Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತಿಕ್ರಮಣ ತೆರವು ಕಾರ್ಯಾಚರಣೆ ವೀಕ್ಷಿಸಿದ ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಅತಿಕ್ರಮಣ ತೆರವು ಕಾರ್ಯಾಚರಣೆ ವೀಕ್ಷಿಸಿದ ಡಿಸಿ ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತ, ಮೆಗಾ ಮಾರುಕಟ್ಟೆ ಹತ್ತಿರ, ರಾಣಿ ಚನ್ನಮ್ಮ ವೃತ್ತದಲ್ಲಿರುವ ಅಂಗಡಿಯವರು ಪಾದಚಾರಿ(ಪುಟ್ಪಾತ್) ರಸ್ತೆ ಮೇಲೆ ಅತಿಕ್ರಮಿಸಿದ ಜಾಗೆಯನ್ನು ತೆರವು ಗೊಳಿಸುವ ಕಾರ್ಯಾಚರಣೆಯು ಪುರಸಭೆಯಿಂದ ಗುರುವಾರ ಬೆಳ್ಳಂಬೆಳಗ್ಗೆ ೭ ಗಂಟೆಗೆ ಆರಂಭವಾಗಿ ಮಧ್ಯಾನ್ಹ ಸುಮಾರು ೧ ಗಂಟೆಯವರೆಗೂ ನಡೆಯಿತು.
ಈ ತೆರವು ಕಾರ್ಯಾಚರಣೆಯ ನಡೆಯುವ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತೆರವು ಕಾರ್ಯಾಚರಣೆ ವೀಕ್ಷಿಸಿ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ಮಾಹಿತಿ ಪಡೆದುಕೊಂಡು ರಸ್ತೆಯಲ್ಲಿ ಅತಿಕ್ರಮಿಸಿದ ಜಾಗೆಯನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು.
ಪಟ್ಟಣದ ಬಸವೇಶ್ವರ ವೃತ್ತ, ಮೆಗಾ ಮಾರುಕಟ್ಟೆ ಹತ್ತಿರ, ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಕೆಲ ಅಂಗಡಿಕಾರರು ಪಾದಚಾರಿ(ಪುಟ್ಪಾತ್) ರಸ್ತೆ ಮೇಲೆ ಮೆಟ್ಟಿಲು ನಿರ್ಮಿಸಿದ್ದನ್ನು, ಅಂಗಡಿಗಳ ಮುಂಭಾಗ ಹಾಕಲಾಗಿದ್ದ ಪತ್ರಾಸ್, ಕೆಲ ಅಂಗಡಿಗಳ ಬೋರ್ಡ್ಗಳನ್ನು ತೆರವು ಗೊಳಿಸಲಾಯಿತು. ತೆರವು ಕಾರ್ಯಾಚರಣೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಕೆಲವರಿಂದ ವಿರೋಧ ವ್ಯಕ್ತವಾದಾಗ, ಪಾದಚಾರಿ ರಸ್ತೆಯನ್ನು ಅತಿಕ್ರಮಿಸುವದು ಕಾನೂನು ರೀತಿ ಸರಿಯಲ್ಲ. ಅತಿಕ್ರಮಿಸಿದ ಜಾಗೆಯನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಲಾಗುವುದು. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.
ಮುಂದಿನ ದಿನಗಳಲ್ಲಿ ಮುದ್ದೇಬಿಹಾಳ ರಸ್ತೆಯಲ್ಲಿ ಮಿನಿವಿಧಾನಸೌಧದವರೆಗೂ, ತೆಲಗಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ತೆರವು ಕಾರ್ಯಾಚರಣೆಯನ್ನು ದಸರಾ ಹಬ್ಬದ ನಂತರ ನಡೆಸಲಾಗುವದು ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ತೆರವು ಕಾರ್ಯಾಚರಣೆಯಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಪಿಐ ಗುರುಶಾಂತ ದಾಶ್ಯಾಳ, ಪಿಎಸ್ಐ ಐ.ಎಂ.ದುಂಡಸಿ, ಪುರಸಭೆ ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಅಭಿಯಂತರರಾದ ಸಂತೋಷ ಗಿಡ್ಡಸಣ್ಣನವರ, ಮಹಾದೇವ ಜಂಬಗಿ, ಆರೋಗ್ಯ ನಿರೀಕ್ಷಕರಾದ ವಿಜಯ ವಂದಾಲ, ಮಹೇಶ ಹಿರೇಮಠ, ಪುರಸಭೆಯ ಸಿಬ್ಬಂದಿ, ಪೌರಕಾರ್ಮಿಕರು, ಹೆಸ್ಕಾಂ ಇಲಾಖೆಯ ಸಿಬ್ಬಂದಿ ಇತರರು ಇದ್ದರು.
ಈಗಾಗಲೇ ವಿಜಯಪುರ ರಸ್ತೆ, ಬಸವೇಶ್ವರ ವೃತ್ತ ಸೇರಿದಂತೆ ವಿವಿಧೆಡೆ ಪಾದಚಾರಿ ರಸ್ತೆಯ ಮೇಲಿದ್ದ ಗೂಡಂಗಡಿಗಳ ತೆರವು ಕಾರ್ಯಾಚರಣೆಯನ್ನು ಪುರಸಭೆಯಿಂದ ನಡೆದಿರುವುದನ್ನು ಸ್ಮರಿಸಿಕೊಳ್ಳಬಹುದು.

ಸಾರ್ವಜನಿಕ ಗ್ರಂಥಾಲಯದ ಜಾಗೆಗೆ ಡಿಸಿ ಭೇಟಿ

ತೆರವು ಕಾರ್ಯಾಚರಣೆ ವೀಕ್ಷಿಸಿದ ನಂತರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪಟ್ಟಣದ ಲಕ್ಷ್ಮೀ ನಗರದ ಹತ್ತಿರವಿರುವ ಅಂಬಿಗರ ಚೌಡಯ್ಯ ವೃತ್ತ ಸಮೀಪವಿರುವ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣವಾಗುವ ಜಾಗೆಯನ್ನು ವೀಕ್ಷಿಸಿದರು.
ನಂತರ ಜಿಲ್ಲಾಧಿಕಾರಿಗಳು ಗ್ರಂಥಾಲಯ ಕಟ್ಟಡ ನಿರ್ಮಾಣ ಮಾಡುವಾಗ ಕಟ್ಟಡದ ಮುಂಭಾಗ ಜಾಗೆಯನ್ನು ಬಿಟ್ಟು ವ್ಯವಸ್ಥಿತವಾಗಿ ಗ್ರಂಥಾಲಯ ಕಟ್ಟಡವನ್ನು ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ವಿವಿಧ ತಾಲೂಕು ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಕುರಿತು ಮಾಹಿತಿ ಪಡೆದುಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.