ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕಿತ್ತೂರು ರಾಣಿ ಚೆನ್ನಮ್ಮಳ ವೀರಗಾಥೆಯನ್ನು ನಮ್ಮ ಮಕ್ಕಳಿಗೆ ತಿಳಿಸೋಣ, ನಮ್ಮ ನಾಡಿನ, ನಮ್ಮ ದೇಶದ ವೀರಪರಂಪರೆಯ ಕಥೆಯನ್ನು ಮುಂದಿನ ತಲೆಮಾರುಗಳಿಗೆ ಪಸರಿಸೋಣ ಎಂದು ಚಿತ್ತಾಪೂರ ಕರದಾಳ ಗ್ರಾಮದ ಸರಕಾರಿ ಪ್ರೌಢಶಾಲೆ ಮುಖ್ಯಗುರು ಪಂಡಿತ ನೆಲ್ಲಗಿ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಹಮ್ಮಿಕೊಂಡ ವೀರ ರಾಣಿ ಕಿತ್ತೂರ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಕೃಷಿಕ ಸಮಾಜದ ಅದ್ಯಕ್ಷ ಶಿವಪ್ಪಗೌಡ ಬಿರಾದಾರ ಮಾತನಾಡಿ, ಹೋರಾಟ, ದೈರ್ಯ, ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಏನು ಎಂಬುದನ್ನು ೨೪೬ ವರ್ಷಗಳ ಹಿಂದೆಯೇ ತಿಳಿಸಿಕೊಟ್ಟ ಮಹಾನ್ ತಾಯಿ, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವೇದಿಕೆಯ ಮೇಲೆ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಇದ್ದರು.
ಕಾರ್ಯಕ್ರಮಕ್ಕೂ ಮುನ್ನ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದ ಬಳಿ ಪೂಜೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಸಿಡಿಪಿಒ ಶಂಭುಲಿಂಗ ಹಿರೇಮಠ, ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ, ಮಾಜಿ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಸಮಾಜ ಕಲ್ಯಾಣಾಧಿಕಾರಿ ಭವಾನಿ ಪಾಟೀಲ, ಗ್ರೇಡ್ ೨ ತಹಶೀಲ್ದಾರ ಇಂದಿರಾಬಾಯಿ ಬಳಗಾನೂರ, ಸೋಮನಗೌಡ ಬಿರಾದಾರ, ಪಂಚಮಸಾಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ, ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ರಮೇಶ ಯಾಳಗಿ, ಪ್ರತಿಭಾ ಚಳ್ಳಗಿ, ಸುನಂದಾ ಯಂಪೂರೆ, ಅಪರ ಸರಕಾರಿ ವಕೀಲ ಬಿ.ಜಿ.ನೆಲ್ಲಗಿ, ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ, ಎಸ್.ಬಿ.ಖಾನಾಪೂರ, ವೈ.ಸಿ ಮಯೂರ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ವ್ಹಿ.ಬಿ.ಕುರುಡೆ, ಶಿವಪ್ಪಗೌಡ ಬಿರಾದಾರ, ಶಾಂತೂ ರಾಣಾಗೋಳ, ಭೀಮಾಶಂಕರ ನೇರಲಗಿ ಸೇರಿದಂತೆ ಸಮಾಜದ ಹಿರಿಯರು, ಪ್ರಮುಖರು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಸರಕಾರಿ ಅಪರ ವಕೀಲರಾದ ಭೀಮಾಶಂಕರ ನೆಲ್ಲಗಿ ಸ್ವಾಗತಿಸಿದರು. ಪ್ರತಿಭಾ ಚಳ್ಳಗಿ ವಚನಾಮೃತ ಹೇಳಿದರು. ಶಿಕ್ಷಕ ಶೇವು ರಾಠೋಡ ನಿರೂಪಿಸಿದರು. ಸಮಾಜದ ಪ್ರ.ಕಾರ್ಯದರ್ಶಿ ಆನಂದ ಶಾಬಾದಿ ವಂದಿಸಿದರು.

