Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಅರಿವು ಅಗತ್ಯ :ಡಾ.ಮಯೂರ
(ರಾಜ್ಯ ) ಜಿಲ್ಲೆ

ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಅರಿವು ಅಗತ್ಯ :ಡಾ.ಮಯೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜೆಎಸ್‌ಎಸ್ ಹಾಸ್ಪಿಟಲ್ಸ್ ವತಿಯಿಂದ ಪ್ಲಾಸ್ಟಿಕ್ ಮುಕ್ತ ಪರಿಸರ ಜಾಗೃತಿ ಜಾಥಾ ಹಾಗೂ ಯೋಗ ಶಿಬಿರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ಲಾಸ್ಟಿಕ್ ಇಂದು ಮಾನವನನ್ನು ಸಾವಿನ ಮನೆ ಬಾಗಿಲಿನಲ್ಲಿ ನಿಲ್ಲಿಸುತ್ತಿದೆ. ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಇಲ್ಲದೆ ಬದುಕುವುದಕ್ಕೆ ಸಾಧ್ಯವೇ ಇಲ್ಲ ಎನ್ನುವ ಮಟ್ಟದಲ್ಲಿ ಇಂದು ಪ್ಲಾಸ್ಟಿಕ್ ಮಾನವನ ಜೀವನದೊಂದಿಗೆ ಬೆರೆತು ಹೋಗಿದ್ದು ಪ್ಲಾಸ್ಟಿಕ್ ನಮ್ಮನ್ನು ಕೊಲ್ಲುವ ಮೊದಲು ನಾವು ಪ್ಲಾಸ್ಟಿಕ್‌ನ್ನು ನಿರ್ಮೂಲ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಜೆಎಸ್‌ಎಸ್ ಆಸ್ಪತ್ರೆಯ ನರರೋಗ ವಿಭಾಗದ ಮುಖ್ಯಸ್ಥ ಅಂತರಾಷ್ಟ್ರೀಯ ಖ್ಯಾತಿಯ ಯೋಗಿಕ್ ನ್ಯೂರೋ ಸರ್ಜನ್ ಡಾ.ಮಯೂರ್ ಕಾಕು ಹೇಳಿದರು.
ವಿಶ್ವ ಬೆನ್ನುಹುರಿ ದಿನದ ಅಂಗವಾಗಿ ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆಯೋಜಿಸಲಾಗಿದ್ದ ಯೋಗಶಿಬಿರ ಹಾಗೂ ವಾಕೇಥಾನ್ ಉದ್ಧೇಶಿಸಿ ಮಾತನಾಡಿದ ಅವರು; ಪ್ರತಿ ವರ್ಷವೂ ಜಾಗತಿಕವಾಗಿ ೪೬೦ ಮಿಲಿಯನ್ ಮೆಟ್ರಿಕ್‌ಟನ್ ಪ್ಲಾಸ್ಟಿಕ್‌ನ್ನು ಉತ್ಪಾದಿಸಲಾಗುತ್ತಿದೆ. ಸುಮಾರು ೨೦ ಮಿಲಿಯನ್ ಮೆಟ್ರಿಕ್‌ಟನ್ ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಪಾಲಿನ್ಯ ಉಂಟಾಗುತ್ತಿದೆ. ೧೨ ಮಿಲಿಯನ್ ಮೆಟ್ರಿಕ್‌ಟನ್ ಪ್ಲಾಸ್ಟಿಕ್ ಕಡಲನ್ನು ಸೇರುತ್ತಿರುವುದರಿಂದ ಜಲಚರಗಳ ಜೀವಕ್ಕೆ ಸಂಚಕಾರ ಬರುತ್ತಿದೆ. ಒಟ್ಟು ತಯಾರಾಗಿರುವ ಪ್ಲಾಸ್ಟಿಕ್‌ನಲ್ಲಿ ೯% ರಷ್ಟು ಮಾತ್ರ ಪುನರ್ ಬಳಕೆಯಾಗುತ್ತಿದ್ದು ೭೯% ರಷ್ಟು ನೈಸರ್ಗಿಕ ವಿಕೋಪಗಳಲ್ಲಿ ಸೇರಿ ನಿಸರ್ಗವನ್ನು ಹಾಳು ಮಾಡುತ್ತಿದೆ. ೬೦% ರಷ್ಟು ಮನೆಬಳಕೆಯ ಪ್ಲಾಸ್ಟಿಕ್ ಕಾಂಪೋಸ್ಟ ಗೊಬ್ಬರ ಮಾಡುವುದಕ್ಕೆ ಯೋಗ್ಯವಾಗಿದ್ದರು ಅದರ ನಿರ್ವಹಣೆ ಮಾಡುವುದಕ್ಕೆ ಸಾಧ್ಯವಾಗದ ಕಾರಣ ಪರಿಸರದ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತಿದೆ. ಬೀದಿಗೆ ಬಿಸಾಕುತ್ತಿರುವ ಪ್ಲಾಸ್ಟಿಕ್ ಸೇವೆನೆಯಿಂದ ಸಾವಿರಾರು ಗೋವುಗಳು ಪ್ರಾಣ ಬಿಡುತ್ತಿವೆ. ಅಲ್ಲದೆ ಪ್ಲಾಸ್ಟಿಕ್ ನಮ್ಮ ರಕ್ತದಲ್ಲಿ ಸೇರಿಕೊಂಡು ಕ್ಯಾನ್ಸರ್ ರೋಗಕ್ಕೂ ದಾರಿ ಮಾಡಿಕೊಡುತ್ತಲಿದೆ. ಹೀಗಾಗಿ ಪ್ಲಾಸ್ಟಿಕ್ ನಿರ್ಮೂಲನೆ ಮಾಡುವುದಕ್ಕೆ ನಾವೆಲ್ಲ ಕಂಕಣಬದ್ಧರಾಗಬೇಕು ಎಂದು ಹೇಳಿದರು.
ಇಂದು ಬೆನ್ನುಹುರಿ ಸಮಸ್ಯೆ ಸೇರಿದಂತೆ ನರ ರೋಗಗಳು ಬಹಳಷ್ಟು ಜನಗಳನ್ನು ಬಾಧಿಸುತ್ತಿವೆ. ಇದಕ್ಕೆ ಕೇವಲ ಶಸ್ತçಚಿಕಿತ್ಸೆಯೇ ಮದ್ದು ಎಂದು ನಂಬಿಕೊಂಡಿದ್ದಾರೆ. ಆದರೆ ಯೋಗ ಚಿಕಿತ್ಸೆಯ ಮೂಲಕ ಆಪರೇಷನ್ ಇಲ್ಲದೇ ಸಮಸ್ಯೆಯನ್ನು ವಾಸಿ ಮಾಡಬಹುದಾಗಿದ್ದು ಯೋಗಶಕ್ತಿಯಿಂದ ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಇನ್ನುಮುಂದೆ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಯೋಗಿಕ್ ನ್ಯೂರೋ ಚಿಕಿತ್ಸೆ ಲಭ್ಯವಿರಲಿದ್ದು ಅವಶ್ಯಕತೆ ಉಳ್ಳವರು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಗಳು ಸಿದ್ಧೇಶ್ವರ ಶ್ರೀಗಳ ಕನಸಾದ ಸ್ವಚ್ಚ ಹಾಗೂ ಸದೃಢ ವಿಜಯಪುರವನ್ನು ನಿರ್ಮಾಣ ಮಾಡುವಲ್ಲಿ ನಗರದ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳರ ಕೊಡುಗೆ ಅಪಾರವಾಗಿದ್ದು ಮುಂದಿನ ದಿನಗಳಲ್ಲಿ ಅವರಿಂದ ಇನ್ನೂ ಹೆಚ್ಚಿನ ಸೇವೆ ಒದಗಿ ಬರಲಿ ಎಂದರು.

ನಗರದ ಶಾಸಕ ಬಸನಗೌಡ ರಾ ಪಾಟೀಲ್ ಯತ್ನಾಳ ಅವರು ಬೆಳಿಗ್ಗೆ ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪ್ಲಾಸ್ಟಿಕ್ ಮುಕ್ತ ವಿಜಯಪುರ ನಿರ್ಮಾಣದ ಜಾಗೃತಿಗಾಗಿ ವಾಕೇಥಾನ್‌ಗೆ ಚಾಲನೆ ನೀಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರನ್ನ ಬೆಳಗಲಿಯ ಯೋಗ ಗುರು ಸದಾಶಿವಯ್ಯನವರು, ಸಿದ್ಧೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷ ಸಂಗು ಸಜ್ಜನ್, ನಿರ್ದೇಶಕ ರಾಮನಗೌಡ ಬ. ಪಾಟೀಲ್ ಯತ್ನಾಳ, ಜೆಎಸ್‌ಎಸ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೇಡ್ಕರ ಸೇರಿದಂತೆ ಅನೇಕ ಕರಿಯರ್ ಅಕಾಡೆಮಿ ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಐಆರ್‌ಬಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.