ಉದಯರಶ್ಮಿ ದಿನಪತ್ರಿಕೆ
ತಾಳಿಕೋಟಿ: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರ 67ನೇ ಜನ್ಮದಿನವನ್ನು ಸರಳ ಹಾಗೂ ಅರ್ಥಪೂರ್ಣವಾದ ರೀತಿಯಲ್ಲಿ ಆಚರಿಸಲು ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಜನ್ಮದಿನವಾದ ಅಕ್ಟೋಬರ್ 11ರಂದು ಮುಂಜಾನೆ ಏಳು ಗಂಟೆಗೆ ಶ್ರೀ ಖಾಸ್ಗತೇಶ್ವರ ಮಠದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕವನ್ನು ನಡೆಸಲಾಗುವುದು, 10: 00 ಗಂಟೆಗೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಒನ್ನೊಳಗೊಂಡು ವಿವಿಧ ಆಸ್ಪತ್ರೆಗಳಲ್ಲಿಯ ಒಳ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಲಾಗುವುದು. ಸಂಜೆ 6: 00 ಗಂಟೆಗೆ ಮುದ್ದೇಬಿಹಾಳ ಪಟ್ಟಣದಲ್ಲಿ ಜನ್ಮದಿನದ ಅಂಗವಾಗಿ ನಡೆಯುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವುದು ಎಂದು ತೀರ್ಮಾನಿಸಲಾಯಿತು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ಚೋರಗಸ್ತಿ, ಜಿಲ್ಲಾ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರಕಲ್ಲ, ಶರಣ ಭೂಪಾಲ ದೇಶಮುಖ, ಸಂಗನಗೌಡ ಅಸ್ಕಿ, ಮುನ್ನಾ ಅರ್ಜುಣಗಿ, ನೀಲಮ್ಮ ಪಾಟೀಲ, ಶಿವರಾಜ ಗುಂಡಕನಾಳ, ಸಂಗಮೇಶ ದೇಸಾಯಿ, ಮಹೇಶ ಛಲವಾದಿ, ಕಾಶಿನಾಥ ದೇಸಾಯಿ, ಸಂಗನಗೌಡ ದೇಸಾಯಿ, ಫೈರೋಜ ತಾಳಿಕೋಟಿ, ಹುಲಿಗೆಪ್ಪ ಛಲವಾದಿ ಮುಂತಾದವರು ಇದ್ದರು.

