Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರೀಯತೆಯ ಚಿಂತನೆ ನಮ್ಮ ನರನಾಡಿಗಳಲ್ಲಿ ಪಸರಿಸಬೇಕಿದೆ
(ರಾಜ್ಯ ) ಜಿಲ್ಲೆ

ರಾಷ್ಟ್ರೀಯತೆಯ ಚಿಂತನೆ ನಮ್ಮ ನರನಾಡಿಗಳಲ್ಲಿ ಪಸರಿಸಬೇಕಿದೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ವಿಜಯದಶಮಿ ಉತ್ಸವದಲ್ಲಿ ಪ್ರಾಂತ ಸಂಪರ್ಕ ಪ್ರಮುಖ ಸುಧೀರಸಿಂಗ್ ಘೋರ್ಪಡೆ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರೋಲೆಕ್ಸ, ಹುಬ್ಲಾಟ್ ಮೊದಲಾದ ವಿದೇಶಿಗರ ಬ್ರ್ಯಾಂಡ್ ಗಳನ್ನೇ ಪ್ರತಿಷ್ಠೆಯಾಗಿಸುವ ಮನೋಭಾವದಿಂದ ಹೊರಬಂದು ಸ್ವದೇಶಿ ಭಾವ ಜಾಗೃತವಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಂಪರ್ಕ ಪ್ರಮುಖ ಸುಧೀರಸಿಂಗ್ ಘೋರ್ಪಡೆ ಹೇಳಿದರು.
ವಿಜಯಪುರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕರ ಸಂಘದ ವತಿಯಿಂದ ನಡೆದ ವಿಜಯದಶಮಿ ಉತ್ಸವವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘ ನೂರು ವಸಂತಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಪಂಚ ಪರಿವರ್ತನೆ ಸೂತ್ರದೊಂದಿಗೆ ಬದಲಾವಣೆಗೆ ಸಂಕಲ್ಪ ಮಾಡಿದೆ ಎಂದರು.
ಸ್ವದೇಶಿ ಬಟ್ಟೆ ಒಂದೇ ದಿನದ ಆಚರಣೆಯಾಗಬಾರದು, ಗೋ ಆಧಾರಿತ ಕೃಷಿ ಕೇಂದ್ರಿತ ಸ್ವದೇಶಿ ಚಿಂತನೆ, ವಿದೇಶಿ ವಸ್ತುಗಳ ವ್ಯಾಮೋಹದಿಂದ ದೂರವಾಗಬೇಕಿದೆ ಎಂದರು.
ಪರಿಸರದಲ್ಲಿ ಪರಿವರ್ತನೆ ಹಾಗೂ ಸಂರಕ್ಷಣೆ, ಸಾತ್ವಿಕ ಆಹಾರ ಪದ್ದತಿ, ಕುಟುಂಬ ವ್ಯವಸ್ಥೆ ಹಾಗೂ ಶಿಕ್ಷಣ ವ್ಯವಸ್ಥೆಗೆ ಸನಾತನ ಸಂಸ್ಕೃತಿಯ ಸ್ಪರ್ಶ ಹೀಗೆ ಅನೇಕ ಪರಿವರ್ತನೆಯ ಸಂಕಲ್ಪವನ್ನು ಸಂಘ ಮಾಡಿದೆ ಎಂದರು.
ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಶಂಕರ ಜೀರಗಾಳ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಆರ್.ಎಸ್. ಎಸ್. ವಿಜಯಪುರ ವಿಭಾಗ ಸಂಘ ಚಾಲಕ ಚಿದಂಬರ ಕರಮರಕರ ಉಪಸ್ಥಿತರಿದ್ದರು.
ಸಮಾವೇಶಕ್ಕೂ ಮುನ್ನ ಗಣವೇಷಧಾರಿಗಳಿಂದ ಆತ್ಮ ರಕ್ಷಣಾ ಕಲೆಯ ಪ್ರದರ್ಶನ, ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಿತು. ಶಿಸ್ತು ಹಾಗೂ ಏಕತೆ ಪ್ರತಿಬಿಂಬಿಸುವ ಸಮತಾ ಪ್ರಯೋಗವನ್ನು ಗಣವೇಷಧಾರಿಗಳು ಪ್ರದರ್ಶಿಸಿದರು.

ವಿದೇಶಿ ಮತಾಂಧ ಶಕ್ತಿಗಳ ಬಲ

ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಗೆ ವಿದೇಶಿ ಮತಾಂಧ ಶಕ್ತಿಗಳು ಬಲ ತುಂಬುತ್ತಿವೆ, ಗಣಪತಿಯ ಮೆರವಣಿಗೆ ಅಲ್ಲಿ ಹಾದು ಹೋಗಬಾರದು ಎಂದರೆ ಇದೇನು ಪಾಕಿಸ್ತಾನವೇ? ಭಾರತ ಮಾತಾ ಕೀ ಜೈ ಎಂದು ಘೋಷಣೆ ಕೂಗಿದವರನ್ನು ಬಂಧಿಸಿದ ದೊಡ್ಡ ದುರ್ದೈವ ನಡೆದು ಹೋಯಿತು. ಲವ್ ಜಿಹಾದ್ ದೊಡ್ಡ ಸವಾಲು, ವಿದೇಶಿ ಶಕ್ತಿಗಳು ಇದಕ್ಕೆ ಕುಮ್ಮಕ್ಕು ನೀಡುತ್ತಿವೆ. ರಾಷ್ಟ್ರೀಯತೆಯ ಚಿಂತನೆ ನಮ್ಮ ನರ ನಾಡಿಗಳಲ್ಲಿ ಪಸರಿಸಬೇಕಿದೆ ಎಂದರು.

ಮುಸಲ್ಮಾನರು ಹಿಂದೂಗಳೇ

ಹಿಂದೂ ಎಂದರೆ ಜಾತಿ ಸೂಚಕವಲ್ಲ, ಇಲ್ಲಿನ ಗಾಳಿ, ಬೆಳಕು ಸ್ವೀಕರಿಸುತ್ತಿರುವ ಪ್ರತಿಯೊಬ್ಬರು ಹಿಂದೂಗಳು, ಈ ಚಿಂತನೆ ಸಮಾಜದಲ್ಲಿ ಬೇರೂರಬೇಕಿದೆ. ಮುಸಲ್ಮಾನರು ಸಹ ಹಿಂದೂಗಳೇ, ಘೋರಿ, ಆದಿಲ್ ಷಾಹಿ ಮೊದಲಾದವರಿಂದ ಹೆದರಿಯೋ, ಒತ್ತಾಯದಿಂದಲೋ ಅವರು ಮುಸಲ್ಮಾನರಾಗಿದ್ದಾರೆ ಎಂದರು.

ವಿದೇಶದಲ್ಲೂ ಸಂಘ ಕ್ರೀಯಾಶೀಲ

ಡಾ.ಕೇಶವ ಹೆಗಡೆವಾರ ಅವರು ಅಂದು ಮನಸ್ಸು ಮಾಡಿದರೆ ವೈದ್ಯರಾಗಿ ದೊಡ್ಡ ಪ್ರಮಾಣದಲ್ಲಿ ದುಡ್ಡು ಗಳಿಸಬಹುದಿತ್ತು,
ಆದರೆ ಮುಂದೆ ಯಾವತ್ತೂ ಭಾರತ ಪರಕೀಯರ ಆಳ್ವಿಕೆಗೆ ಒಳಪಡದೇ ಸ್ವಾಭಿಮಾನಿಯಾಗಬೇಕು, ಹಿಂದೂ ಸಮಾಜ ಜಾಗೃತವಾದರೆ ಮಾತ್ರ ಇದು ಸಾಧ್ಯ ಎಂದು ಅರಿತು ಮಹಾರಾಣಾ ಪ್ರತಾಪ್ ಸಿಂಹ್ ಅವರ ಜೀವನದಿಂದ ಸ್ಪೂರ್ತಿ ಪಡೆದು ಸಂಘವನ್ನು ರೂಪಿಸಿದರು. ಆಗಲೂ ಟೀಕೆಗೊಳಗಾದರೂ ಸಹ ಡಾ.ಹೆಗಡೆ ಅವರು ಕುಗ್ಗಲಿಲ್ಲ, ಪರಿಣಾಮವಾಗಿ ಕೋಟ್ಯಂತರ ಸ್ವಯಂಸೇವಕರು ಇಂದು ಸಂಘದಲ್ಲಿ ತೊಡಗಿ ಸಂಸ್ಕಾರ ಪಡೆಯುವಂತಾಗಿದೆ, ೫೩ ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸಂಘ ಕ್ರೀಯಾಶೀಲವಾಗಿದೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.