ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ ಹಾಗೂ ಸ್ವಾತಂತ್ರ್ಯಕ್ಕಾಗಿ ಮಾಡಿದ ಹೋರಾಟಗಳು ಇಂದಿನ ಮಕ್ಕಳಿಗೆ ಸ್ಪೂರ್ತಿದಾಯಕಗಳಾಗಿವೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.
ಪಟ್ಟಣದಲ್ಲಿ ಬುಧವಾರ ಕಿತ್ತೂರು ರಾಣಿ ಚನ್ನಮ್ಮಳ ೨೪೬ ನೇ ಜಯಂತ್ಯುತ್ಸವ ಹಾಗೂ ೨೦೦ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಲಘಾಣದ ಎಸ್.ಬಿ.ಪಾಟೀಲ ವಿಶೇಷ ಉಪನ್ಯಾಸ ನೀಡಿದರು. ಸುನೀಲ ಮಾಗಿ ಹಾಗೂ ವಿದ್ಯಾರ್ಥಿನಿ ಸ್ನೇಹಾ ಬಿರಾದಾರ ತನ್ನ ಚುಟುಕು ಮಾತುಗಳಿಂದ ಎಲ್ಲರ ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ನೂತನ ವೃತ್ತಕ್ಕೆ ಪೂಜೆ ಸಲ್ಲಿಸಲಾಯಿತು.
ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ಯಲಗಾರ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ತಾಲ್ಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಗುರುರಾಜ್ ಆಕಳವಾಡಿ. ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ (ಜಲಕತ್ತಿ), ತಾಲ್ಲೂಕು ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಬಂಡೆಪ್ಪ ಬಿರಾದಾರ(ದಿಂಡವಾರ), ವ್ಹಿ.ಕೆ.ಪಾಟೀಲ, ಶ್ರೀಶೈಲ ಮುಳಜಿ, ಪ್ರಕಾಶ ದಾನಗೊಂಡ, ವಿನೋದ ಪಾಟೀಲ, ಶ್ರೀಶೈಲ ದಾನಗೊಂಡ, ನಿಂಗು ಯಂಭತ್ನಾಳ, ಮಾಂತೇಶ ವಂದಾಲ, ವಿರೇಶ ಕುದರಿ, ರಮೇಶ ಮಾಳನೂರ, ಕಾಶೀಪತಿ ಕುದರಿ, ಪಂಚಾಕ್ಷರಿ ಮಿಂಚನಾಳ, ಕಾಶೀನಾಥ ರಾಮಗೊಂಡ, ಸೋಮು ದೇವೂರ, ಬಸವರಾಜ ಇಂಡಿ, ಮಡು ದಿಂಡವಾರ, ಮುನೀರ್ ಅಹ್ಮದ್ ಮಳಖೇಡ, ರಾಜು ಮೆಟಗಾರ, ಸಂಪತ್ ಜಮಾದಾರ ಹಾಗೂ ಸಿದ್ಧೇಶ್ವರ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಸಮುದಾಯದ ಪ್ರಮುಖರು ಇದ್ದರು.
ಮೆರವಣಿಗೆ
ಕಾರ್ಯಕ್ರಮದ ಅಂಗವಾಗಿ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣರ ಭಾವಚಿತ್ರದ ಭವ್ಯ ಮೆರವಣಿಗೆ ಮೊಹರೆ ಹಣಮಂತ್ರಾಯ ವೃತ್ತದಿಂದ ಆರಂಭಗೊಂಡು ಚೆನ್ನಮ್ಮ ವೃತ್ತದಲ್ಲಿ ಕೊನೆಗೊಂಡಿತು. ಮೆರವಣಿಗೆಯಲ್ಲಿ ಚೆನ್ನಮ್ಮ ಹಾಗೂ ರಾಯಣ್ಣನ ವೇಷಧಾರಿಗಳು ಸೊಗಸಾಗಿ ಕಂಡು ಬಂದರು.

