Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ

ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಅ.೧೭ರಿಂದ ತಳ್ಳುಗಾಡಿಗಳು ಸಂಪೂರ್ಣ ನಿಷೇಧ :ಗೊಳಸಂಗಿ
Uncategorized

ಅ.೧೭ರಿಂದ ತಳ್ಳುಗಾಡಿಗಳು ಸಂಪೂರ್ಣ ನಿಷೇಧ :ಗೊಳಸಂಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ಪಟ್ಟಣದ ಬಸವೇಶ್ವರ ವೃತ್ತದಿಂದ ಇಂದಿರಾ ವೃತ್ತದವರೆಗೆ ಬೀದಿ ಬದಿ ವ್ಯಾಪರಸ್ಥರು ತಮಗೆ ನಿಗದಿಪಡಿಸಿದ ಜಾಗೆಯಲ್ಲಿ ಮಾತ್ರ ವ್ಯಾಪಾರ ನಡೆಸಬೇಕು. ಅ೧೭ ರಿಂದ ತಳ್ಳುಗಾಡಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿರ್ಣಯ ಮೀರಿ ನಡೆದವರ ವಿರುದ್ಧ ಕ್ರಮ ಕೈಗೊಳ್ಳಲಾಗುವದು ಎಂದು ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಹೇಳಿದರು.
ಪಟ್ಟಣದ ಪುರಸಭೆ ಸಬಾಭವನದಲ್ಲಿ ಟ್ರಾಫಿಕ್ ಸಮಸ್ಯೆ ಮುಕ್ತಿಗಾಗಿ ಪುರಸಭೆ ವತಿಯಿಂದ ಆಯೋಜಿಸಲಾಗಿದ್ದ ಬೀದಿ ಬದಿ ವ್ಯಾಪಾರಸ್ಥರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಸವೇಶ್ವರ ವೃತ್ತದಿಂದ ಸಿದ್ರಾಮೇಶ್ವರ ವೃತ್ತದವರೆಗೆ ಸಾಕಷ್ಟು ಟ್ರಾಫಿಕ್ ಸಮಸ್ಯೆಯಾಗುತ್ತಿರುವದರಿಂದ ಎಲ್ಲ ವ್ಯಾಪಾರಿಗಳಿಗೆ ಒಂದೆಡೆ ಸ್ಥಳ ನಿಗದಿ ಮಾಡಲಾಗಿತ್ತು. ವ್ಯಾಪಾರಸ್ಥರು ದೀಪಾವಳಿಯವರೆಗೆ ಅವಕಾಶ ಕೇಳಿದ್ದರಿಂದ ಗಾಡಿಗಳಿಲ್ಲದೇ ಫುಟ್‌ಪಾತ್ ಮೇಲೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೇವೆ. ತಮಗೆ ನಿಗದಿಪಡಿಸಿದ ಜಾಗೆಗಿಂತ ಮುಂದೆ ಬಂದರೆ ದಂಡ ವಿಧಿಸಲಾಗುವದು. ವಾಹನ ಸವಾರರು ತಮ್ಮ ವಾಹನಗಳನ್ನು ನಿಲ್ಲಿಸಲು ಹಳೆಯ ನ್ಯಾಯಾಲಯದ ಬಳಿ ಮತ್ತು ಹಳೆಯ ಪೊಲೀಸ್ ಕ್ವಾರ್ಟರ್ಸ ಜಾಗೆಯನ್ನು ನಿಗದಿಪಡಿಸಿದ್ದೇವೆ. ಅಲ್ಲಿಯೇ ಪಾರ್ಕ ಮಾಡಬೇಕು. ದೀಪಾವಳಿಯ ಬಳಿಕ ಇನ್ನಷ್ಟು ನಿಯಮಗಳನ್ನು ರೂಪಿಸಿ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವದಾಗಿ ತಿಳಿಸಿದರು.
ಪುರಸಭೆ ಮುಖ್ಯಾಧಿಖಾರಿ ಮಲ್ಲನಗೌಡ ಬಿರಾದಾರ ಮಾತನಾಡಿ ಬೀದಿ ಬದಿ ವ್ಯಾಪಾರಸ್ಥರ ಸಂಘದವರ ಒಮ್ಮತದ ಅಭಿಪ್ರಾಯದಂತೆ ಒಂದು ಕುಟುಂಬಕ್ಕೆ ಒಂದು ಜಾಗೆಯಂತೆ ಬೀದಿ ಬದಿ ವ್ಯಾಪಾರ ನಡೆಸಲು, ಸಂಚಾರಕ್ಕೆ ತೊಂದರೆಯಾಗದಂತೆ ದೀಪಾವಳಿಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲ ಜವಾಬ್ದಾರಿಯನ್ನ ಸಂಘದ ಅಧ್ಯಕ್ಷರು ನಿರ್ವಹಿಸಬೇಕು. ಈ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಿರಬೇಕು. ಯಾವುದೇ ರೀತಿಯ ತೊಂದರೆಯಾದಲ್ಲಿ ಅದಕ್ಕೆ ನಿವೇ ಹೊಣೆಗಾರರು. ಸಂಚಾರಕ್ಕೆ ತೊಂದರೆ ಮಾಡುವದಾಗಲೀ. ಬೀದಿಗೆ ಬಂದು ವ್ಯಾಪಾರ ನಡೆಸುವದಾಗಲೀ ಮಾಡಿದರೆ ಮುಲಾಜಿಲ್ಲದೆ ಕ್ರಮ ಕೊಳ್ಳುತ್ತೇವೆ ಎಂದರು.
ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮಹೆಬೂಬ ಎಲೆಗಾರ ಮಾತನಾಡಿ ಸಭೆಯ ನಿರ್ಣದಂತೆ ನಾವು ನಡೆದುಕೊಳ್ಳುತ್ತೇವೆ. ಒಂದು ಕುಟುಂಬಕ್ಕೆ ಒಂದೇ ಸ್ಥಳ ನಿಗದಿಪಡಿಸುವಲ್ಲಿ ಪ್ರಾಮಾಣಿಕವಾಗಿರುತ್ತೇನೆ. ದೀಪಾವಳಿಯವರೆಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ಎಲ್ಲ ವ್ಯಾಪಾರಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುವೆ ಎಂದರು.
ಇದೇ ವೇಳೆ ಬೀದಿಬದಿ ವ್ಯಾಪಾರಿಗಳಿಗೆ ಸಿಗುವ ಲೋನ್ ಸೇರಿದಂತೆ ಇತರೆ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು. ಈ ವೇಳೆ ಎಎಸ್‌ಐ ಸಾಲಿ, ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ಬ್ಲಾಕ್ ಅಧ್ಯಕ್ಷ ಮಹೆಬೂಬ ಕುಳಗೇರಿ, ಆಸೀಪ ನಿಡಗುಂದಿ, ಪರಶುರಾಮ ನಾಲತವಾಡ, ಸಂತೋಷ ವಡ್ಡರ ಸೇರಿದಂತೆ ಹಲವು ವ್ಯಾಪಾರಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ

ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026
    In ದಿನಪತ್ರಿಕೆ
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.