂಚೆ ಕಚೇರಿಯಲ್ಲಿ ಹಮ್ಮಿಕೊಂಡ ‘ರಾಷ್ಟ್ರೀಯ ಅಂಚೆ ದಿನ’ ವನ್ನು ಉದ್ಧೇಶಿಸಿ ಮಾತನಾಡಿದರು.
ಸಾರ್ವಜನಿಕ ಯೋಜನೆಗಳನ್ನು ಸುಲಭಗೊಳಿಸುವಲ್ಲಿ ಅಂಚೆ ಸೇವೆಗಳ ಪಾತ್ರ ಅನನ್ಯ.ಪ್ರಪಂಚದ ನಾನಾ ಭಾಗಗಳ ಜನತೆ, ಸಂಸ್ಥೆಗಳ ನಡುವಿನ ಸಂಪರ್ಕಕ್ಕೆ ಅತ್ಯಂತ ಹಳೆಯ ಸಾಧನವಾಗಿ ಅಂಚೆ ಸೇವೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಶಾಖಾ ಅಂಚೆ ಅಧಿಕಾರಿ ಹಣಮಂತ ಅರಕೇರಿ ಮಾತನಾಡಿ, ಅಂಚೆ ಇಲಾಖೆ ಉತ್ತಮ ಗ್ರಾಹಕ ಸ್ನೇಹಿಯಾಗಿದ್ದು, ಗ್ರಾಹಕರಿಗೆ ಮತ್ತಷ್ಟು ಸವಲತ್ತುಗಳನ್ನು ಒದಗಿಸುವ ಮೂಲಕ ದೇಶದ ವ್ಯವಸ್ಥೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ಹೇಳಿದರು.
ಸಹಾಯಕ ಅಂಚೆ ಅಧಿಕಾರಿ ಪ್ರಸಾದ ನಾಯ್ಕೋಡಿ, ಯುವ ಮುಖಂಡ ರಾಜು ಕತ್ನಳ್ಳಿ, ಪಿಕೆಪಿಎಸ್ ನಿರ್ದೇಶಕ ಪ್ರಭಾಕರ ಅರಕೇರಿ, ಗ್ರಾಮಸ್ಥರಾದ ಚನ್ನಯ್ಯ ನಂದಿಕೋಲ,
ಶ್ರೀಕಾಂತ ಗುಜ್ಜಲಕರ, ಕಾಶೀನಾಥ ಬಡಿಗೇರ, ಶರಣಪ್ಪ ಬಂಥನಾಳ, ಸಂತೋಷ ಸಂಗೋಗಿ, ಮಲ್ಲಿಕಾರ್ಜುನ ಸಮಗೊಂಡ, ಶರಣಪ್ಪ ಕತ್ನಳ್ಳಿ, ಕಲ್ಲಪ್ಪ ವಾಲೀಕಾರ, ಶಂಕ್ರೆಪ್ಪ ಅರಕೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಖಾ ಅಂಚೆ ಅಧಿಕಾರಿ ಹಣಮಂತ ಅರಕೇರಿ ಅವರನ್ನು ಸನ್ಮಾನಿಸಲಾಯಿತು.

