ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಸತತ ಐದು ದಿನಗಳಿಂದ ನಡೆದ ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆ ನಾಡಿನ ಮೂಲೆಗಳಿಂದ ಬಂದ ಸಹಸ್ರಾರು ಭಕ್ತರ ಮದ್ಯೆ ಶುಕ್ರವಾರ ಸಂಪನ್ನವಾಯಿತು.
ಪಟ್ಟಣದ ಹೊರವಲಯದಲ್ಲಿರುವ ಮಲ್ಲಯ್ಯನ ದೇವಸ್ಥಾನಕ್ಕೆ ಕಳೆದ ಸೋಮವಾರದಂದು ತೆರಳಿದ್ದ ರಾವುತರಾಯನನ್ನು ತೆರೆದ ಬಂಡಿಯಲ್ಲಿ ಸಹಸ್ರಾರು ಭಕ್ತಾಧಿಗಳ ಜಯಘೋಷದ ಮದ್ಯೆ ಮೂಲ ದೇವಸ್ಥಾನಕ್ಕೆ ಕರೆ ತರಲಾಯಿತು. ನಾಡಿನ ಹಾಗು ಮಹಾರಾಷ್ಟç, ಆಂಧ್ರ, ಗೋವಾ ರಾಜ್ಯಗಳಿಂದ ಆಗಮಿಸಿದ ಭಕ್ತ ಸಮೂಹ ವಾಸ್ತವ್ಯ ಹೂಡಿ ವಿವಿಧ ಪೂಜಾ ಕರ್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾದರು. ಬೆಳಿಗ್ಗೆ ೭.೦೦ ಗಂಟೆಗೆ ಪ್ರಾರಂಭವಾದ ಭವ್ಯ ಬಂಡಿ ಮೆರವಣಿಗೆಯಲ್ಲಿ ವಿರಾಜಮಾನನಾಗಿ ಕಂಗೊಳಿಸಿದ ರಾವುತರಾಯನನ್ನು ಭಕ್ತಾಧಿಗಳು ಭಕ್ತಿಯೊಂದಿಗೆ ಭಂಡಾರ ಎಸೆದು ಏಳು ಕೋಟಿ-ಏಳು ಕೋಟಿ ಗೇ ಎಂಬ ಜಯಕಾರದೊಂದಿಗೆ ಭಕ್ತಿ ಸಮರ್ಪಿಸಿದರು.
ಜಾತ್ರೆಯಲ್ಲಿ ವಿಶೇಷವಾಗಿ ಮಹಿಳಾ ಮತ್ತು ಪುರುಷ ವಗ್ಗೆಗಳು ಹೆಗಲ ಮೇಲೆ ಕಂಬಳಿ ಹೊತ್ತು, ಕೈಯಲ್ಲಿ ತ್ರಿಶೂಲ ಹಿಡಿದು ಹಣೆ ತುಂಬ ಭಂಡಾರ ಬಡಿದುಕೊಂಡು ರಾವುತರಾಯನ ಬಂಡಿ ಮುಂದೆ ಮೈದುಂಬಿ ಕುಣಿಯುತ್ತ ಜನರ ಗಮನ ಸೆಳೆದರು. ಪಟ್ಟಣದ ಜನರು ಐದು ದಿನಗಳ ವರೆಗೆ ತಮ್ಮ ಕೆಲಸ ಕರ್ಯಗಳನ್ನು ಬದಿಗೊತ್ತಿ, ಪ್ರತಿದಿನ ಪೂಜಾ ಕರ್ಯ ಸಾಂಸ್ಕೃತಿಕ ಕರ್ಯಕ್ರಮದಲ್ಲಿ ಪಾಲ್ಗೊಂಡು ಜಾತ್ರೋತ್ಸವಕ್ಕೆ ಮೆರಗು ತಂದರು.
ಉಚಿತ ಅನ್ನಪ್ರಸಾದ
ಪಟ್ಟಣದ ಹಲವಾರು ಯುವಕ ಸಂಘಗಳು ವ್ಯಾಪಾರಸ್ತರು, ಸ್ವಯಂ ಪ್ರೇರಣೆಯಿಂದ ರಾಷ್ಟ್ರೀಯ ಹೆದ್ದಾರಿಯ ಹತ್ತಿರ ಉಚಿತ ಅನ್ನ ಪ್ರಸಾದ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ಜೊತೆಗೆ ರಸಮಂಜರಿ, ಸಂಗೀತ ಸಂಜೆ, ಕುಸ್ತಿ ಪಂದ್ಯಾವಳಿಗಳು ಜನರ ಗಮನ ಸೆಳೆದವು. ಜಾತ್ರೆಯುದ್ದಕ್ಕೂ ಪಿಎಸೈಗಳಾದ ಬಸವರಾಜ ತಿಪ್ಪಾರಡ್ಡಿ, ಪಿ.ಎಮ್.ಚೌರ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ್ ವಹಿಸಿದ್ದರಿಂದ ಯಾವುದೆ ಅಹಿತಕರ ಘಟನೆಗಳು ನಡೆಯದೆ ಶಾಂತಿಯಿಂದ ಮುಕ್ತಾಯಗೊಂಡ ಜಾತ್ರೆ ಜನಸಮೂಹದ ಪ್ರಶಂಸೆಗೆ ಪಾತ್ರವಾಯಿತು.

