Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರವೇ ಪಂ.ಪುಟ್ಟರಾಜರ ಸಮಗ್ರ ಸಾಹಿತ್ಯ ಸಂಪುಟ ಹೊರತರಲಿ
(ರಾಜ್ಯ ) ಜಿಲ್ಲೆ

ಸರಕಾರವೇ ಪಂ.ಪುಟ್ಟರಾಜರ ಸಮಗ್ರ ಸಾಹಿತ್ಯ ಸಂಪುಟ ಹೊರತರಲಿ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಧಾರವಾಡದಲ್ಲಿ ಪಂ.ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಚನ್ನವೀರ ಶ್ರೀ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಧಾರವಾಡ: ಡಾ.ಪಂಡಿತ ಪುಟ್ಟರಾಜ ಕವಿ ಗವಾಯಿಗಳವರು, ಕನ್ನಡ, ಹಿಂದಿ ಮತ್ತು ಸಂಸ್ಕೃತದಲ್ಲಿ÷ ವಿವಿಧ ಪ್ರಕಾರದ ಸಾಹಿತ್ಯ ರಚಿಸಿದ್ದು, ಸರಕಾರವೇ ಪೂಜ್ಯರ ಸಮಗ್ರ ಸಾಹಿತ್ಯ ಸಂಪುಟ ಪ್ರಕಟಿಸಿ ಅವರ ಸಾಹಿತ್ಯ, ಜನ ಸಾಮಾನ್ಯರಿಗೆ ತಲುಪಿಸುವ ಕೆಲಸ ಮಾಡಲಿ ಎಂದು ಕಡಣಿ ಸಂಸ್ಥಾನ ಹಿರೇಮಠದ ವೇ. ಚನ್ನವೀರ ಸ್ವಾಮಿಗಳು ಗದಗ ಇವರು ಸರಕಾರಕ್ಕೆ ಒತ್ತಾಯಿಸಿದರು.
ಅವರು ಡಾ. ಪಂ.ಪುಟ್ಟರಾಜ ಸೇವಾ ಸಮಿತಿಯು ೨೦ ಅಕ್ಟೋಬರ್ ೨೦೨೪ ರಂದು ಧಾರವಾಡದ ರಂಗಾಯಣದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಪಂ. ಪುಟ್ಟರಾಜ ಸಾಹಿತ್ಯೋತ್ಸವ-೨೪ ಸಮಾರಂಭದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಪಂ.ಪುಟ್ಟರಾಜರ ಹುಟ್ಟು ಹಬ್ಬ ಆಚರಣೆಗೆ ಸರಕಾರ ಚಾಲನೆ ನೀಡಲಿ ಎಂದು ಒತ್ತಾಯಿಸಿದರು.
ಕ.ವಿ.ವಿ.ಲಲಿತಕಲಾ ಹಾಗೂ ಸಂಗೀತ ಮಹಾವಿದ್ಯಾಲಯದ ಸಹಾಯಕ ಉಪನ್ಯಾಸಕ, ಸಾಹಿತಿ ಡಾ, ಎ.ಎಲ್.ದೇಸಾಯಿ, ದಾರವಾಡ ಇವರು ಪೂಜ್ಯರ ಸಮಗ್ರ ಸಾಹಿತ್ಯ ಸೇವೆಯ ಕುರಿತು ಮಾತನಾಡಿ, ಪಂ.ಪಂಚಾಕ್ಷರಿ ಗವಾಯಿಗಳವರ ನಾಟಕ ರಂಗಾಯಣದ ಮೂಲಕ ಪ್ರಯೋಗವಾಗಬೇಕು. ಈ ಕೆಲಸ ಧಾರವಾಡದ ರಂಗಾಯಣದ ನಿರ್ದೇಶಕರರಾದ ರಾಜು ತಾಳಿಕೋಟಿ ಪ್ರಯತ್ನ ಮಾಡಬೇಕು ಎಂದು ವಿನಂತಿಸಿಕೊಂಡರು.
ರಂಗಾಯಣದ ನಿರ್ದೇಶಕ ಡಾ. ರಾಜು ತಾಳಿಕೊಟಿಯವರು ಪೂಜ್ಯ ಗುರು ಪುಟ್ಟರಾಜ ಕವಿಗವಾಯಿಗಳವರೊಂದಿಗಿನ ಒಡನಾಟ ಮತ್ತು ಪೂಜ್ಯರ ವೃತ್ತಿರಂಗಭೂಮಿಯ ಕುರಿತಾದ ಕಾಳಜಿ ಮತ್ತು ತಮ್ಮ ವೃತ್ತಿ ಬದುಕಿನಲ್ಲಿ ಪೂಜ್ಯರ ಆರ್ಶೀವಾದ ಕುರಿತಾಗಿ ಭಾವತುಂಬಿ ಪೂಜ್ಯರನ್ನು ಸ್ಮರಸಿಕೊಂಡರು.
ಸಮಾರಂಭದ ಸಾನಿಧ್ಯವನ್ನು ವಹಿಸಿಕೊಂಡಿದ್ದ ಮನ್ಸೂರಿನ ರೇವಣಸಿದ್ಧೇಶ್ವರ ಮಠದ ಡಾ.ಬಸವರಾಜ ದೇವರು ಮಾತನಾಡಿ, ಪೂಜ್ಯ ಗುರು ಪುಟ್ಟರಾಜರ ಒಡನಾಟದ ಸವಿ ನೆನಪು ಹಂಚಿಕೊಂಡು ಸೇವಾ ಸಮಿತಿಯ ಬೇಡಿಕೆಗೆ ನಾವು ಸಂಪೂರ್ಣ ಬೆಂಬಲಿಸುತ್ತೇವೆ ಮಾತ್ರವಲ್ಲದೇ, ಗುರು ಪುಟ್ಟರಾಜರಿಗೆ ಭಾರತ ರತ್ನ ಪ್ರಶಸ್ತಿಗೆ ಕರ್ನಾಟಕ ಸರಕಾರ ಶಿಫಾರಸು ಮಾಡಬೇಕು ಎಂದು ಹೇಳಿ ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಹೇಳಿದರು.
ಡಾ. ಪಂ.ಪುಟ್ಟರಾಜ ಸೇವಾ ಸಮಿತಿಯ ಗೌರವ ಅಧ್ಯಕ್ಷ ಕೆಂಬಾವಿ ಸಂಸ್ಥಾನ ಹಿರೇಮಠದ ಚನ್ನಬಸವ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿಕೊಂಡಿದ್ದರು.
ಇದೇ ಸಂದರ್ಭದಲ್ಲಿ ‘ರಾಜ್ಯ ಸಂಗೀತ ವಿದ್ವಾನ’ ಪಂ. ಬಸವರಾಜ ಹೆಡಿಗ್ಗೊಂಡ, ರಂಗಾಯಣದ ನೂತನ ನಿರ್ದೇಶಕ ರಾಜು ತಾಳಿಕೋಟಿ ಇವರಿಗೆ ಸನ್ಮಾನಿಸಲಾಯಿತು.
ಎಸ್.ಎಸ್.ಪಾಟೀಲ ಸಂಪಾದಕರು: ವಿಶ್ವದರ್ಶನ ದಿನಪತ್ರಿಕೆ, ಹುಬ್ಬಳ್ಳಿ ವೇದಿಕೆಯಲ್ಲಿ ಇದ್ದರು.
ಡಾ. ಸುರೇಶ ಕಳಸನ್ನವರ ಸ್ವಾಗತಿಸಿದರು, ಬಸವರಾಜ ಹಡಪದ ಕಾರ್ಯಕ್ರಮ ನಿರೂಪಣೆ ಮಾಡಿದರು.

ಪ್ರಶಸ್ತಿ ಪ್ರದಾನ

ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ೨೦೨೪ ನೆಯ ‘ವರ್ಷದ ಶೇಷ್ಠ ಕೃತಿ ರತ್ನ ಪ್ರಶಸ್ತಿ’ ಗೆ ಭಾಜನ ಕೃತಿ ಕರ್ತರಾದ ಭಾತ್ರಂಬದ ಪೂಜ್ಯ ಜಗದ್ಗುರು ಶಿವಯೋಗೀಶ್ವರ ಮಹಾಸ್ವಾಮಿಗಳ ಬೆಳಗಾವಿಯ, ಡಾ. ಪಿ. ನಾಗರಾಜ, ಚಿಂಚನಸೂರನ ಶಿವಪುತ್ರ ಕಂಠಿ, ಕಲಬುರ್ಗಿಯ ಡಾ. ಅಂಬುಜಾ ಎನ್. ಮಳಖೇಡಕರ, ಬಾದಾಮಿ ಸುರೇಶ ಅರಳಿಮರ, ಹುಬ್ಬಳಿಯ ಪದ್ಮಜಾ ಜಯತೀರ್ಥ ಉಮರ್ಜಿ, ಧಾರವಾಡದ ಡಾ. ಈರಣ್ಣ ಇಂಜಗನೇರಿ, ಭೈರಾಪೂರದ ಯಲ್ಲಪ್ಪ ಮ. ಹರ್ನಾಳಗಿ, ಧಾರವಾಡದ ಸರಸ್ವತಿ ರಾ. ಬೋಸಲೆ, ಧಾರವಾಡದ ಡಾ. ವೀಣಾ ಸಂಕನಗೌಡರ ಇವರಿಗೆ ಪ್ರಶಸ್ತಿ ಪ್ರದಾನಮಾಡಲಾಯಿತು.

ಕವಿ ಗೋಷ್ಠಿ

ಮಧ್ಯಾಹ್ನದ ಭೋಜನದ ವಿರಾಮದ ನಂತರ ಶ್ರೀ ಎಂ. ಪಿ. ಎಂ. ಕೊಟ್ರಯ್ಯ ನಿವೃತ್ತ ಪ್ರಾಧ್ಯಾಪಕರು, ಹೂವಿನ ಹಡಗಲಿ ಇವರ ಅಧ್ಯಕ್ಷತೆಯಲ್ಲಿ ಕವಿ ಗೋಷ್ಠಿ ಎರ್ಪಡಿಸಲಾಗಿತ್ತು. ಕಸ್ತೂರಿ ಗಂಜಿಗಟ್ಟಿ. ಪ್ರೊ. ಪ್ರವೀಣ್ ಕುಲಕರ್ಣಿ ಜಮಖಂಡಿ. ವನಶ್ರೀ ಶಿಂಧೆ, ಶಿವರಾಜ ಅರಳಿ, ಮೇಲ್ಮರಿ. ಜಯಶ್ರೀ ಹಿರೇಮಠ, ಧಾರವಾಡ. ಬಸವರಾಜ ಎನ್ ಹಡಪದ, ಶಾಂತಾ ಹೆಚ್, ಬಸವಂತಿ ಇಂಗಳಳ್ಳಿ ಇವರು ಪೂಜ್ಯರ ಕುರಿತು ರಚಿಸಿದ ಸ್ವರಚಿತ ಕವನ ವಾಚನ ಮಾಡಿದರು.    

ಸಮಾರೋಪ ಸಮಾರಂಭ

ಸಂಜೆ ನಡೆದ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ಜಗದ್ಗುರು ಶಿವಯೋಗೀಶ್ವರ ಮಹಾ ಸ್ವಾಮಿಗಳು ಜಗದ್ಗುರು ನಿರಂಜನ ಸಂಸ್ಥಾನ ಮಠ ಭಾತಂಬ್ರಾ ಬೀದರ ಇವರು ವಹಿಸಿಕೊಂಡಿದ್ದರು.
ಪ್ರೊ. ಸಿದ್ಧಲಿಂಗೇಶ ಉ. ಸಜ್ಜನಶೆಟ್ಟರ, ಗದಗ ಇವರು ಕನ್ನಡ ಸಾಹಿತ್ಯ ಪರಂಪರೆ ಕುರಿತು ಮಾತನಾಡಿದರು.
ಸೌಮ್ಯ ಸುರೇಶ ಧಾರವಾಡ ಜಿಲ್ಲಾ ಅಧ್ಯಕ್ಷರು, ಡಾ. ಪಂ.ಪುಟ್ಟರಾಜ ಸೇವಾ ಸಮಿತಿ, ಮಹಿಳಾ ಘಟಕ, ದಾವಣಗೆರೆ ಇವರುಗಳು ವೇದಿಕೆಯಲ್ಲಿ ಇದ್ದರು.
ಇದೇ ಸಂದರ್ಭದಲ್ಲಿ ತೀರ್ಪುಗಾರರ ಮೆಚ್ಚಿನ ಕೃತಿ ಅಭಿನಂದನಾ ಪ್ರಶಸ್ತಿ’ಗೆ ಭಾಜನರಾದ ಮಹಾಂತೇಶ ಕುಂಬಾರ (ಎಮ್ಮಾರ್ಕೆ) ರನ್ನ ಬೆಳಗಲಿ, ಎ. ಆರ್. ಪಂಪಣ್ಣ, ವಟ್ಟಮ್ಮನಹಳ್ಳಿ, ರೂಪಾದೇವಿ ಬಂಗಾರ, ಸೇಡಂ, ಮಾಲತೇಶ ಅಂಗೂರ, ಹಾವೇರಿ, ಶ್ರೀಮತಿ ರಂಜಿತಾ ಮಹಾಜನ ಮತ್ತು ವಿನುತ ಹಂಚಿನಮನಿ ಧಾರವಾಡ, ಇವರಿಗೆ ಅಭಿನಂದಿಸಲಾಯಿತು.
‘ವಿದುಷಿ’ ರೋಹಿಣಿ ಇಮಾರತಿ ಧಾರವಾಡ, ‘ವಿದುಷಿ’ ಡಾ. ಸುಮಾ ಹಡಪದ ಹಳಿಯಾಳ, ಧಾರವಾಡ ‘ವಿದುಷಿ’ ವಿಜಯಲಕ್ಷ್ಮಿ ಬಸಯ್ಯ ಬನ್ನಿಗೋಳಮಠ, ಹುಬ್ಬಳ್ಳಿ ಇವರುಗಳಿಗೆ ಪುಟ್ಟರಾಜ ಸಂಗೀತ/ನೃತ್ಯ ಸೇವಾ ಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಳಗಿನ ಮತ್ತು ಸಂಜೆ ಸಭಾ ಕಾರ್ಯಕ್ರಮದ ನಂತರ ಭೂಮಿಕಾ ಮಹಿಳಾ ಸಮಾಜ, ಗದಗ. ಅಭಿವ್ಯಕ್ತಿ ಕಲಾ ತಂಡ ಧಾರವಾಡ. ಶ್ರೀ ಗಣೇಶ ನೃತ್ಯ ಶಾಲೆ ಧಾರವಾಡ. ಪಂ. ಪುಟ್ಟರಾಜ ಸಂಗೀತ ಶಾಲೆ ಧಾರವಾಡ. ಕಲಾ ವೈಭವ ಸಂಸ್ಥೆ, ಲಕ್ಷ್ಮೇಶ್ವರ. ಬೆಳ್ಳಿಚುಕ್ಕಿ ಸಂಸ್ಕೃತಿಕ ಅಕಾಡೆಮಿ, ಬೆಳಗಾವಿ. ನಾಟ್ಯ ಲೋಕ ಕಲೆ ಹಾಗೂ ಸಾಂಸ್ಕೃತಿಕ ಸಂಸ್ಥೆ ಹುಬ್ಬಳ್ಳಿ. ವಿಶಾರದ ನೃತ್ಯಾಲಯ ಹುಬ್ಬಳ್ಳಿ. ಸ್ವರಾಮೃತ ಸಾಂಸ್ಕೃತಿ ಸಂಸ್ಥೆ ಮುಂಡರಗಿ. ಅಖಿಲ ಭಾರತ ಕನ್ನಡ ಮಕ್ಕಳ ಮನೆ, ಗದಗ ತಂಡಗಳಿಂದ ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳು ನಡೆದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.